AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಬರ್ತ್​ಡೇಗೂ ಮೊದಲು ‘ಪವರಿಸಮ್’ ಹಾಗೂ ‘ಮಹಾನುಭಾವ’ ಸಾಂಗ್ ರಿಲೀಸ್

ಪುನೀತ್​ ಬರ್ತ್​ಡೇಗೆ ನಾನಾ ಮಂದಿ ನಾನಾ ರೀತಿಯ ಗಿಫ್ಟ್​ ನೀಡುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ‘ಜೇಮ್ಸ್​’ ರಿಲೀಸ್​ ಆಗ್ತಿರೋದು ವಿಶೇಷ. ಇನ್ನು, ಪುನೀತ್​ ಬಗ್ಗೆ ವಿಶೇಷ ಹಾಡುಗಳು ಕೂಡ ರಿಲೀಸ್ ಆಗುತ್ತಿವೆ.

ಪುನೀತ್​ ಬರ್ತ್​ಡೇಗೂ ಮೊದಲು ‘ಪವರಿಸಮ್’ ಹಾಗೂ ‘ಮಹಾನುಭಾವ’ ಸಾಂಗ್ ರಿಲೀಸ್
ಪುನೀತ್
TV9 Web
| Edited By: |

Updated on: Mar 15, 2022 | 3:00 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರ ಜನ್ಮದಿನ ಸಮೀಪಿಸಿದೆ. ಮಾರ್ಚ್​ 17ರಂದು ಅವರ ಬರ್ತ್​ಡೇ. ಅಪ್ಪು ಬದುಕಿದ್ದರೆ 47 ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ, ಅವರಿಲ್ಲದೆ ಅಭಿಮಾನಿಗಳು ಪುನೀತ್​ ಹುಟ್ಟುಹಬ್ಬ (Puneeth Birthday) ಆಚರಿಸುತ್ತಿದ್ದಾರೆ. ಅವರ ಬರ್ತ್​ಡೇಗೆ ನಾನಾ ಮಂದಿ ನಾನಾ ರೀತಿಯ ಗಿಫ್ಟ್​ ನೀಡುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ‘ಜೇಮ್ಸ್​’ (James Movie) ರಿಲೀಸ್​ ಆಗ್ತಿರೋದು ವಿಶೇಷ. ಇನ್ನು, ಪುನೀತ್​ ಬಗ್ಗೆ ವಿಶೇಷ ಹಾಡುಗಳು ಕೂಡ ರಿಲೀಸ್ ಆಗುತ್ತಿವೆ. ಈಗ ಬರ್ತ್​ಡೇಗೂ ಮೊದಲು 2 ಸಾಂಗ್​ ರಿಲೀಸ್​ ಮಾಡಲಾಗಿದೆ.

ಪವರಿಸಮ್:

2019ರಲ್ಲಿ ಪುನೀತ್​ ನಟನೆಯ, ರಾಕ್​​ಲೈನ್​ ವೆಂಕಟೇಶ್​ ನಿರ್ಮಾಣದ ‘ನಟಸಾರ್ವಭೌಮ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರದ ಟೈಟಲ್​ ಸಾಂಗ್​ ಸಖತ್​ ಹಿಟ್​ ಆಗಿತ್ತು. ಈಗ ಇದೇ ಟ್ಯೂನ್​ ಇಟ್ಟುಕೊಂಡು ‘ಪವರಿಸಮ್​..’ ಹಾಡನ್ನು ರಚಿಸಲಾಗಿದೆ. ಈ ಹಾಡಿಗೆ ಪವನ್​ ಒಡೆಯರ್​ ಸಾಹಿತ್ಯ ಬರೆದಿದ್ದಾರೆ. ಪುನೀತ್​ ನಟನೆಯ ಹಳೆಯ ಸಿನಿಮಾ ಟೈಟಲ್​ಗಳನ್ನು ಈ ಹಾಡಿನಲ್ಲಿ ಬಳಕೆ ಮಾಡಿಕೊಂಡಿರುವುದು ವಿಶೇಷ. ಡಿ. ಇಮ್ಮಾನ್​ ಸಂಗೀತ ಸಂಯೋಜನೆ ಈ ಹಾಡಿಗೆ ಇದೆ.

ಮಹಾನುಭಾವ..: 

‘ಮಹಾನುಭಾವ..’ ಸಾಂಗ್​ ಕೂಡ ರಿಲೀಸ್​ ಆಗಿದೆ. ಪುನೀತ್​ ರಾಜ್​ಕುಮಾರ್ ಅವರ ಮೇಲಿನ ಅಭಿಮಾನಕ್ಕಾಗಿ ಸೋನು ನಿಗಮ್, ಶಂಕರ್​ ಮಹದೇವನ್​, ವಿಜಯ್​ ಪ್ರಕಾಶ್​ ಹಾಗೂ ಕೈಲಾಶ್​ ಖೇರ್ ಅವರು ಸಂಭಾವನೆ ಪಡೆಯದೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹಾಡನ್ನು ಕೇಳಿ ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ನಾಲ್ವರು ಗಾಯಕರ ನಡುವಿನ ಜುಗಲ್ಬಂದಿ ಚೆನ್ನಾಗಿ ಮೂಡಿ ಬಂದಿದೆ. ಪುನೀತ್​ ನಟನೆಯ ಒಂದು ಹೊಸ ಸಿನಿಮಾ ಬಂದರೆ, ಅದರಲ್ಲಿ ಹೀರೋ ಇಂಟ್ರಡಕ್ಷನ್​ ಸಾಂಗ್​ ಇದ್ದರೆ ಹೇಗೆ ಇರಬಹುದೋ ಅದೇ ರೀತಿಯಲ್ಲಿ ಈ ಗೀತೆ ಮೂಡಿಬಂದಿದೆ.

ಪುನೀತ್​ ರಾಜ್​ಕುಮಾರ್​ ಜೊತೆ ಒಂದು ಸಿನಿಮಾ ಮಾಡಬೇಕು ಎಂಬುದು ಕಾಂತ ಅವರ ಕನಸಾಗಿತ್ತು. ಅದಕ್ಕೆ ‘ಮಹಾನುಭಾವ’ ಅಂತ ಟೈಟಲ್​ ಇಡಲು ನಿರ್ಧರಿಸಲಾಗಿತ್ತು. ಆ ಕುರಿತು ಮಾತುಕತೆ ಆರಂಭ ಆಗಿತ್ತು. ಇನ್ನೇನು ಪುನೀತ್​ ರಾಜ್​ಕುಮಾರ್ ಅವರು ಕಥೆ ಕೇಳಲು ಟೈಮ್​ ಫಿಕ್ಸ್​ ಮಾಡುವುದು ಬಾಕಿ ಇತ್ತು. ಆದರೆ ಅಷ್ಟರಲ್ಲಾಗಲೇ ವಿಧಿ ತನ್ನ ಆಟ ಆಡಿತು. ‘ಮಹಾನುಭಾವ’ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ. ಕೊನೇ ಪಕ್ಷ ಅದೇ ಶೀರ್ಷಿಕೆ ಇಟ್ಟುಕೊಂಡು ಹಾಡಿನ ಮೂಲಕ ನಮನ ಸಲ್ಲಿಸಲು ಕಾಂತ ಕನ್ನಲ್ಲಿ ನಿರ್ಧರಿಸಿದರು. ಅದೇ ರೀತಿ ಈಗ ಸಾಂಗ್ ರಿಲೀಸ್ ಮಾಡಿದ್ದಾರೆ.

ಇದನ್ನೂ ಓದಿ: ‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ