AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!

ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ.

'ಉಗ್ರಂ' ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!
ಬಘೀರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 7:14 PM

Share

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಶ್ರೀಮುರುಳಿಗೆ ಈ ಚಿತ್ರ ಹೊಸ ಹುಟ್ಟು ನೀಡಿತ್ತು.  ಈಗ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕಾಗಿ ಶ್ರೀಮುರುಳಿ ಹಾಗೂ ಪ್ರಶಾಂತ್​ ನೀಲ್​ ಮತ್ತೆ ಒಂದಾಗುತ್ತಿದ್ದಾರೆ!

ಹಾಗಾದರೆ, ಶ್ರೀಮುರುಳಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರಾ? ಇಲ್ಲ, ಪ್ರಶಾಂತ್​ ನೀಲ್ ಈ ಚಿತ್ರಕ್ಕಾಗಿ​ ಕತೆ ಬರೆದಿದ್ದಾರೆ. ಇಂದು ಶ್ರೀಮುರುಳಿ ಜನ್ಮದಿನ. ಈ ವಿಶೇಷ ದಿನದಂದು ಹೊಂಬಾಳೆ ಫಿಲ್ಮ್ಸ್​ ಹೊಸ ಸಿನಿಮಾ ನಿರ್ಮಾಣದ ಘೋಷಣೆ ಮಾಡಿದೆ.

ಅಂದಹಾಗೆ, ಈ ಸಿನಿಮಾಗೆ ಬಘೀರ ಎಂದು ನಾಮಕರಣ ಮಾಡಲಾಗಿದೆ. ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ. ಈ ಸಿನಿಮಾದಲ್ಲಿ ಶ್ರೀಮುರುಳಿ ಬಘೀರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿದೆ. ವಿಜಯ್​ ಕಿರಗುಂದೂರ್​ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಡಿಆರ್​ ಸೂರಿ ಬಘೀರನಿಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಪ್ರಶಾಂತ್​ ನೀಲ್​ ಕತೆ ಬರೆದಿದ್ದಾರೆ.

ಬಘೀರ ಹೆಸರಿನ ಪಾತ್ರ ಜಂಗಲ್​ಬುಕ್​ನಲ್ಲಿ ಬರುತ್ತದೆ. ಕಪ್ಪು ಚಿರತೆಯ ಪಾತ್ರದ ಹೆಸರು ಬಘೀರ. ಇದು ಮೊಗ್ಲಿಯ ಗೆಳೆಯ. ಮೊಗ್ಲಿಗೆ ರಕ್ಷಕನಾಗಿ, ಮಾರ್ಗದರ್ಶಕನಾಗಿ ನಡೆದುಕೊಳ್ಳುತ್ತದೆ. ಈ ಪಾತ್ರಕ್ಕೂ ಸಿನಿಮಾಗೂ ಏನಾದರೂ ಸಂಬಂಧ ಇದೆಯೇ ಎನ್ನುವುದನ್ನು ತಿಳಿಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಮದಗಜ ಟೀಸರ್ ರಿಲೀಸ್​ ಶ್ರೀಮುರುಳಿ ನಟಿಸುತ್ತಿರುವ ಮದಗಜ ಟೀಸರ್​ ಕೂಡ ಇಂದು ರಿಲೀಸ್​ ಆಗಿದೆ. ಎಸ್​​. ಮಹೇಶ್​ ಕುಮಾರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಟೀಸರ್ ತುಂಬಾನೇ ಮಾಸ್​ ಆಗಿ ಮೂಡಿ ಬಂದಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ