AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 8ರಂದು ಭಾರತಕ್ಕೆ ರವಾನೆ ಆಗಲಿದೆ ಸ್ಪಂದನಾ ಮೃತದೇಹ; ಯಾವಾಗ ಅಂತ್ಯಕ್ರಿಯೆ?

Spandana Vijay Raghavendra: ಮಂಗಳವಾರ (ಆಗಸ್ಟ್​ 8) ಸಂಜೆ ವೇಳೆಗೆ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಪಾರ್ಥಿವ ಶರೀರವು ಬೆಂಗಳೂರು ತಲುಪುವ ಸಾಧ್ಯತೆ ಇದೆ. ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಆಗಸ್ಟ್​ 8ರಂದು ಭಾರತಕ್ಕೆ ರವಾನೆ ಆಗಲಿದೆ ಸ್ಪಂದನಾ ಮೃತದೇಹ; ಯಾವಾಗ ಅಂತ್ಯಕ್ರಿಯೆ?
ಸ್ಪಂದನಾ ವಿಜಯ್​ ರಾಘವೇಂದ್ರ
ಮದನ್​ ಕುಮಾರ್​
|

Updated on: Aug 07, 2023 | 4:44 PM

Share

ಸ್ಯಾಂಡಲ್​ವುಡ್​ ನಟ ವಿಜಯ್​ ರಾಘವೇಂದ್ರ (Vijay Raghavendra) ಅವರ ಮಡದಿ ಸ್ಪಂದನಾ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಕುಟುಂಬದವರ ಜೊತೆ ಬ್ಯಾಂಕಾಕ್​ ತೆರಳಿದ್ದ ಸ್ಪಂದನಾಗೆ ಆ.6ರಂದು ಹೃದಯಾಘಾತ (Heart Attack) ಸಂಭವಿಸಿತು. ಅವರ ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ. ಮಂಗಳವಾರ (ಆಗಸ್ಟ್​ 8) ಸಂಜೆ ವೇಳೆಗೆ ಪಾರ್ಥಿವ ಶರೀರವು ಬೆಂಗಳೂರು ತಲುಪುವ ಸಾಧ್ಯತೆ ಇದೆ. ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸದ್ಯದ ಮಾಹಿತಿ ಪ್ರಕಾರ, ಬುಧವಾರ (ಆಗಸ್ಟ್​ 9) ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಅಂತ್ಯಕ್ರಿಯೆ (Spandana Vijay Raghavendra Funeral) ನೆರವೇರಲಿದೆ. ಈಡಿಗ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ತೀರ್ಮಾನಿಸಲಾಗಿದೆ.

ವಿಜಯ್​ ರಾಘವೇಂದ್ರ ಅವರದ್ದು ದೊಡ್ಡ ಕುಟುಂಬ. ಡಾ. ರಾಜ್​ಕುಮಾರ್​ ಅವರ ಹತ್ತಿರದ ಸಂಬಂಧಿಗಳಾದ ಅವರ ಮನೆಯಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ. ಶಿವರಾಜ್​ಕುಮಾರ್​ ಅವರು ಹೈದರಾಬಾದ್​ನಲ್ಲಿ ‘ಭೈರತಿ ರಣಗಲ್​’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಸ್ಪಂದನಾ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಶಿವಣ್ಣ ಬೆಂಗಳೂರಿಗೆ ವಾಪಸ್​ ಹೊರಟಿದ್ದಾರೆ. ವಿಜಯ್​ ರಾಘ​ವೇಂದ್ರ ಅವರ ನಿವಾಸಕ್ಕೆ ಎಲ್ಲರೂ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ವಿಜಯ್-ಸ್ಪಂದನಾ ಪ್ರೇಮಕ್ಕೆ ಮುನ್ನಡಿ ಹಾಡಿತ್ತು ಮಲ್ಲೇಶ್ವರದ ಕಾಫಿ ಡೇ

ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಒಂದರ ಹಿಂದೊಂದು ಆಘಾತ ಆಗುತ್ತಿದೆ. ಪುನೀತ್​ ರಾಜ್​ಕುಮಾರ್ ನಿಧನದಿಂದ ಈ ಕುಟುಂಬಕ್ಕೆ ತೀವ್ರ ನೋವು ಉಂಟಾಗಿತ್ತು. ಬಳಿಕ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ತಂದೆ ರೇವನಾಥ್​ ನಿಧನ ಹೊಂದಿದರು. ಕೆಲವೇ ವಾರಗಳ ಹಿಂದೆ ಪಾರ್ವತಮ್ಮ ಅವರ ಸಂಬಂಧಿ, ಯುವ ನಟ ಸೂರಜ್​ ಅವರು ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡರು. ಈಗ ಸ್ಪಂದನಾ ವಿಜಯ್​ ರಾಘವೇಂದ್ರ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿರುವುದು ನೋವಿನ ಸಂಗತಿ.

ಇದನ್ನೂ ಓದಿ: ‘ನನ್ನ ಚಿನ್ನಾರಿ ಮುತ್ತನಿಗೆ ಹೀಗೆ ಆಗಿದ್ದು ನನಗೆ ಆಘಾತ ತಂದಿದೆ’: ಸ್ಪಂದನಾ ನಿಧನಕ್ಕೆ ನಾಗಾಭರಣ ಪ್ರತಿಕ್ರಿಯೆ

ಸ್ಪಂದನಾ ಅಗಲಿಕೆ ಬಗ್ಗೆ ಶ್ರೀಮರಳಿ ಪ್ರತಿಕ್ರಿಯೆ:

ವಿಜಯ್​ ರಾಘವೇಂದ್ರ ಸಹೋದರ ಶ್ರೀಮುರಳಿ ಅವರು ಸ್ಪಂದನಾ ನಿಧನದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಅತ್ತಿಗೆ ನಿಧನರಾದ ಬಗ್ಗೆ ಅಣ್ಣ ರಾಘು ಕರೆ ಮಾಡಿ ತಿಳಿಸಿದರು. ಫ್ಯಾಮಿಲಿ ಜೊತೆ ಅತ್ತಿಗೆ ವಿದೇಶ ಪ್ರವಾಸಕ್ಕೆ ಹೋಗಿದ್ದರು. ಅಣ್ಣ ಕೂಡ ಈ ಟ್ರಿಪ್​ಗೆ ಅವರ ಜೊತೆ ಸೇರಿಕೊಳ್ಳುವವರಿದ್ದರು. ಅತ್ತಿಗೆ ನಿನ್ನೆ (ಆ.6) ರಾತ್ರಿ ಮಲಗಿದ್ದವರು ಮತ್ತೆ ಏಳಲೇ ಇಲ್ಲ. ಲೋ ಬಿಪಿ ಆಗಿದ್ದರಿಂದ ಅವರಿಗೆ ಈ ರೀತಿ ಆಗಿದೆ ಅಂತ ತಿಳಿದುಬಂದಿದೆ. ನಾಳೆ ಇನ್ನಷ್ಟು ಮಾಹಿತಿ ನೀಡುತ್ತೇವೆ’ ಎಂದಿದ್ದಾರೆ ಮುರಳಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು