AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಶ್ರೀಮುರಳಿ ಜೊತೆಗಿನ ಆಶಿಕಾ ರೊಮ್ಯಾಂಟಿಕ್​ ವಿಡಿಯೋ​ ವೈರಲ್​

Madhagaja Sri Murali: ಯುಗಾದಿ ಹಬ್ಬದ ಪ್ರಯುಕ್ತ ಮದಗಜ ಚಿತ್ರದ ಹೊಸ ಟೀಸರ್​ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಚಿತ್ರದ ಲವ್​ಸ್ಟೋರಿಯ ಝಲಕ್​ ತೋರಿಸುವ ಪ್ರಯತ್ನ ಮಾಡಲಾಗಿದೆ. ಶ್ರೀಮುರಳಿ-ಆಶಿಕಾ ರಂಗನಾಥ್​ ನಡುವಿನ ರೊಮ್ಯಾಂಟಿಕ್​ ದೃಶ್ಯಗಳು ಈ ಟೀಸರ್​ನಲ್ಲಿದೆ.

Ashika Ranganath: ಶ್ರೀಮುರಳಿ ಜೊತೆಗಿನ ಆಶಿಕಾ ರೊಮ್ಯಾಂಟಿಕ್​ ವಿಡಿಯೋ​ ವೈರಲ್​
(ಮದಗಜ ಸಿನಿಮಾದಲ್ಲಿ ಶ್ರೀಮುರಳಿ ಮತ್ತು ಆಶಿಕಾ ರಂಗನಾಥ್​)
ಮದನ್​ ಕುಮಾರ್​
| Edited By: |

Updated on:Aug 05, 2021 | 12:47 PM

Share

ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆ ಹುಟ್ಟಿಕೊಳ್ಳಲು ಕಾರಣ ಹಲವು. ಈ ಹಿಂದೆ ಬಿಡುಗಡೆಯಾದ ಪೋಸ್ಟರ್​ ಮತ್ತು ಟೀಸರ್​ನಲ್ಲಿ ಶ್ರೀಮುರಳಿ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಅವರು ನಟಿಸಿದ ‘ಉಗ್ರಂ’, ‘ರಥಾವರ’, ‘ಮಫ್ತಿ’, ‘ಭರಾಟೆ’ ಸಿನಿಮಾಗಳಲ್ಲಿ ಶ್ರೀಮುರಳಿ ಅವರಿಗೆ ಮಾಸ್​ ಇಮೇಜ್​ ಇತ್ತು. ಅದು ಮದಗಜ ಚಿತ್ರದಲ್ಲೂ ಮುಂದುವರಿದಿದೆ. ಆದರೆ ಇದರ ಜೊತೆಗೊಂದು ಟ್ವಿಸ್ಟ್​ ಕೂಡ ಇದೆ. ಅದೇನೆಂಬುದು ಈಗ ಬಹಿರಂಗ ಆಗಿದೆ.

‘ಅಯೋಗ್ಯ’ ಸಿನಿಮಾ ಖ್ಯಾತಿಯ ನಿರ್ದೇಶಕ ಮಹೇಶ್​ ಕುಮಾರ್​ ಅವರು ‘ಮದಗಜ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶ್ರೀಮುರಳಿ ಜನ್ಮದಿನದ ಪ್ರಯುಕ್ತ ಬಿಡುಗಡೆ ಮಾಡಲಾಗಿದ್ದ ಡೈಲಾಗ್​ ಟೀಸರ್​ ತುಂಬಾ ಮಾಸ್​ ಆಗಿತ್ತು. ಶ್ರೀಮುರಳಿ ಗೆಟಪ್​ ಕೂಡ ರಗಡ್​ ಆಗಿತ್ತು. ಆದರೆ ಇದೇ ಸಿನಿಮಾದಲ್ಲಿ ಅವರಿಗೆ ಲವರ್​ ಬಾಯ್​ ಇಮೇಜ್​ ಕೂಡ ಇದೆ ಎಂಬ ವಿಷಯ ಈಗ ಬಹಿರಂಗ ಆಗಿದೆ. ಅಂದರೆ ಕಥಾನಾಯಕನ ಇನ್ನೊಂದು ಮುಖ ಅನಾವರಣ ಆಗಿದೆ.

ಯುಗಾದಿ ಹಬ್ಬದ ಪ್ರಯುಕ್ತ ಮದಗಜ ಚಿತ್ರತಂಡದಿಂದ ಹೊಸ ಟೀಸರ್​ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಚಿತ್ರದ ಲವ್​ ಸ್ಟೋರಿಯ ಝಲಕ್​ ತೋರಿಸುವ ಪ್ರಯತ್ನ ಮಾಡಲಾಗಿದೆ. ಹೀರೋಯಿನ್​ ಆಶಿಕಾ ರಂಗನಾಥ್​ ಜೊತೆಗಿನ ರೊಮ್ಯಾಂಟಿಕ್​ ದೃಶ್ಯಗಳು ಈ ಟೀಸರ್​ನಲ್ಲಿದೆ. ಹಿನ್ನೆಲೆ ಸಂಗೀತ ಕೂಡ ಅದಕ್ಕೆ ಸಾಥ್ ನೀಡುತ್ತಿದೆ. ಇದನ್ನು ನೋಡಿದರೆ ಮದಗಜ ಕೇವಲ ಆ್ಯಕ್ಷನ್​ ಸಿನಿಮಾ ಅಲ್ಲ ಎಂಬುದು ಗೊತ್ತಾಗುತ್ತದೆ.

ಇದೇ ಟೀಸರ್​ನಲ್ಲಿ ನಾಯಕಿ ಆಶಿಕಾ ರಂಗನಾಥ್​ ಅವರ ಪಾತ್ರದ ಬಗ್ಗೆಯೂ ಪರಿಚಯ ಮಾಡಿಸಲಾಗಿದೆ. ಪಕ್ಕಾ ಹಳ್ಳಿ ಹುಡುಗಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತ, ಹಳ್ಳಿ ರಸ್ತೆಯಲ್ಲಿ ಸೈಕಲ್​ ಓಡಿಸುತ್ತಿರುವ ಅವರ ಈ ಪಾತ್ರ ಸಿನಿಮಾದಲ್ಲಿ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿದುಕೊಳ್ಳುವ ಕಾತರ ಈಗ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ರಾಬರ್ಟ್​ ಖ್ಯಾತಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ನಿರ್ಮಾಣ ಮಾಡುತ್ತಿರುವ ‘ಮದಗಜ’ ಚಿತ್ರಕ್ಕೆ ಇನ್ನೂ ಶೂಟಿಂಗ್​ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಬೆಂಗಳೂರಿನ ಕಂಠೀರಣ ಸ್ಟುಡಿಯೋದಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಲಾಗುತ್ತಿತ್ತು. ಆ ವೇಳೆ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದ್ದು, 15 ದಿನ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿತ್ತು.

ಇದನ್ನೂ ಓದಿ: Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​

(Sri Murali Ashika Ranganath starrer Madhagaja Lovesome released on auspicious day of Yugadi 2021 mdn)

Published On - 1:23 pm, Tue, 13 April 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು