AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB Death Anniversary: ಎಸ್​ಪಿಬಿ ನಿಧನರಾಗಿ ಒಂದು ವರ್ಷ; ಮಹಾನ್​ ಗಾಯಕನ ಪುಣ್ಯಸ್ಮರಣೆಗೆ ವಿಶೇಷ ಹಾಡು, ನುಡಿ ನಮನ

ಎಸ್​ಪಿಬಿ ಪುಣ್ಯತಿಥಿ: ಮಹಾನ್​ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಭೌತಿಕವಾಗಿ ನಮ್ಮನ್ನೆಲ್ಲ ಅಗಲಿ ಇಂದಿಗೆ (ಸೆ.25) ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಅವರಿಗೆ ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ.

SPB Death Anniversary: ಎಸ್​ಪಿಬಿ ನಿಧನರಾಗಿ ಒಂದು ವರ್ಷ; ಮಹಾನ್​ ಗಾಯಕನ ಪುಣ್ಯಸ್ಮರಣೆಗೆ ವಿಶೇಷ ಹಾಡು, ನುಡಿ ನಮನ
ಎಸ್​.ಪಿ. ಬಾಲಸುಬ್ರಹ್ಮಣ್ಯಂ
TV9 Web
| Edited By: |

Updated on: Sep 25, 2021 | 10:49 AM

Share

2020ರ ಸೆ.25. ಅದು ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಅಭಿಮಾನಿಗಳ ಪಾಲಿಗೆ ಅತ್ಯಂತ ನೋವಿನ ದಿನ. ಬಹಳ ದಿನಗಳಿಂದ ಚೈನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್​ಪಿಬಿ ಬದುಕಿ ಬರಲಿ ಎಂದು ಕೋಟ್ಯಂತರ ಅಭಿಮಾನಿಗಳು ಮಾಡಿದ್ದ ಪ್ರಾರ್ಥನೆ ಅಂದು ಫಲಿಸಲೇ ಇಲ್ಲ. ಆ ಘಟನೆ ನಡೆದು ಇಂದಿಗೆ ಒಂದು ವರ್ಷ ಕಳೆದಿದೆ. ಸಿನಿಮಾ ಸಂಗೀತ ಲೋಕದಲ್ಲಿ ದಿಗ್ಗಜ ಗಾಯಕರಾಗಿದ್ದ ಎಸ್​.ಪಿ.ಬಿ. ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ.

ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್​ಪಿಬಿ ಅವರು ಇಹಲೋಕ ತ್ಯಜಿಸಿದ್ದರೂ ಕೂಡ ಹಾಡುಗಳ ಮೂಲಕ ಸದಾ ಜೀವಂತವಾಗಿದ್ದಾರೆ. ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು ನಮನ ಸಲ್ಲಿಸುತ್ತಿದ್ದಾರೆ. ವಿಶೇಷ ಹಾಡುಗಳ ಮೂಲಕ ಬಾಲಸುಬ್ರಹ್ಮಣ್ಯಂ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಸಿನಿಸಂಗೀತ ಕ್ಷೇತ್ರದ ಹಲವರು ಟ್ವೀಟ್​ ಮಾಡಿ ತಮ್ಮ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕನ್ನಡದ ‘ಅಕ್ಷಿ’ ಚಿತ್ರಕ್ಕೆ ಇತ್ತೀಚೆಗೆ ರಾಷ್ಟ್ರಪ್ರಶಸ್ತಿ ಒಲಿದು ಬಂತು. ಆ ಚಿತ್ರದ ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್​ ಅವರು ರಚಿಸಿದ ‘ಎಸ್​ಪಿಬಿ ನಮ್ಮ ಎಸ್​ಪಿಬಿ..’ ಹಾಡು ಬಿಡುಗಡೆ ಆಗಿದೆ. ಕಲಾದೇಗುಲ ಶ್ರೀನಿವಾಸ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆಗೆ ಖ್ಯಾತ ಗಾಯಕರಾದ ಹೇಮಂತ್​ ಕುಮಾರ್​​ ಮತ್ತು ಎಂ.ಡಿ. ಪಲ್ಲವಿ ಧ್ವನಿ ನೀಡಿದ್ದಾರೆ. ಈ ಹಾಡಿನ ಮೂಲಕ ಅವರನ್ನು ಸ್ಮರಿಸಿಕೊಳ್ಳಲಾಗುತ್ತಿದೆ.

ಮಾಜಿ ಕ್ರಿಕೆಟಿಗ ವಿವಿಎಸ್​ ಲಕ್ಷ್ಮಣ್​ ಕೂಡ ಬಾಲಸುಬ್ರಹ್ಮಣ್ಯಂ ಅವರಿಗೆ ನುಡಿ ನಮನ ಸಲ್ಲಿಸಿದ್ದಾರೆ. ‘ಒಂದು ಹಾಡಿಗೆ ಕೊನೆ ಎಂಬುದಿಲ್ಲ. ಅದು ನಮ್ಮೊಂದಿಗೆ ಮುಂದುವರಿಯುತ್ತದೆ ಅಂತ ನೀವು ಹೇಳಿದ್ರಿ. ಅದೇ ರೀತಿ ನಿಮಗೂ ಕೊನೆ ಇಲ್ಲ. ನಿಮ್ಮ ಪರಂಪರೆ ಮುಂದುವರೆಯುತ್ತದೆ. ಲೆಜೆಂಡರಿ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೊದಲ ವರ್ಷದ ಪುಣ್ಯತಿಥಿಯ ನಮನಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ