AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್​ಗೆ ಬ್ರೇಕ್​ ನೀಡಿ ಮಹತ್ವದ ಕೆಲಸಕ್ಕೆ ಮುಂದಾದ ನಟಿ ಶ್ರೀಲೀಲಾ

ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಟಾಲಿವುಡ್​ನಲ್ಲಿ ನಿರ್ಮಾಪಕರು ಶ್ರೀಲೀಲಾ ಕಾಲ್​ಶೀಟ್​ ಪಡೆಯೋಕೆ ಕಾದು ಕೂತಿದ್ದಾರೆ. ಆದರೆ, ಸದ್ಯಕ್ಕೆ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ನೀಡಿದ್ದಾರೆ.

ಸಿನಿಮಾ ಶೂಟಿಂಗ್​ಗೆ ಬ್ರೇಕ್​ ನೀಡಿ ಮಹತ್ವದ ಕೆಲಸಕ್ಕೆ ಮುಂದಾದ ನಟಿ ಶ್ರೀಲೀಲಾ
ಶ್ರೀಲೀಲಾ
TV9 Web
| Edited By: |

Updated on: Nov 28, 2021 | 7:18 PM

Share

ನಟಿ ಶ್ರೀಲೀಲಾಗೆ ಟಾಲಿವುಡ್​ನಲ್ಲಿ ಅದೃಷ್ಟ ಖುಲಾಯಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ನಂತರದಲ್ಲಿ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರುತ್ತಿದೆ. ಈ ಮಧ್ಯೆ ತಮ್ಮ ಶಿಕ್ಷಣದ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ ಅವರು. ಈ ಕಾರಣಕ್ಕೆ ಶ್ರೀಲೀಲಾ ಸಿನಿಮಾ ಕೆಲಸ ತೊರೆದು ಶಿಕ್ಷಣದತ್ತ ಗಮನ ಹರಿಸೋಕೆ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಶ್ರೀಲೀಲಾ ಎಂಬಿಬಿಎಸ್​ ಪರೀಕ್ಷೆ ಬರೆಯೋಕೆ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ.

ಕನ್ನಡದ ‘ಕಿಸ್​’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಟಾಲಿವುಡ್​ನಲ್ಲಿ ನಿರ್ಮಾಪಕರು ಶ್ರೀಲೀಲಾ ಕಾಲ್​ಶೀಟ್​ ಪಡೆಯೋಕೆ ಕಾದು ಕೂತಿದ್ದಾರೆ. ಆದರೆ, ಸದ್ಯಕ್ಕೆ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ನೀಡಿದ್ದಾರೆ.

ಹಲವು ಆಫರ್​ಗಳು ಬರುತ್ತಿರುವ ಮಧ್ಯೆಯೂ ಶ್ರೀಲೀಲಾ ಎಂಬಿಬಿಎಸ್​ ಅಂತಿಮ ವರ್ಷದ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದಾರೆ. ಈ ಕಾರಣಕ್ಕೆ ಶೂಟಿಂಗ್​ ಕೆಲಸಕ್ಕೆ ಬ್ರೇಕ್​ ನೀಡಿದ್ದಾರೆ. ಹೊಸ ಸಿನಿಮಾಗಳನ್ನು ಶಿಕ್ಷಣ ಪೂರ್ಣಗೊಂಡ ನಂತರವೇ ಒಪ್ಪಿಕೊಳ್ಳಬೇಕು ಎನ್ನುವ ನಿರ್ಧಾರ ಅವರದ್ದು.

‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್​ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್​ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್​ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್​ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್​’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್​ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾದ ಕಾಲ್​ಶೀಲ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್​ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್​ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್​ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್​ನಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ತೆಲುಗಿನಲ್ಲಿ ಮೊದಲ ಚಿತ್ರದ ರಿಲೀಸ್​ಗೂ ಮುನ್ನವೇ ಹೆಚ್ಚಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ, ಪೂಜಾ, ಕೃತಿ ಕಥೆಯೇನು?

ಶ್ರೀಲೀಲಾ ಸೌಂದರ್ಯಕ್ಕೆ ಮಾರುಹೋದ ಟಾಲಿವುಡ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ