AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಬಿ ಜನ್ಮದಿನ; ಒಂದೇ ದಿನ 21 ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದ ಗಾಯಕ

SP Balasubrahmanyam Birth Anniversary:1966ರಲ್ಲಿ ಎಸ್​ಪಿಬಿ ಮೊದಲ ಹಾಡನ್ನು ಹಾಡಿದ್ದರು. ಅವರ ಮೊದಲ ಗಾಯನ ಮೂಡಿ ಬಂದಿದ್ದು ತೆಲುಗಿನಲ್ಲಿ. ನಂತರ ಕನ್ನಡಕ್ಕೆ ಕಾಲಿಟ್ಟರು.

ಎಸ್​ಪಿಬಿ ಜನ್ಮದಿನ; ಒಂದೇ ದಿನ 21 ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದ ಗಾಯಕ
ಎಸ್​​ಪಿಬಿ
TV9 Web
| Edited By: |

Updated on: Jun 04, 2022 | 7:35 AM

Share

ಭಾರತ ಚಿತ್ರರಂಗ ಕಂಡ ಮಹಾನ್​ ಗಾಯಕರಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಮ್ (S. P. Balasubrahmanyam)​ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಇಂದು (ಜೂನ್ 4) ಅವರ ಜನ್ಮದಿನ. ಅವರು ಬದುಕಿದ್ದರೆ ಇಂದು 76ನೇ ವರ್ಷದ ಹುಟ್ಟುಹಬ್ಬ  ಆಚರಿಸಿಕೊಳ್ಳುತ್ತಿದ್ದರು. ಈಗ ಅವರಿಲ್ಲದೆ ಎರಡನೇ ವರ್ಷದ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳು ಹರಿದುಬಂದಿದೆ. ಸಾಕಷ್ಟು ಸೆಲೆಬ್ರಿಟಿಗಳು ತಮ್ಮಿಷ್ಟದ ಗಾಯಕನನ್ನು ನೆನೆದಿದ್ದಾರೆ.

1946ರಲ್ಲಿ ಜೂನ್​ 4ರಂದು ಮದ್ರಾಸ್​ನಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಮ್​ ಜನಿಸಿದರು. ಇಂಜಿನಿಯರ್​ ಆಗಬೇಕೆಂದುಕೊಂಡಿದ್ದ ಅವರು, ಸಂಗೀತದ ಮೇಲೂ ಅಪಾರ ಆಸಕ್ತಿ ಹೊಂದಿದ್ದರು. 1966ರಲ್ಲಿ ಎಸ್​ಪಿಬಿ ಮೊದಲ ಹಾಡನ್ನು ಹಾಡಿದ್ದರು. ಅವರ ಮೊದಲ ಗಾಯನ ಮೂಡಿ ಬಂದಿದ್ದು ತೆಲುಗಿನಲ್ಲಿ. ನಂತರ ಕನ್ನಡಕ್ಕೆ ಕಾಲಿಟ್ಟರು.

ಎಸ್​ಪಿಬಿಗೆ ಹಿಟ್​ ಸಿಕ್ಕಿದ್ದು 1969ರಲ್ಲಿ. ಹಿರಿಯ ನಟ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ತಮ್ಮ ಅಡಿಮೈಪೆನ್ ಸಿನಿಮಾದಲ್ಲಿ ಎಸ್​ಪಿಬಿ ಹಾಡಬೇಕು ಎಂದು ಇಚ್ಛಿಸಿದ್ದರು. ಈ ಚಿತ್ರದ ‘ಆಯಿರಾಮ್​ ನಿಲವೆ.. ಹಾಡು ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ನಂತರ ಎಸ್​ಪಿಬಿ ಹಿಂದಿರುಗಿ ನೋಡಲೇ ಇಲ್ಲ. ಎಸ್​.ಪಿ. ಬಾಲಸುಬ್ರಹ್ಮಣ್ಯಮ್​ ಅವರು ಕನ್ನಡ, ತಮಿಳು ತೆಲುಗು, ಹಿಂದಿ ಸೇರಿ 16 ಭಾಷೆಗಳಲ್ಲಿ 40 ಸಾವಿರ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ
Image
ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
Image
SPB Birth Anniversary: ಕೆ. ಕಲ್ಯಾಣ್​ ನೆನಪಿನ ಪ್ರತಿ ಪುಟದಲ್ಲೂ ಎಸ್​ಪಿಬಿ ಸದಾ ಜೀವಂತ
Image
SPB Birth Anniversary: ಮೂಲತಃ ತೆಲುಗಿನವರಾದರೂ ಎಸ್​ಪಿಬಿಗೆ ಕರ್ನಾಟಕದ ಮೇಲಿತ್ತು ಬೆಟ್ಟದಷ್ಟು ಪ್ರೀತಿ; ಕಾರಣ ಏನು?

ಹಲವು ಭಾಷೆಗಳನ್ನು ಮಾತನಾಡುವುದನ್ನು ಕಷ್ಟಪಟ್ಟಾದರೂ ಕಲಿಯಬಹುದು. ಆದರೆ, ಬೇರೆ ಭಾಷೆಯ ಸೊಗಡನ್ನು ಅರ್ಥ ಮಾಡಿಕೊಂಡು ಹಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಎಸ್​ಪಿಬಿಗೆ ಅದು ನೀರು ಕುಡಿದಷ್ಟೇ ಸುಲಭದ ಮಾತಾಗಿತ್ತು. ಅವರು 16 ಭಾಷೆಗಳಲ್ಲಿ ಹಾಡಿ ಭೇಷ್​ ಎನಿಸಿಕೊಂಡರು.

ಇದನ್ನೂ ಓದಿ:  ಎಸ್​ಪಿಬಿ ಮಗ ಚರಣ್​ಗೆ ನನ್ನ ಕಂಡರೆ ಅಸೂಯೆ; ರಾಜೇಶ್​ ಕೃಷ್ಣನ್​

ಇನ್ನು, ಎಸ್​ಪಿಬಿ ಹೆಸರಲ್ಲಿ ಹಲವು ದಾಖಲೆ ಕೂಡ ಇವೆ. ಅವರು ಒಂದೇ ದಿನ 21 ಕನ್ನಡ ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದರು. ಇಲ್ಲಿಯವರೆಗೆ ಈ ದಾಖಲೆ ಮುರಿಯೋಕೆ ಯಾವ ಗಾಯಕನಿಂದಲೂ ಸಾಧ್ಯವಾಗಿಲ್ಲ. ಎಸ್​ಪಿಬಿ ಅವರಿಗೆ ಆರು ಬಾರಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ.

ಎಸ್​ಪಿಬಿ ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಸಂಗೀತ ಪ್ರೇಮಿಗಳ ಹೃದಯದಲ್ಲಿ ಸುಮಧುರ ಗೀತೆಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಹಾಡುಗಳು ಇಂದಿಗೂ ಕೇಳುಗರ ಕಿವಿಯಲ್ಲಿ ಗುನುಗುತ್ತಿವೆ. ಅವರನ್ನು ಇಂದು ಹಾಡುಗಳ ಮೂಲಕ ಎಲ್ಲರೂ ನೆನೆಯುತ್ತಿದ್ದಾರೆ. ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು