AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ; ಏನಿದರ ಮಹತ್ವ?

ವಿಜಯ್ ರಾಘವೇಂದ್ರ ಅವರ ಮಗ ಶೌರ್ಯ ಅವರು ಪೂಜೆ ನೆರವೇರಿಸಲಿದ್ದಾರೆ. ಪೂಜೆ ಬಳಿಕ ಕುಟುಂಬ ಸ್ಪಂದನಾ ಅಸ್ಥಿಯೊಂದಿಗೆ ಶ್ರೀರಂಗಪಟ್ಟಣಕ್ಕೆ ತೆರಳಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಹಾದು ಹೋದ ಕಾವೇರಿ ನದಿಯಲ್ಲಿ ಕುಟುಂಬ ಅಸ್ಥಿ ಬಿಡಲಿದೆ.

ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ; ಏನಿದರ ಮಹತ್ವ?
ವಿಜಯ್-ಸ್ಪಂದನಾ
ಪ್ರಶಾಂತ್​ ಬಿ.
| Edited By: |

Updated on: Aug 11, 2023 | 10:43 AM

Share

ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಮೃತಪಟ್ಟು ಇಂದಿಗೆ (ಆಗಸ್ಟ್ 11) ಐದು ದಿನ ಕಳೆದಿದೆ. ಅವರ ಅಂತ್ಯ ಸಂಸ್ಕಾರ ನಡೆದು ಮೂರು ದಿನ ಪೂರ್ಣಗೊಂಡಿದೆ. ಸ್ಪಂದನಾ ಕುಟುಂಬಸ್ಥರಿಂದ ಹಾಲುತುಪ್ಪ ಬಿಡುವ ಕಾರ್ಯ ಇಂದು ನಡೆಯಲಿದೆ. ಶ್ರೀರಾಮಪುರದ ಹರಿಶ್ಚಂದ್ರಘಾಟ್​​ನಲ್ಲಿ ಕುಟುಂಬಸ್ಥರ ಪೂಜೆ ಮಾಡಲಿದ್ದಾರೆ. ಅಸ್ಥಿ ಬಿಡುವ ಕಾರ್ಯಕ್ಕೂ ಮುನ್ನ ಕುಟುಂಬಸ್ಥರಿಂದ ಪೂಜೆ ನಡೆಯಲಿದೆ. ವಿಜಯ್​ ರಾಘವೇಂದ್ರ (Vijay Raghavendra), ಶಿವರಾಂ ಕುಟುಂಬಸ್ಥರು ಪೂಜೆಯಲ್ಲಿ ಭಾಗಿ ಆಗಲಿದ್ದಾರೆ.

ಸ್ಪಂದನಾ ಅವರು ಆಗಸ್ಟ್ 6ರ ರಾತ್ರಿ ನಿಧನ ಹೊಂದಿದರು. ಅವರು ಬ್ಯಾಂಕಾಕ್​ಗೆ ತೆರಳಿದ್ದ ವೇಳೆ ಹೃದಯಾಘಾತ ಆಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಕುಟುಂಬದವರು ಬ್ಯಾಂಕಾಕ್​ಗೆ ತೆರಳಿ ಸ್ಪಂದನಾ ಪಾರ್ಥಿವ ಶರೀರವನ್ನು ತೆಗೆದುಕೊಂಡು ಬಂದರು. ಆಗಸ್ಟ್ 9ರಂದು ಬೆಂಗಳೂರಿನ ಶ್ರೀರಾಮಪುರದ ಹರಿಶ್ಚಂದ್ರಘಾಟ್​​ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ಮಾಡಾಗಿದೆ. ಇಂದು ಪೂಜೆ ನಡೆಯಲಿದೆ. ಸ್ಪಂದನಾಗೆ ಇಷ್ಟವಾದ ಪದಾರ್ಥಗಳನ್ನಿಟ್ಟು ಕುಟುಂಬದವರು ಪೂಜೆ ಮಾಡಲಿದ್ದಾರೆ.

ಅಸ್ಥಿ ಬಿಡುವ ಕಾರ್ಯ

ವಿಜಯ್ ರಾಘವೇಂದ್ರ ಅವರ ಮಗ ಶೌರ್ಯ ಅವರು ಪೂಜೆ ನೆರವೇರಿಸಲಿದ್ದಾರೆ. ಪೂಜೆ ಬಳಿಕ ಕುಟುಂಬ ಸ್ಪಂದನಾ ಅಸ್ಥಿಯೊಂದಿಗೆ ಶ್ರೀರಂಗಪಟ್ಟಣಕ್ಕೆ ತೆರಳಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಹಾದು ಹೋದ ಕಾವೇರಿ ನದಿಯಲ್ಲಿ ಕುಟುಂಬ ಅಸ್ಥಿ ಬಿಡಲಿದೆ. ಈ ಕಾರ್ಯದಲ್ಲಿ ಕುಟುಂಬದ 50 ಜನರು ಭಾಗಿ ಆಗಲಿದ್ದಾರೆ. ಬೆಳಗ್ಗೆ 11 ನಂತರ ಕಾರ್ಯಕ್ರಮ ನಡೆಯಲಿದೆ.

ಪ್ರಾಮುಖ್ಯತೆ ಏನು?

ಕಾವೇರಿ ನದಿಯಲ್ಲಿ ಅದರಲ್ಲೂ ಶ್ರೀರಂಗಪಟ್ಟಣದಲ್ಲಿ ಅಸ್ಥಿ ಬಿಟ್ಟರೆ ಮೃತರಿಗೆ ಮುಕ್ತಿ ಸಿಗಲಿದ ಎಂಬ ನಂಬಿಕೆ ಹಿಂದೂ ಸಂಪ್ರದಾಯದಲ್ಲಿ ಇದೆ. ಹೀಗಾಗಿ, ಇಲ್ಲಿ ಅಸ್ಥಿ ಬಿಡಲು ಕುಟುಂಬದವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಒಡೆಯಿತು ಸ್ಪಂದನಾ ಮಗ ಶೌರ್ಯನ ಕಣ್ಣೀರ ಕಟ್ಟೆ; ಸಮಾಧಾನ ಮಾಡಲು ವಿಜಯ್-ಮುರಳಿ ಹರಸಾಹಸ

ದುಃಖದಲ್ಲೇ ಇದೆ ಕುಟುಂಬ

ವಿಜಯ್ ರಾಘವೇಂದ್ರ, ಶೌರ್ಯ, ಶ್ರೀಮುರಳಿ, ಸ್ಪಂದನಾ ತಂದೆ ಶಿವರಾಂ ಸೇರಿ ಕುಟುಂಬದ ಯಾರಿಗೂ ದುಃಖ ಕಡಿಮೆ ಆಗಿಲ್ಲ. ಸ್ಪಂದನಾ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಈ ನೋವಿನಲ್ಲೇ ಅಸ್ಥಿ ಬಿಡುವ ಕಾರ್ಯ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!