AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ

19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ
ವಿಜಯ್-ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Aug 07, 2023 | 11:16 AM

Share

ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅಭಿಮಾನಿಗಳಿಗೂ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನಾ ಮೃತಪಟ್ಟಿದ್ದಾರೆ.

ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರ ಮಗಳು ಸ್ಪಂದನಾ. ವಿಜಯ್ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. 2007ರ ಆಗಸ್ಟ್ 26ರಂದು ಇವರು ಹಸಮಣೆ ಏರಿದ್ದರು. ಇನ್ನು, 19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಜಯ್ ಹಾಗೂ ಸ್ಪಂದನಾ ಬ್ಯಾಂಕಾಕ್​​ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ಹೃದಯಾಘಾತ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್​​ನಲ್ಲೇ ನಡೆಯಲಿದೆ. ಮಂಗಳವಾರ (ಆಗಸ್ಟ್​​ 8) ಅವರ ಮೃತದೇಹ ಬೆಂಗಳೂರಿಗೆ ಬರಲಿದೆ.

ಇದನ್ನೂ ಓದಿ: Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಸ್ಪಂದನಾ ನಿಧನ ವಾರ್ತೆ ತಿಳಿದು ಇಡೀ ಸ್ಯಾಂಡಲ್​ವುಡ್ ಮರುಗಿದೆ. ಸ್ಪಂದನಾ ನಿಧನ ವಾರ್ತೆಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಸ್ಪಂದನಾ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದರು. 2016ರಲ್ಲಿ ರಿಲೀಸ್ ಆದ ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ವಿಜಯ್ ರಾಘವೇಂದ್ರಗೆ ಜೊತೆಯಾಗಿ ಸ್ಪಂದನಾ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ