AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!

ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ.

'ಉಗ್ರಂ' ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!
ಬಘೀರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 7:14 PM

Share

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಶ್ರೀಮುರುಳಿಗೆ ಈ ಚಿತ್ರ ಹೊಸ ಹುಟ್ಟು ನೀಡಿತ್ತು.  ಈಗ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕಾಗಿ ಶ್ರೀಮುರುಳಿ ಹಾಗೂ ಪ್ರಶಾಂತ್​ ನೀಲ್​ ಮತ್ತೆ ಒಂದಾಗುತ್ತಿದ್ದಾರೆ!

ಹಾಗಾದರೆ, ಶ್ರೀಮುರುಳಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರಾ? ಇಲ್ಲ, ಪ್ರಶಾಂತ್​ ನೀಲ್ ಈ ಚಿತ್ರಕ್ಕಾಗಿ​ ಕತೆ ಬರೆದಿದ್ದಾರೆ. ಇಂದು ಶ್ರೀಮುರುಳಿ ಜನ್ಮದಿನ. ಈ ವಿಶೇಷ ದಿನದಂದು ಹೊಂಬಾಳೆ ಫಿಲ್ಮ್ಸ್​ ಹೊಸ ಸಿನಿಮಾ ನಿರ್ಮಾಣದ ಘೋಷಣೆ ಮಾಡಿದೆ.

ಅಂದಹಾಗೆ, ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ. ವಿಜಯ್​ ಕಿರಗುಂದೂರ್​ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಡಿಆರ್​ ಸೂರಿ ಬಘೀರನಿಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಪ್ರಶಾಂತ್​ ನೀಲ್​ ಕತೆ ಬರೆದಿದ್ದಾರೆ.

ಬಘೀರ ಹೆಸರಿನ ಪಾತ್ರ ಜಂಗಲ್​ಬುಕ್​ನಲ್ಲಿ ಬರುತ್ತದೆ. ಕಪ್ಪು ಚಿರತೆಯ ಪಾತ್ರದ ಹೆಸರು ಬಘೀರ. ಇದು ಮೊಗ್ಲಿಯ ಗೆಳೆಯ. ಮೊಗ್ಲಿಗೆ ರಕ್ಷಕನಾಗಿ, ಮಾರ್ಗದರ್ಶಕನಾಗಿ ನಡೆದುಕೊಳ್ಳುತ್ತದೆ. ಈ ಪಾತ್ರಕ್ಕೂ ಸಿನಿಮಾಗೂ ಏನಾದರೂ ಸಂಬಂಧ ಇದೆಯೇ ಎನ್ನುವುದನ್ನು ತಿಳಿಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಮದಗಜ ಟೀಸರ್ ರಿಲೀಸ್​ ಶ್ರೀಮುರುಳಿ ನಟಿಸುತ್ತಿರುವ ಮದಗಜ ಟೀಸರ್​ ಕೂಡ ಇಂದು ರಿಲೀಸ್​ ಆಗಿದೆ. ಎಸ್​​. ಮಹೇಶ್​ ಕುಮಾರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಟೀಸರ್ ತುಂಬಾನೇ ಮಾಸ್​ ಆಗಿ ಮೂಡಿ ಬಂದಿದೆ.

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?