AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗಿತರಂಗ, ಅವನೇ ಶ್ರೀ ಮನ್ನಾರಾಯಣ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ವಿಭಿನ್ನ ಚಿತ್ರ

‘ರಂಗಿತರಂಗ’ ಹಾಗೂ ‘ಅವನೇ ಶ್ರೀಮನ್ನಾರಯಣ’ ಭರ್ಜರಿ ಯಶಸ್ಸು ಕಂಡ ಚಿತ್ರಗಳು. ಅಪಾರ ಜನ‌ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರಗಳನ್ನು ನಿರ್ಮಿಸಿದ್ದ ಹೆಚ್.ಕೆ.ಪ್ರಕಾಶ್ ಅವರು ‘ಸ್ಪೂಕಿ ಕಾಲೇಜ್’ ಎಂಬ ಮತ್ತೊಂದು ವಿಭಿನ್ನ ಚಿತ್ರ ನಿರ್ಮಿಸುತ್ತಿದ್ದಾರೆ. ತಮ್ಮದೇ ಆದ ಶ್ರೀದೇವಿ ಎಂಟರ್ ಟೈನರ್ ಸಂಸ್ಥೆ ಮೂಲಕ. ಈ ಚಿತ್ರದ ಚಿತ್ರೀಕರಣ ನವೆಂಬರ್ ಮೊದಲ ವಾರದಲ್ಲಿ ಧಾರವಾಡದ 103 ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಆರಂಭವಾಗಲಿದೆ. ಎರಡನೇ ಹಂತದ ಚಿತ್ರವು ದಾಂಡೇಲಿ ದಟ್ಟ ಅರಣ್ಯ ಪ್ರದೇಶದಲ್ಲಿ ನಡೆಯಲಿದೆ. ಹಾರಾರ್, ಕಾಮಿಡಿ ಹಾಗೂ ಸೈಕಲಾಜಿಕಲ್ […]

ರಂಗಿತರಂಗ, ಅವನೇ ಶ್ರೀ ಮನ್ನಾರಾಯಣ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ವಿಭಿನ್ನ ಚಿತ್ರ
ಆಯೇಷಾ ಬಾನು
| Edited By: |

Updated on:Oct 02, 2020 | 4:00 PM

Share

‘ರಂಗಿತರಂಗ’ ಹಾಗೂ ‘ಅವನೇ ಶ್ರೀಮನ್ನಾರಯಣ’ ಭರ್ಜರಿ ಯಶಸ್ಸು ಕಂಡ ಚಿತ್ರಗಳು. ಅಪಾರ ಜನ‌ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರಗಳನ್ನು ನಿರ್ಮಿಸಿದ್ದ ಹೆಚ್.ಕೆ.ಪ್ರಕಾಶ್ ಅವರು ‘ಸ್ಪೂಕಿ ಕಾಲೇಜ್’ ಎಂಬ ಮತ್ತೊಂದು ವಿಭಿನ್ನ ಚಿತ್ರ ನಿರ್ಮಿಸುತ್ತಿದ್ದಾರೆ. ತಮ್ಮದೇ ಆದ ಶ್ರೀದೇವಿ ಎಂಟರ್ ಟೈನರ್ ಸಂಸ್ಥೆ ಮೂಲಕ.

ಈ ಚಿತ್ರದ ಚಿತ್ರೀಕರಣ ನವೆಂಬರ್ ಮೊದಲ ವಾರದಲ್ಲಿ ಧಾರವಾಡದ 103 ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಆರಂಭವಾಗಲಿದೆ. ಎರಡನೇ ಹಂತದ ಚಿತ್ರವು ದಾಂಡೇಲಿ ದಟ್ಟ ಅರಣ್ಯ ಪ್ರದೇಶದಲ್ಲಿ ನಡೆಯಲಿದೆ. ಹಾರಾರ್, ಕಾಮಿಡಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದಾರ ಹೊಂದಿರುವ ಈ ಚಿತ್ರವನ್ನು ಭರತ್ ಜಿ ನಿರ್ದೇಶಿಸುತ್ತಿದ್ದಾರೆ. ಅಲ್ಲದೆ ಯೋಗರಾಜ್ ಭಟ್, ರಮೇಶ್ ಅರವಿಂದ್ ಮೊದಲಾದವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವ ಭರತ್ ಅವರಿಗಿದೆ. ರೆಡಿಯೋ ಹಾಗೂ ಪ್ರಚಾರ ವಿಭಾಗದಲ್ಲೂ ಭರತ್ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಭರತ್ ಅವರೆ ಬರೆದಿದ್ದಾರೆ.

ಹಾರಾರ್, ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಚಿತ್ರವಾಗಿರುವುದರಿಂದ ಈ ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರುತ್ತದೆ. ಹಾಗಾಗಿ ಅದಕ್ಕೆ ಸಂಬಂಧಿಸಿದ ಕೆಲವು ಸಾಮಗ್ರಿಗಳನ್ನು ಮುಂಬೈನಿಂದ ತರಿಸಿಕೊಳುತ್ತಿರುವುದಾಗಿ ತಿಳಿಸಿರುವ ನಿರ್ದೇಶಕರು ವಸ್ತ್ರ ವಿನ್ಯಾಸ ಕೂಡ ವಿಶೇಷವಾಗಿರುತ್ತದೆ ಎಂದು ತಿಳಿಸಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಕೆ.ಜಿ.ಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ, ವಿಶ್ವಾಸ್ ಕಲಾ ನಿರ್ದೇಶನ ಹಾಗೂ ಚೇತನ್ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ.

‘ಪ್ರಿಮಿಯರ್ ಪದ್ಮಿನಿ’ ಚಿತ್ರದಲ್ಲಿ ಅಭಿನಯಿಸಿದ್ದ ವಿವೇಕ್ ಸಿಂಹ, ‘ದಿಯಾ’ ಖ್ಯಾತಿಯ ಖುಷಿ ರವಿ ಹಾಗೂ ಪೃಥ್ವಿ ರಾಷ್ಟಕೂಟ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಕಾಶ್ ಬೆಳವಾಡಿ, ಹನುಮಂತೇ ಗೌಡ, ರಘು ರಮಣಕೊಪ್ಪ, ಅರವಿಂದ್ ಬೋಳಾರ್, ವಿಜಯ್ ಚೆಂಡೂರ್, ಎಂ.ಕೆ.ಮಠ, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Published On - 3:38 pm, Fri, 2 October 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ