AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ

19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ
ವಿಜಯ್-ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Aug 07, 2023 | 11:16 AM

Share

ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅಭಿಮಾನಿಗಳಿಗೂ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನಾ ಮೃತಪಟ್ಟಿದ್ದಾರೆ.

ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರ ಮಗಳು ಸ್ಪಂದನಾ. ವಿಜಯ್ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. 2007ರ ಆಗಸ್ಟ್ 26ರಂದು ಇವರು ಹಸಮಣೆ ಏರಿದ್ದರು. ಇನ್ನು, 19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಜಯ್ ಹಾಗೂ ಸ್ಪಂದನಾ ಬ್ಯಾಂಕಾಕ್​​ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ಹೃದಯಾಘಾತ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್​​ನಲ್ಲೇ ನಡೆಯಲಿದೆ. ಮಂಗಳವಾರ (ಆಗಸ್ಟ್​​ 8) ಅವರ ಮೃತದೇಹ ಬೆಂಗಳೂರಿಗೆ ಬರಲಿದೆ.

ಇದನ್ನೂ ಓದಿ: Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಸ್ಪಂದನಾ ನಿಧನ ವಾರ್ತೆ ತಿಳಿದು ಇಡೀ ಸ್ಯಾಂಡಲ್​ವುಡ್ ಮರುಗಿದೆ. ಸ್ಪಂದನಾ ನಿಧನ ವಾರ್ತೆಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಸ್ಪಂದನಾ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದರು. 2016ರಲ್ಲಿ ರಿಲೀಸ್ ಆದ ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ವಿಜಯ್ ರಾಘವೇಂದ್ರಗೆ ಜೊತೆಯಾಗಿ ಸ್ಪಂದನಾ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ