AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB Birth Anniversary: ಮೂಲತಃ ತೆಲುಗಿನವರಾದರೂ ಎಸ್​ಪಿಬಿಗೆ ಕರ್ನಾಟಕದ ಮೇಲಿತ್ತು ಬೆಟ್ಟದಷ್ಟು ಪ್ರೀತಿ; ಕಾರಣ ಏನು?

Happy Birthday SP Balasubrahmanyam: ಮುಂದಿನ ಜನ್ಮ ಇದ್ದರೆ ನಾನು ಕರ್ನಾಟಕದಲ್ಲಿಯೇ ಜನಿಸಲು ಇಷ್ಟಪಡುತ್ತೇನೆ ಎಂದು ಅವರು ಹಲವು ಬಾರಿ ಹೇಳಿಕೊಂಡಿದ್ದರು. ಅವರಿಗೆ ಕರುನಾಡಿನ ಮೇಲೆ ಎಷ್ಟು ಅಭಿಮಾನ ಇತ್ತು ಎಂಬುದಕ್ಕೆ ಈ ಮಾತು ಸಾಕ್ಷಿ.

SPB Birth Anniversary: ಮೂಲತಃ ತೆಲುಗಿನವರಾದರೂ ಎಸ್​ಪಿಬಿಗೆ ಕರ್ನಾಟಕದ ಮೇಲಿತ್ತು ಬೆಟ್ಟದಷ್ಟು ಪ್ರೀತಿ; ಕಾರಣ ಏನು?
ಎಸ್​.ಪಿ. ಬಾಲಸುಬ್ರಹ್ಮಣ್ಯಂ
ಮದನ್​ ಕುಮಾರ್​
|

Updated on: Jun 04, 2021 | 8:31 AM

Share

ಸಂಗೀತ ಲೋಕದಲ್ಲಿ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಸಾಟಿ ಆಗುವಂತಹ ಇನ್ನೊಬ್ಬ ಗಾಯಕ ಇರಲು ಸಾಧ್ಯವೇ ಇಲ್ಲ. ಅಷ್ಟು ದೊಡ್ಡ ಸಾಧನೆ ಈ ಮಹಾನ್​ ಗಾಯಕನದ್ದು. ‘ಈ ಭೂಮಿ ತಿರುಗುವವರೆಗೂ ಪ್ರತಿ ದಿನ ಒಂದಲ್ಲಾ ಒಂದು ಕಡೆ ಎಸ್​ಪಿಬಿ ಅವರ ಧ್ವನಿ ಕೇಳಿಸುತ್ತಲೇ ಇರುತ್ತದೆ’ ಎನ್ನುತ್ತಾರೆ ಸಂಗೀತ ನಿರ್ದೇಶಕ ಹಂಸಲೇಖ. ಅಂದರೆ, ಕಂಠದ ಮೂಲಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರು ಸದಾ ಜೀವಂತವಾಗಿರುತ್ತಾರೆ ಎಂಬುದರಲ್ಲಿ ಅನುಮಾನವೇ ಇಲ್ಲ. ಇಂದು (ಜೂ.4) ಎಸ್​ಪಿಬಿ ಅವರ 75ನೇ ವರ್ಷದ ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳೆಲ್ಲರೂ ತಮ್ಮ ನೆಚ್ಚಿನ ಗಾಯಕನ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

1946ರಲ್ಲಿ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಎಸ್​ಪಿಬಿ ಜನಿಸಿದರು. ಅವರ ಮಾತೃಭಾಷೆ ತೆಲುಗು. ಆದರೆ ಎಂದಿಗೂ ಅವರು ಒಂದು ಭಾಷೆಗೆ ಸೀಮಿತವಾದ ವ್ಯಕ್ತಿ ಆಗಿರಲಿಲ್ಲ. ಬರೋಬ್ಬರಿ 16 ಭಾಷೆಗಳಲ್ಲಿ ನಿರರ್ಗಳವಾಗಿ ಹಾಡುವ ಮೂಲಕ ಅವರು ಎಲ್ಲ ಭಾಷೆಯ ಜನರಿಗೂ ಹತ್ತಿರವಾದರು. ಕನ್ನಡದಲ್ಲಿಯೂ ಕೂಡ ಸಾವಿರಾರು ಗೀತೆಗಳನ್ನು ಹಾಡಿದರು. ತೆಲುಗು ಮಾತೃಭಾಷೆ ಆಗಿದ್ದರೂ, ತಾವು 16 ಭಾಷೆಗಳಲ್ಲಿ ಹಾಡಿದ್ದರೂ ಕೂಡ ಎಸ್​ಪಿಬಿಗೆ ಕನ್ನಡದ ಮೇಲೆ ಅಪಾರ ಪ್ರೀತಿ. ಕರ್ನಾಟಕ ಎಂದರೆ ಪಂಚಪ್ರಾಣವಾಗಿತ್ತು. ಅದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದರು.

ಅಷ್ಟಕ್ಕೂ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕರ್ನಾಟಕ ಮತ್ತು ಕರ್ನಾಟಕದ ಜನರ ಮೇಲೆ ಯಾಕೆ ಎಷ್ಟು ಅಭಿಮಾನ? ಉತ್ತರ ಸಿಂಪಲ್​; ಕನ್ನಡಿಗರು ತೋರಿದ ಪ್ರೀತಿ. ಹೌದು, ಸ್ವತಃ ಎಸ್​ಪಿಬಿ ಅವರೇ ಹೇಳಿಕೊಂಡಂತೆ ಅವರಿಗೆ ಕರ್ನಾಟಕದಲ್ಲಿ ಸಿಕ್ಕಷ್ಟು ಪ್ರೀತಿ-ಅಭಿಮಾನ ಬೇರೆಲ್ಲಿಯೂ ಸಿಕ್ಕಿಲ್ಲ. ಹಲವು ಭಾಷೆಗಳಲ್ಲಿ ಹಾಡಿದ್ದರೂ, ಹೋದಲ್ಲೆಲ್ಲಾ ಅಭಿಮಾನಿ ಬಳಗ ಸೃಷ್ಟಿ ಆಗಿದ್ದರೂ ಕೂಡ ಅವರಿಗೆ ಕರ್ನಾಟಕದ ಅಭಿಮಾನಿಗಳಿಂದ ಸಿಗುತ್ತಿದ್ದ ಪ್ರೀತಿ ವಿಶೇಷ. ಹಾಗಾಗಿ ಮುಂದಿನ ಜನ್ಮ ಇದ್ದರೆ ನಾನು ಕರ್ನಾಟಕದಲ್ಲಿಯೇ ಜನಿಸಲು ಇಷ್ಟಪಡುತ್ತೇನೆ ಎಂದು ಅವರು ಹಲವು ಭಾರಿ ಹೇಳಿಕೊಂಡಿದ್ದರು. ಅವರಿಗೆ ಕರ್ನಾಟಕದ ಮೇಲೆ ಎಷ್ಟು ಅಭಿಮಾನ ಇತ್ತು ಎಂಬುದಕ್ಕೆ ಈ ಮಾತು ಸಾಕ್ಷಿ.

2020ರ ಸೆ.25ರಂದು ಅನಾರೋಗ್ಯಕ್ಕೆ ತುತ್ತಾಗಿ ಎಸ್​ಪಿಬಿ ಅವರು ಇಹಲೋಕ ತ್ಯಜಿಸಿದರು. ಆಗ ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಆರೋಗ್ಯ ಸಮಸ್ಯೆಯಿಂದ ಬಳಲಿದ ಅವರು 52 ದಿನ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು ಗುಣಮುಖರಾಗಿ ಬರಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದರು. ಅಂತಿಮವಾಗಿ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. ಭೌತಿಕವಾಗಿ ಅವರು ನಮ್ಮನ್ನೆಲ್ಲ ಅಗಲಿದ್ದರೂ ಕೂಡ ಹಾಡುಗಳ ರೂಪದಲ್ಲಿ ನಮ್ಮೊಡನೆ ಉಸಿರಾಡುತ್ತಿದ್ದಾರೆ. ಆ ಮಹಾನ್​ ಗಾಯಕ, ತಮ್ಮದೇ ಆಸೆಯಂತೆ ಕರುನಾಡಿನಲ್ಲಿ ಹುಟ್ಟಿಬರಲಿ ಎಂದು ಬಯಸುತ್ತ ಅಭಿಮಾನಿಗಳೆಲ್ಲರೂ ಅವರು ಜನ್ಮದಿನ ಆಚರಿಸುತ್ತಿದ್ದಾರೆ.

ಇದನ್ನೂ ಓದಿ:

ನಿಧನರಾಗುವುದಕ್ಕೂ ಮುನ್ನ ಎಸ್.​ಪಿ. ಬಾಲಸುಬ್ರಹ್ಮಣ್ಯಂ ಮಾಡಿದ್ದರು ದೇವರು ಮೆಚ್ಚುವ ಕೆಲಸ

SPB Birth Anniversary: 16 ಭಾಷೆ, 40 ಸಾವಿರ ಹಾಡು; ಜನ್ಮದಿನದಂದು ಮಹಾನ್​ ಸಾಧಕ ಎಸ್​ಪಿಬಿ ನೆನೆದ ಅಭಿಮಾನಿಗಳು

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ