AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮಕ್ಕೆ ಸಿದ್ಧತೆ, ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿ

Puneeth Namana: ಪುನೀತ ನಮನ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟನಟಿಯರು ಆಗಮಿಸಲಿದ್ದಾರೆ. ಕಮಲ್ ಹಾಸನ್, ಧನುಷ್ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ.

Puneeth Rajkumar: ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮಕ್ಕೆ ಸಿದ್ಧತೆ, ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿ
ಪುನೀತ್​ ರಾಜಕುಮಾರ್
TV9 Web
| Edited By: |

Updated on: Nov 06, 2021 | 3:43 PM

Share

ನವೆಂಬರ್ 16ರಂದು ನಡೆಯುವ ‘ಪುನೀತ ನಮನ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಟಿವಿ9ನೊಂದಿಗೆ ಅವರು ಮಾತನಾಡಿದರು. ಡಾ.ರಾಜಕುಮಾರ್ ಕುಟುಂಬದ ಜತೆ ಚರ್ಚೆ ಮಾಡಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಚಿತ್ರೋದ್ಯಮದ ಗಣ್ಯರು, ಕಲಾವಿದರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ವಿ.ನಾಗೇಂದ್ರ ಪ್ರಸಾದ್‌ರಿಂದ 5 ನಿಮಿಷದ ಹಾಡು ತಯಾರಾಗಲಿದ್ದು, ಪುನೀತ್ ನಡೆದು ಬಂದ ಹಾದಿಯ ಚಿತ್ರಣ ಇರುತ್ತದೆ. 2000 ಜನರು ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಕೋರಲು ಯೋಜಿಸಲಾಗಿದೆ ಎಂದು ಜಯರಾಜ್ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ದಕ್ಷಿಣ  ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ‘‘ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟನಟಿಯರು ಆಗಮಿಸಲಿದ್ದಾರೆ. ಕಮಲ್ ಹಾಸನ್, ಧನುಷ್ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಅವರು ನುಡಿದಿದ್ದಾರೆ. ಮಧ್ಯಾಹ್ನ 3 ಘಂಟೆಯಿಂದ‌ ಕಾರ್ಯಕ್ರಮ ಆರಂಭ ಆಗಲಿದೆ. ಸ್ಯಾಕ್ಸೋಪೋನ್ ಮೂಲಕ ಕಾರ್ಯಕ್ರಮ ಆರಂಭ ಆಗುತ್ತದೆ ಎಂದು ಜಯರಾಜ್ ಹೇಳಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಆಹ್ವಾನಿಸಿದ ಸಾ.ರಾ ಗೋವಿಂದು: ಪುನೀತ ನಮನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಆಹ್ವಾನಿಸಿದ್ದಾರೆ. ನವೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ.

ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ನಮನ: ಅಕಾಲಿಕ ನಿಧನದಿಂದ ದೂರವಾದ ನಟ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಸೋಮವಾರ ಪುನೀತ್ 11ನೇ ದಿನದ ಕಾರ್ಯ; ಪುನೀತ್ ನಿವಾಸದಲ್ಲಿ ಕುಟುಂಬಸ್ಥರಿಂದ ಚರ್ಚೆ: ಸೋಮವಾರ ನಟ ಪುನೀತ್ 11ನೇ ದಿನ ಕಾರ್ಯ ಹಿನ್ನಲೆಯಲ್ಲಿ ಅದರ ತಯಾರಿಯ ಕುರಿತು ಪುನೀತ್ ನಿವಾಸದಲ್ಲಿ ಶಿವಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಿದ್ದಾರೆ. ಕಾರ್ಯಕ್ಕೆ ಗಣ್ಯರ ಆಹ್ವಾನ ಕುರಿತು ಚರ್ಚೆ ನಡೆಸಲಾಗಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸೋ ಸಾಧ್ಯತೆ ಇದೆ. ರಾಜಕೀಯ ಗಣ್ಯರು, ಪ್ರಮುಖ ನಟರು, ಆತ್ಮೀಯರು ಹಾಗೂ ಹತ್ತಿರದ ಸಂಬಂಧಿಗಳಿಗೆ ಮಾತ್ರ ಆಹ್ವಾನ ನೀಡುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯದ ತಯಾರಿ ಬಗ್ಗೆ ಕುಟುಂಬದವರ ಜೊತೆ ಶಿವರಾಜ್ ಕುಮಾರ್ ಚರ್ಚೆ ನಡೆಸಿದ್ದಾರೆ. ಇದರೊಂದಿಗೆ ಬಂದೋಬಸ್ತ್, ಸಂಚಾರ ವ್ಯವಸ್ಥೆ ಬಗ್ಗೆ ಪೊಲೀಸರಿಂದ ಸಿದ್ದತೆ ನಡೆಸಲಾಗುತ್ತಿದ್ದು, ವಾಹನಗಳ ಎಂಟ್ರಿ ಹಾಗೂ ಎಕ್ಸಿಟ್ ಗೆ ಬ್ಯಾರಿಕೇಡ್ ಹಾಕುವ ಬಗ್ಗೆ ತಯಾರಿ ಮಾಡಲಾಗುತ್ತಿದೆ. ಸದಾಶಿವ ನಗರ ಸಂಚಾರಿ ಪೊಲೀಸರಿಂದ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ