AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!

ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ.

'ಉಗ್ರಂ' ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!
ಬಘೀರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 7:14 PM

Share

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಶ್ರೀಮುರುಳಿಗೆ ಈ ಚಿತ್ರ ಹೊಸ ಹುಟ್ಟು ನೀಡಿತ್ತು.  ಈಗ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕಾಗಿ ಶ್ರೀಮುರುಳಿ ಹಾಗೂ ಪ್ರಶಾಂತ್​ ನೀಲ್​ ಮತ್ತೆ ಒಂದಾಗುತ್ತಿದ್ದಾರೆ!

ಹಾಗಾದರೆ, ಶ್ರೀಮುರುಳಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರಾ? ಇಲ್ಲ, ಪ್ರಶಾಂತ್​ ನೀಲ್ ಈ ಚಿತ್ರಕ್ಕಾಗಿ​ ಕತೆ ಬರೆದಿದ್ದಾರೆ. ಇಂದು ಶ್ರೀಮುರುಳಿ ಜನ್ಮದಿನ. ಈ ವಿಶೇಷ ದಿನದಂದು ಹೊಂಬಾಳೆ ಫಿಲ್ಮ್ಸ್​ ಹೊಸ ಸಿನಿಮಾ ನಿರ್ಮಾಣದ ಘೋಷಣೆ ಮಾಡಿದೆ.

ಅಂದಹಾಗೆ, ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ. ವಿಜಯ್​ ಕಿರಗುಂದೂರ್​ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಡಿಆರ್​ ಸೂರಿ ಬಘೀರನಿಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಪ್ರಶಾಂತ್​ ನೀಲ್​ ಕತೆ ಬರೆದಿದ್ದಾರೆ.

ಬಘೀರ ಹೆಸರಿನ ಪಾತ್ರ ಜಂಗಲ್​ಬುಕ್​ನಲ್ಲಿ ಬರುತ್ತದೆ. ಕಪ್ಪು ಚಿರತೆಯ ಪಾತ್ರದ ಹೆಸರು ಬಘೀರ. ಇದು ಮೊಗ್ಲಿಯ ಗೆಳೆಯ. ಮೊಗ್ಲಿಗೆ ರಕ್ಷಕನಾಗಿ, ಮಾರ್ಗದರ್ಶಕನಾಗಿ ನಡೆದುಕೊಳ್ಳುತ್ತದೆ. ಈ ಪಾತ್ರಕ್ಕೂ ಸಿನಿಮಾಗೂ ಏನಾದರೂ ಸಂಬಂಧ ಇದೆಯೇ ಎನ್ನುವುದನ್ನು ತಿಳಿಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಮದಗಜ ಟೀಸರ್ ರಿಲೀಸ್​ ಶ್ರೀಮುರುಳಿ ನಟಿಸುತ್ತಿರುವ ಮದಗಜ ಟೀಸರ್​ ಕೂಡ ಇಂದು ರಿಲೀಸ್​ ಆಗಿದೆ. ಎಸ್​​. ಮಹೇಶ್​ ಕುಮಾರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಟೀಸರ್ ತುಂಬಾನೇ ಮಾಸ್​ ಆಗಿ ಮೂಡಿ ಬಂದಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್