AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB Birth Anniversary: 16 ಭಾಷೆ, 40 ಸಾವಿರ ಹಾಡು; ಜನ್ಮದಿನದಂದು ಮಹಾನ್​ ಸಾಧಕ ಎಸ್​ಪಿಬಿ ನೆನೆದ ಅಭಿಮಾನಿಗಳು

1966ರಲ್ಲಿ ಎಸ್​ಪಿಬಿ ಮೊದಲ ಹಾಡನ್ನು ಹಾಡಿದ್ದರು. ಅವರ ಮೊದಲ ಗಾಯನ ಮೂಡಿ ಬಂದಿದ್ದು, ತೆಲುಗಿನಲ್ಲಿ. ನಂತರ ಕನ್ನಡಕ್ಕೆ ಪದಾರ್ಪಣೆ ಮಾಡಿದರು.

SPB Birth Anniversary: 16 ಭಾಷೆ, 40 ಸಾವಿರ ಹಾಡು; ಜನ್ಮದಿನದಂದು ಮಹಾನ್​ ಸಾಧಕ ಎಸ್​ಪಿಬಿ ನೆನೆದ ಅಭಿಮಾನಿಗಳು
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ
ರಾಜೇಶ್ ದುಗ್ಗುಮನೆ
|

Updated on:Jun 03, 2022 | 9:00 PM

Share

ಇಂದು (ಜೂನ್​ 4) ಭಾರತ ಚಿತ್ರರಂಗ ಕಂಡ ಮಹಾನ್​ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಮ್​ ಅವರ ಜನ್ಮದಿನ. ಅವರು ಬದುಕಿದ್ದರೆ ಇಂದು 75ನೇ ವಸಂತಕ್ಕೆ ಕಾಲಿಡುತ್ತಿದ್ದರು. ಈಗ ಅವರಿಲ್ಲದೆ ಮೊದಲ ವರ್ಷದ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳ ಮಹಾಪೂರ ಹರಿದುಬಂದಿದೆ. ಸಾಕಷ್ಟು ಸೆಲೆಬ್ರಿಟಿಗಳು ತಮ್ಮಿಷ್ಟದ ಗಾಯಕನನ್ನು ನೆನೆದಿದ್ದಾರೆ.

1946ರಲ್ಲಿ ಜೂನ್​ 4ರಂದು ಮದ್ರಾಸ್​ನಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಮ್​ ಜನಿಸಿದರು. ಇಂಜಿನಿಯರ್​ ಆಗಬೇಕೆಂದುಕೊಂಡಿದ್ದ ಅವರು, ಸಂಗೀತದ ಮೇಲೂ ಅಪಾರ ಆಸಕ್ತಿ ಹೊಂದಿದ್ದರು. 1966ರಲ್ಲಿ ಎಸ್​ಪಿಬಿ ಮೊದಲ ಹಾಡನ್ನು ಹಾಡಿದ್ದರು. ಅವರ ಮೊದಲ ಗಾಯನ ಮೂಡಿ ಬಂದಿದ್ದು, ತೆಲುಗಿನಲ್ಲಿ. ನಂತರ ಕನ್ನಡಕ್ಕೆ ಪದಾರ್ಪಣೆ ಮಾಡಿದರು.

ಎಸ್​ಪಿಬಿಗೆ ಹಿಟ್​ ಸಿಕ್ಕಿದ್ದು 1969ರಲ್ಲಿ. ಹಿರಿಯ ನಟ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ತಮ್ಮ ಅಡಿಮೈಪೆನ್ (Adimaipenn)​ ಸಿನಿಮಾದಲ್ಲಿ ಎಸ್​ಪಿಬಿ ಹಾಡಬೇಕು ಎಂದು ಇಚ್ಛಿಸಿದ್ದರು. ಈ ಚಿತ್ರದ ‘ಆಯಿರಾಮ್​ ನಿಲವೆ.. ಹಾಡು ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ನಂತರ ಎಸ್​ಪಿಬಿ ಹಿಂದಿರುಗಿ ನೋಡಲೇ ಇಲ್ಲ. ಎಸ್​.ಪಿ. ಬಾಲಸುಬ್ರಹ್ಮಣ್ಯಮ್​ ಅವರು ಕನ್ನಡ, ತಮಿಳು ತೆಲುಗು, ಹಿಂದಿ ಸೇರಿ 16 ಭಾಷೆಗಳಲ್ಲಿ 40 ಸಾವಿರ ಹಾಡನ್ನು ಹಾಡಿದ್ದಾರೆ.

ಹಲವು ಭಾಷೆಗಳನ್ನು ಮಾತನಾಡುವುದನ್ನು ಕಷ್ಟಪಟ್ಟಾದರೂ ಕಲಿಯಬಹುದು. ಆದರೆ, ಬೇರೆ ಭಾಷೆಯ ಸೊಗಡನ್ನು ಅರ್ಥ ಮಾಡಿಕೊಂಡು ಹಾಡುವುದು ಇದೆಯಲ್ಲ ಅದು ಅಷ್ಟು ಸುಲಭದ ಮಾತಲ್ಲ. ಆದರೆ, ಎಸ್​ಪಿಬಿಗೆ ಅದು ನೀರು ಕುಡಿದಷ್ಟೇ ಸುಲಭದ ಮಾತಾಗಿತ್ತು. ಅವರು 16 ಭಾಷೆಗಳಲ್ಲಿ ಹಾಡಿ ಭೇಷ್​ ಎನಿಸಿಕೊಂಡರು.

ಇನ್ನು, ಎಸ್​ಪಿಬಿ ಹೆಸರಲ್ಲಿ ಹಲವು ದಾಖಲೆ ಕೂಡ ಇವೆ. ಅವರು ಒಂದೇ ದಿನ 21 ಕನ್ನಡ ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ದಾಖಲೆ ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಎಸ್​ಪಿಬಿ ಅವರಿಗೆ ಆರು ಬಾರಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ಎಸ್​ಪಿಬಿ ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಸಂಗೀತ ಪ್ರೇಮಿಗಳ ಹೃದಯದಲ್ಲಿ ಸುಮಧುರ ಗೀತೆಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಹಾಡುಗಳು ಇಂದಿಗೂ ಕೇಳುಗರ ಕಿವಿಯಲ್ಲಿ ಗುನುಗುತ್ತಿವೆ. ಅವರನ್ನು ಇಂದು ಹಾಡುಗಳ ಮೂಲಕ ಎಲ್ಲರೂ ನೆನೆಯುತ್ತಿದ್ದಾರೆ. ಆನ್​ಲೈನ್​ಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ಎಸ್​ಪಿಬಿ ಅವರನ್ನು ಸ್ಮರಿಸಲಾಗುತ್ತಿದೆ.

ಇದನ್ನೂ ಓದಿ:

ನಿಧನರಾಗುವುದಕ್ಕೂ ಮುನ್ನ ಎಸ್.​ಪಿ. ಬಾಲಸುಬ್ರಹ್ಮಣ್ಯಂ ಮಾಡಿದ್ದರು ದೇವರು ಮೆಚ್ಚುವ ಕೆಲಸ

Published On - 7:31 am, Fri, 4 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ