ಸೌಂದರ್ಯ ಜಗದೀಶ್​ ಸಾವಿನ ಹಿಂದಿರುವ 2 ಅನುಮಾನದ ಬಗ್ಗೆ ಸ್ನೇಹಿತರ ಸ್ಪಷ್ಟನೆ

ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ನಡುವೆ ಕೆಲವು ಅನುಮಾನಗಳು ಕೂಡ ಹುಟ್ಟಿಕೊಂಡಿವೆ. ಆ ಬಗ್ಗೆ ಸೌಂದರ್ಯ ಜಗದೀಶ್​ ಅವರ ಸ್ನೇಹಿತ ಶ್ರೇಯಸ್​ ಪ್ರತಿಕ್ರಿಯಿಸಿದ್ದಾರೆ. ಕೆಲವು ಅಂತೆ-ಕಂತೆಗಳಿಗೆ ಅವರು ಪುರ್ಣವಿರಾಮ ಹಾಕಿದ್ದಾರೆ.

ಸೌಂದರ್ಯ ಜಗದೀಶ್​ ಸಾವಿನ ಹಿಂದಿರುವ 2 ಅನುಮಾನದ ಬಗ್ಗೆ ಸ್ನೇಹಿತರ ಸ್ಪಷ್ಟನೆ
ಸೌಂದರ್ಯ ಜಗದೀಶ್​, ಶ್ರೇಯಸ್​
Follow us
|

Updated on: Apr 14, 2024 | 2:44 PM

ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್​ (Soundarya Jagadish) ಅವರು ನಿಧನರಾಗಿದ್ದು ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ. ದರ್ಶನ್​, ಉಪೇಂದ್ರ, ‘ನೆನಪಿರಲಿ’ ಪ್ರೇಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಜೊತೆ ಉತ್ತಮವಾದ ಒಡನಾಟ ಹೊಂದಿದ್ದ ಜಗದೀಶ್​ ಅವರು ಏಕಾಏಕಿ ಸಾವಿಗೆ (Soundarya Jagadish Death) ಶರಣಾಗಿದ್ದಾರೆ. ಇಂದು (ಏಪ್ರಿಲ್​ 11) ಮುಂಜಾನೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್​ ಅವರ ಸಾವಿನ ಕುರಿತಂತೆ ಎರಡು ಪ್ರಮುಖ ಅನುಮಾನಗಳ ಸೃಷ್ಟಿ ಆಗಿದ್ದವು. ಅವುಗಳಿಗೆ ಸ್ನೇಹಿತ ಶ್ರೇಯಸ್​ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಮೊದಲ ಅನುಮಾನ:

ಆರ್ಥಿಕ ಸಂಕಷ್ಟದಿಂದ ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ಕೆಲವರ ಅನುಮಾನ. ಯಾಕೆಂದರೆ, ಕೆಲವು ದಿನಗಳ ಹಿಂದೆ ಬ್ಯಾಂಕ್​ನವರು ಜಗದೀಶ್​ಗೆ ನೋಟಿಸ್​ ನೀಡಿ, ಮನೆಯನ್ನು ಸೀಜ್​ ಮಾಡಲು ಬಂದಿದ್ದರು ಎಂಬ ಮಾಹಿತಿ ಇದೆ. ಆ ಕಾರಣದಿಂದ ಜಗದೀಶ್​ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಶಂಕೆ ಕೆಲವರದ್ದು, ಅದಕ್ಕೆ ಗೆಳೆಯ ಶ್ರೇಯಸ್​ ಉತ್ತರಿಸಿದ್ದಾರೆ. ‘ಬ್ಯಾಂಕ್​ ನೋಟಿಸ್​ಗೂ ಆತ್ಮಹತ್ಯೆಗೂ ಸಂಬಂಧ ಇಲ್ಲ. ನೋಟಿಸ್​ ಇತ್ಯಾದಿ ಎಲ್ಲ ಸುಮಾರು ದಿನದಿಂದ ಇರುವಂಥದ್ದು. ಬಿಸ್ನಿಸ್​ ಬೇರೆ, ಇದು ಬೇರೆ. ಅವರೆಡಕ್ಕೂ ಸಂಬಂಧ ಇಲ್ಲ’ ಎಂದು ಶ್ರೇಯಶ್​ ಹೇಳಿದ್ದಾರೆ.

ಇದನ್ನೂ ಓದಿ: ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ಹೆಗ್ಗೋಡು ನಿಧನ

ಎರಡನೇ ಅನುಮಾನ:

ಸೌಂದರ್ಯ ಜಗದೀಶ್​ ಅವರಿಗೆ ಹೃದಯಾಘಾತ ಆಗಿರಬಹುದಾ ಅಥವಾ ಏನಾದರೂ ಆರೋಗ್ಯ ಸಮಸ್ಯೆ ಇದ್ದರಬಹುದಾ ಎಂಬ ಶಂಕೆ ಸಹ ವ್ಯಕ್ತವಾಗಿದೆ. ಆ ಬಗ್ಗೆ ಕೂಡ ಶ್ರೇಯಸ್​ ಪ್ರತಿಕ್ರಿಯಿಸಿದ್ದಾರೆ. ‘ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಂಡರು. ಕೂಡಲೇ ನಾವು ಆಸ್ಪತ್ರೆಗೆ ಕರೆದುಕೊಂಡು ಬಂದ್ವಿ. ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯವರು ತಿಳಿಸಿದರು. ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕಾರಣ ಏನು ಎಂಬುದನ್ನು ನಾವು ಸಡನ್​ ಆಗಿ ಹೇಳೋಕೆ ಆಗಲ್ಲ. ಹೃದಯಾಘಾತ ಆಗಿದೆ ಎಂಬುದೆಲ್ಲ ಸುಳ್ಳು. ಆ ರೀತಿ ತಪ್ಪು ಮಾಹಿತಿ ಯಾರು ಕೊಟ್ಟಿದ್ದಾರೋ ಗೊತ್ತಿಲ್ಲ. ಹೃದಯಾಘಾತ ಅಂತ ನಾವು ಎಲ್ಲಿಯೂ ಹೇಳಿಲ್ಲ’ ಎಂದಿದ್ದಾರೆ ಸ್ನೇಹಿತ ಶ್ರೇಯಸ್​.

ಸೌಂದರ್ಯ ಜಗದೀಶ್​ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ ಮತ್ತು ಮಕ್ಕಳು ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಬಾಕಿ ಇದೆ. ಜಗದೀಶ್​ ನಿಧನದಿಂದ ಆಪ್ತರು ಮತ್ತು ಕುಟುಂಬದವರಿಗೆ ತೀವ್ರ ದುಃಖ ಉಂಟಾಗಿದೆ. ಸೌಂದರ್ಯ ಜಗದೀಶ್​ ಅಗಲಿಕೆಗೆ ಚಿತ್ರತಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ