AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ.

Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್
ಮಹೇಶ್​ ಬಾಬು-ಶ್ರೀಲೀಲಾ
TV9 Web
| Edited By: |

Updated on: Feb 07, 2022 | 3:20 PM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಹೊಸ ಸಿನಿಮಾ ಇತ್ತೀಚೆಗೆ ಸದ್ದಿಲ್ಲದೆ ಸೆಟ್ಟೇರಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas)​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎನ್ನುವ ಕುತೂಹಲ ಮೂಡಿತ್ತು. ಮೂಲಗಳ ಪ್ರಕಾರ ಕನ್ನಡತಿ ಶ್ರೀಲೀಲಾ (Sreeleela) ಈ ಚಿತ್ರಕ್ಕೆ ಎರಡನೇ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂಬ ಮಾತು ಜೋರಾಗಿದೆ. ಈ ವಿಚಾರದ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಹೊಸ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾಗೆ ಎರಡನೇ ಹೀರೋಯಿನ್​ ಆಯ್ಕೆಯಲ್ಲಿ ತಂಡ ಬ್ಯುಸಿ ಆಗಿದೆ. ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಮಹೇಶ್​ ಬಾಬು ಜತೆ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕನ್ನಡತಿ ಶ್ರೀಲೀಲಾ ಹೆಸರನ್ನು ತ್ರಿವಿಕ್ರಮ್​ ಅವರು ಮಹೇಶ್​ ಬಾಬು ಮುಂದೆ ಇಟ್ಟಿದ್ದಾರೆ. ಇದಕ್ಕೆ ಮಹೇಶ್​ ಬಾಬು ಗ್ರೀನ್​ ಸಿಗ್ನಲ್​ ನೀಡಿದ್ದಾರೆ ಎಂಬ ಗುಸುಗುಸು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ‘ಕಿಸ್​’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಪಡೆದರು. ‘ಪೆಳ್ಳಿ ಸಂದಡಿ’ ಚಿತ್ರದಿಂದ ಅವರು ಟಾಲಿವುಡ್​ನಲ್ಲಿ ಮನೆಮಾತಾದರು. ಆ ಸಿನಿಮಾ ಜನಮೆಚ್ಚುಗೆ ಗಳಿಸುವಲ್ಲಿ ಹಿಂದೆ ಬಿದ್ದಿತಾದರೂ ನಟಿ ಶ್ರೀಲೀಲಾಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತು. ನಟನೆ ಮತ್ತು ಗ್ಲಾಮರ್​ನಿಂದಾಗಿ ಅವರು ಪ್ರೇಕ್ಷಕರ ಗಮನ ಸೆಳೆದರು. ಹೀಗಾಗಿ, ಟಾಲಿವುಡ್​ನಿಂದ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿಕೊಂಡು ಬರುತ್ತಿವೆ.

‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಮಹೇಶ್​ ಬಾಬುಗೆ ಜತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಈ ಸಿನಿಮಾ ಹಿಟ್​ ಆಗಿತ್ತು. ಈಗ ಮತ್ತಿಬ್ಬರು ಕನ್ನಡತಿ ಜತೆಗೆ ಅವರು ತೆರೆಹಂಚಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈಗಾಗಲೇ ನಿರ್ದೇಶಕರು ಶ್ರೀಲೀಲಾ ಜತೆಗೆ ಒಂದು ಹಂತದ ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರ ಸಂಕ್ರಾಂತಿ ಹಬ್ಬಕ್ಕೆ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ

ಒಟ್ಟಾಗಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡ ಕಿಚ್ಚ ಸುದೀಪ್- ಪ್ರಿನ್ಸ್ ಮಹೇಶ್ ಬಾಬು: ಫ್ಯಾನ್ಸ್ ಫುಲ್ ಖುಷ್

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?