AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯಾ ಜಗದೀಶ್​ ಡೆತ್​ ನೋಟ್​ ಪತ್ತೆ; ಶಾಕಿಂಗ್​ ವಿಷಯ ತಿಳಿಸಿದ ಪತ್ನಿ ರೇಖಾ

‘ಯಜಮಾನರು ಹೊರಟು ಹೋಗಿದ್ದಾರೆ. ಆ ನೋವು ನಮಗೆ ಕಡೆಯ ತನಕ ಇದ್ದೇ ಇರುತ್ತದೆ. ಕೊನೇ ಪಕ್ಷ ಅವರ ಸಾವಿಗೆ ನ್ಯಾಯ ಸಿಕ್ಕರೆ ಅವರ ಮನಸ್ಸಿಗೆ ಸಮಾಧಾನ ಆಗುತ್ತೆ ಅಂತ ನಾವು ಅಂದುಕೊಂಡಿದ್ದೇವೆ. ತನಿಖೆಗೆ ಎಲ್ಲ ದಾಖಲೆಗಳನ್ನು ಕೊಟ್ಟಿದ್ದೇನೆ. ದಯವಿಟ್ಟು ನಮಗೆ ನ್ಯಾಯ ಕೊಡಿಸಿ’ ಎಂದು ಸೌಂದರ್ಯಾ ಜಗದೀಶ್​ ಅವರ ಪತ್ನಿ ರೇಖಾ ಕಣ್ಣೀರು ಹಾಕಿದ್ದಾರೆ.

ಸೌಂದರ್ಯಾ ಜಗದೀಶ್​ ಡೆತ್​ ನೋಟ್​ ಪತ್ತೆ; ಶಾಕಿಂಗ್​ ವಿಷಯ ತಿಳಿಸಿದ ಪತ್ನಿ ರೇಖಾ
ರೇಖಾ ಜಗದೀಶ್​
Follow us
ಮದನ್​ ಕುಮಾರ್​
|

Updated on: May 24, 2024 | 6:29 PM

ನಿರ್ಮಾಪಕ ಸೌಂದರ್ಯಾ ಜಗದೀಶ್ (Soundarya Jagadeesh) ಅವರು ಏಪ್ರಿಲ್​ 14ರಂದು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಈಗ ಅವರ ಸಾವಿನ ಬಗ್ಗೆ ಪತ್ನಿ ರೇಖಾ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡೆತ್​ ನೋಟ್ (Soundarya Jagadeesh Death Note)​ ಬಗ್ಗೆ ವಿಷಯ ತಿಳಿಸಿದ್ದಾರೆ. ‘ಮೊದಲು ತಾಯಿ ನಿಧನರಾದರು. ಆಮೇಲೆ 15 ದಿನಕ್ಕೆ ಯಜಮಾನರು ತೀರಿಕೊಂಡರು. ಆ ಶಾಕ್​ನಲ್ಲಿ ಏನಾಯಿತು ಎಂಬುದು ನಮಗೆ ಗೊತ್ತಿಲ್ಲ. ಈ ಮನೆಯನ್ನು ನಾನು ಮತ್ತು ಅವರು ಸೇರಿ ಕಟ್ಟಿದ್ದು. ಇಂದು ಅವರು ಇಲ್ಲ ಎಂದಾಗ ಈ ಮನೆಯಲ್ಲಿ ನಮಗೆ ಇರೋಕೆ ಆಗುತ್ತಿಲ್ಲ. ಈಗ ಶ್ರೀರಂಗಪಟ್ಟಣದಲ್ಲಿ ಪೂಜೆ ಮಾಡಿ ಅವರ ಬಟ್ಟೆಗಳನ್ನು ಅಲ್ಲಿ ಬಿಡಬೇಕು ಅಂತ ಅರ್ಚಕರು ಹೇಳಿದ್ದಾರೆ. ಹಾಗಾಗಿ ಹಳೇ ಬಟ್ಟೆಗಳನ್ನು ತೆಗೆಯುವಾಗ ಡೆಟ್​ ನೋಟ್​ ಸಿಕ್ಕಿತು’ ಎಂದು ರೇಖಾ ಜಗದೀಶ್​ (Rekha Jagadeesh) ಹೇಳಿದ್ದಾರೆ.

‘ಜಗದೀಶ್​ ಬರೆದ ಡೆತ್​ ನೋಟ್​ ನೋಡಿ ತುಂಬ ನೋವಾಯಿತು ಮತ್ತು ಶಾಕ್​ ಆಯ್ತು. ಬಿಸ್ನೆಸ್​ ಪಾರ್ಟ್ನರ್​ಗಳ ಬಗ್ಗೆ ಅವರು ಬರೆದಿದ್ದಾರೆ. ಅನ್ಯಾಯ ಆಗಿದೆ ಅಂತ ಬರೆದಿದ್ದಾರೆ. ತಮಗೆ ತುಂಬ ಕಾಟ, ಕಿರುಕುಳು ಕೊಡುತ್ತಾರೆ ಅಂತ ಈ ಮೊದಲು ಒಮ್ಮೆ ನನ್ನ ಬಳಿ ಹೇಳಿದ್ದರು. ಆದರೆ ಈ ಮಟ್ಟಕ್ಕೆ ಆಗುತ್ತೆ ಅಂತ ನಮಗೆ ಗೊತ್ತಿರಲಿಲ್ಲ. ಏನೇ ಇದ್ದರೂ ನಮ್ಮ ಜೊತೆ ಹಂಚಿಕೊಳ್ಳಿ ಅಂತ ಧೈರ್ಯ ತುಂಬಿದ್ದೆವು. ಪಾರ್ಟ್ನರ್​ ಸುರೇಶ್​ ಅವರಿಂದ ತುಂಬ ಕಿರುಕುಳ ಆಗಿದೆ’ ಎಂದಿದ್ದಾರೆ ರೇಖಾ ಜಗದೀಶ್​.

ಇದನ್ನೂ ಓದಿ: ಜೆಟ್​ಲ್ಯಾಗ್ ಮಾರಲು ಮುಂದಾಗಿದ್ದ ಸೌಂದರ್ಯ ಜಗದೀಶ್? ಮಾಡಿಕೊಂಡ ಲಾಸ್ ಅಷ್ಟಿಷ್ಟಲ್ಲ

‘ನನಗೆ ಮತ್ತು ನನ್ನ ಮಗನಿಗೆ ಬೆದರಿಕೆ ಇದೆ. ಅಷ್ಟು ಗಟ್ಟಿಯಾಗಿ ಹುಲಿ ರೀತಿ ಇದ್ದ ಅವರನ್ನು ಕೊನೆಕೊನೆಗೆ ಇಷ್ಟು ಸೈಲೆಂಟ್​ ಆಗುವಂತೆ ಮಾಡಿ ಈ ಹಂತಕ್ಕೆ ತೆಗೆದುಕೊಂಡು ಬಂದವನು ನಾಳೆ ನನಗೆ ಮತ್ತು ನನ್ನ ಮಗನಿಗೆ ಏನು ಮಾಡುತ್ತಾನೋ ಗೊತ್ತಿಲ್ಲ. ನನಗೆ ಆ ಭಯ ಇದೆ. ಅವರು ಬರೆದಿದ್ದನ್ನೆಲ್ಲ ನಾನು ವೀಕ್ಷಿಸಿದ ಮೇಲೆ ಪಾರ್ಟ್ನರ್​ಗಳಿಂದ ನನ್ನ ಗಂಡನಿಗೆ ತುಂಬಾ ಕಿರುಕುಳ ಆಗಿದೆ. ಫೋರ್ಚರಿ ಕೂಡ ಮಾಡಿದ್ದಾರೆ’ ಎಂದು ರೇಖಾ ಜಗದೀಶ್​ ಅಳಲು ತೋಡಿಕೊಂಡಿದ್ದಾರೆ.

‘ಖಾಲಿ ಪೇಪರ್​ಗೆ ಸಹಿ ಹಾಕಿಸಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಚೆಕ್​ಗಳಿಗೆ ಸೈನ್​ ಹಾಕಿಸಿಕೊಂಡಿದ್ದಾರೆ. ಹೀಗೆಲ್ಲ ಬ್ಲ್ಯಾಕ್​ ಮೇಲ್​ ಮಾಡಿದ್ದಕ್ಕೆ ನಮ್ಮ ಯಜಮಾನರು ಹೋಗಿದ್ದಾರೆ. ನಾವು ನಾಲ್ಕು ಜನ ಒಂದೇ ಗೋಡಿನ ಹಕ್ಕಿಗಳ ರೀತಿ ಇದ್ದೆವು. ನಮ್ಮನ್ನು ಬಿಟ್ಟು ಅವರು ಹೋಗುತ್ತಿರಲಿಲ್ಲ. ಸುರೇಶ್​ ಇದೆಲ್ಲವನ್ನೂ ಮಾಡಿದ್ದಾರೆ. ಅಕೌಂಟ್​ ಪಾಸ್​ವರ್ಡ್​ ಕೂಡ ಅವರೇ ಇಟ್ಟುಕೊಂಡು ಹೀಗೆಲ್ಲ ಮಾಡಿದರು. ನಮ್ಮ ಮನೆಯನ್ನು ಈ ಸ್ಥಿತಿಗೆ ತಂದು ಬಿಟ್ಟಿದ್ದಾರೆ. ಲಾಸ್ಟ್​ ಕಾಲ್​, ಮೆಸೇಜ್​ ಅವರದ್ದೇ ಇದೆ. ಫೋರ್ಜರಿ ಮಾಡಿದ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡಿದ್ದೇನೆ. ತನಿಖೆ ಬಳಿಕ ಎಲ್ಲವೂ ನಿಮಗೆ ಗೊತ್ತಾಗುತ್ತದೆ’ ಎಂದು ರೇಖಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ