Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ.

Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್
ಮಹೇಶ್​ ಬಾಬು-ಶ್ರೀಲೀಲಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 07, 2022 | 3:20 PM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಹೊಸ ಸಿನಿಮಾ ಇತ್ತೀಚೆಗೆ ಸದ್ದಿಲ್ಲದೆ ಸೆಟ್ಟೇರಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas)​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎನ್ನುವ ಕುತೂಹಲ ಮೂಡಿತ್ತು. ಮೂಲಗಳ ಪ್ರಕಾರ ಕನ್ನಡತಿ ಶ್ರೀಲೀಲಾ (Sreeleela) ಈ ಚಿತ್ರಕ್ಕೆ ಎರಡನೇ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂಬ ಮಾತು ಜೋರಾಗಿದೆ. ಈ ವಿಚಾರದ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಹೊಸ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾಗೆ ಎರಡನೇ ಹೀರೋಯಿನ್​ ಆಯ್ಕೆಯಲ್ಲಿ ತಂಡ ಬ್ಯುಸಿ ಆಗಿದೆ. ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಮಹೇಶ್​ ಬಾಬು ಜತೆ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕನ್ನಡತಿ ಶ್ರೀಲೀಲಾ ಹೆಸರನ್ನು ತ್ರಿವಿಕ್ರಮ್​ ಅವರು ಮಹೇಶ್​ ಬಾಬು ಮುಂದೆ ಇಟ್ಟಿದ್ದಾರೆ. ಇದಕ್ಕೆ ಮಹೇಶ್​ ಬಾಬು ಗ್ರೀನ್​ ಸಿಗ್ನಲ್​ ನೀಡಿದ್ದಾರೆ ಎಂಬ ಗುಸುಗುಸು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ‘ಕಿಸ್​’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಪಡೆದರು. ‘ಪೆಳ್ಳಿ ಸಂದಡಿ’ ಚಿತ್ರದಿಂದ ಅವರು ಟಾಲಿವುಡ್​ನಲ್ಲಿ ಮನೆಮಾತಾದರು. ಆ ಸಿನಿಮಾ ಜನಮೆಚ್ಚುಗೆ ಗಳಿಸುವಲ್ಲಿ ಹಿಂದೆ ಬಿದ್ದಿತಾದರೂ ನಟಿ ಶ್ರೀಲೀಲಾಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತು. ನಟನೆ ಮತ್ತು ಗ್ಲಾಮರ್​ನಿಂದಾಗಿ ಅವರು ಪ್ರೇಕ್ಷಕರ ಗಮನ ಸೆಳೆದರು. ಹೀಗಾಗಿ, ಟಾಲಿವುಡ್​ನಿಂದ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿಕೊಂಡು ಬರುತ್ತಿವೆ.

‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಮಹೇಶ್​ ಬಾಬುಗೆ ಜತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಈ ಸಿನಿಮಾ ಹಿಟ್​ ಆಗಿತ್ತು. ಈಗ ಮತ್ತಿಬ್ಬರು ಕನ್ನಡತಿ ಜತೆಗೆ ಅವರು ತೆರೆಹಂಚಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈಗಾಗಲೇ ನಿರ್ದೇಶಕರು ಶ್ರೀಲೀಲಾ ಜತೆಗೆ ಒಂದು ಹಂತದ ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರ ಸಂಕ್ರಾಂತಿ ಹಬ್ಬಕ್ಕೆ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ

ಒಟ್ಟಾಗಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡ ಕಿಚ್ಚ ಸುದೀಪ್- ಪ್ರಿನ್ಸ್ ಮಹೇಶ್ ಬಾಬು: ಫ್ಯಾನ್ಸ್ ಫುಲ್ ಖುಷ್

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ