AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!

ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ.

'ಉಗ್ರಂ' ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!
ಬಘೀರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 7:14 PM

Share

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಶ್ರೀಮುರುಳಿಗೆ ಈ ಚಿತ್ರ ಹೊಸ ಹುಟ್ಟು ನೀಡಿತ್ತು.  ಈಗ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕಾಗಿ ಶ್ರೀಮುರುಳಿ ಹಾಗೂ ಪ್ರಶಾಂತ್​ ನೀಲ್​ ಮತ್ತೆ ಒಂದಾಗುತ್ತಿದ್ದಾರೆ!

ಹಾಗಾದರೆ, ಶ್ರೀಮುರುಳಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರಾ? ಇಲ್ಲ, ಪ್ರಶಾಂತ್​ ನೀಲ್ ಈ ಚಿತ್ರಕ್ಕಾಗಿ​ ಕತೆ ಬರೆದಿದ್ದಾರೆ. ಇಂದು ಶ್ರೀಮುರುಳಿ ಜನ್ಮದಿನ. ಈ ವಿಶೇಷ ದಿನದಂದು ಹೊಂಬಾಳೆ ಫಿಲ್ಮ್ಸ್​ ಹೊಸ ಸಿನಿಮಾ ನಿರ್ಮಾಣದ ಘೋಷಣೆ ಮಾಡಿದೆ.

ಅಂದಹಾಗೆ, ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ. ವಿಜಯ್​ ಕಿರಗುಂದೂರ್​ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಡಿಆರ್​ ಸೂರಿ ಬಘೀರನಿಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಪ್ರಶಾಂತ್​ ನೀಲ್​ ಕತೆ ಬರೆದಿದ್ದಾರೆ.

ಬಘೀರ ಹೆಸರಿನ ಪಾತ್ರ ಜಂಗಲ್​ಬುಕ್​ನಲ್ಲಿ ಬರುತ್ತದೆ. ಕಪ್ಪು ಚಿರತೆಯ ಪಾತ್ರದ ಹೆಸರು ಬಘೀರ. ಇದು ಮೊಗ್ಲಿಯ ಗೆಳೆಯ. ಮೊಗ್ಲಿಗೆ ರಕ್ಷಕನಾಗಿ, ಮಾರ್ಗದರ್ಶಕನಾಗಿ ನಡೆದುಕೊಳ್ಳುತ್ತದೆ. ಈ ಪಾತ್ರಕ್ಕೂ ಸಿನಿಮಾಗೂ ಏನಾದರೂ ಸಂಬಂಧ ಇದೆಯೇ ಎನ್ನುವುದನ್ನು ತಿಳಿಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಮದಗಜ ಟೀಸರ್ ರಿಲೀಸ್​ ಶ್ರೀಮುರುಳಿ ನಟಿಸುತ್ತಿರುವ ಮದಗಜ ಟೀಸರ್​ ಕೂಡ ಇಂದು ರಿಲೀಸ್​ ಆಗಿದೆ. ಎಸ್​​. ಮಹೇಶ್​ ಕುಮಾರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಟೀಸರ್ ತುಂಬಾನೇ ಮಾಸ್​ ಆಗಿ ಮೂಡಿ ಬಂದಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ