AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ ಮೂಡಿಬಂದಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​
ಶ್ರೀಮುರಳಿ
ಮದನ್​ ಕುಮಾರ್​
|

Updated on: Dec 17, 2023 | 10:53 AM

Share

‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರು ಇಂದು (ಡಿಸೆಂಬರ್​ 17) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ‘ಬಘೀರ’ (Bagheera) ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಜನ್ಮದಿನದ ಸಲುವಾಗಿ ರಿಲೀಸ್​ ಆದ ಟೀಸರ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಚಿತ್ರ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ (Bagheera Teaser) ಮೂಡಿಬಂದಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’, ‘ಸಲಾರ್​’ ರೀತಿಯೇ ಈ ಸಿನಿಮಾ ಕೂಡ ಡಾರ್ಕ್​ ಶೇಡ್​ನಲ್ಲಿ ಮೂಡಿಬರುತ್ತಿದೆ ಎಂಬುದಕ್ಕೆ ಟೀಸರ್​ ಸಾಕ್ಷಿ ಒದಗಿಸುತ್ತಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ. ಇದು ಭರ್ಜರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ ಎಂಬುದು ಸ್ಪಷ್ಟವಾಗಿದೆ.

ಬಿ. ಅಜನೀಶ್​ ಲೋಕನಾಥ್​ ಅವರು ‘ಬಘೀರ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುವಂತಿದೆ. ಪ್ರಣವ್​ ಶ್ರೀ ಪ್ರಸಾದ್​​ ಸಂಕಲನ ಮಾಡುತ್ತಿದ್ದಾರೆ. ಎಜೆ ಶೆಟ್ಟಿ ಅವರ ಛಾಯಾಗ್ರಹಣದಲ್ಲಿ ‘ಬಘೀರ’ ಸಿನಿಮಾ ಮೂಡಿಬರುತ್ತಿದೆ. ಪ್ರಶಾಂತ್​ ನೀಲ್​ ಅವರು ಕಥೆ ಬರೆದಿದ್ದಾರೆ ಎಂಬ ಕಾರಣದಿಂದ ಈ ಸಿನಿಮಾ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

ಇದನ್ನೂ ಓದಿ: ರಾಗಿಣಿ ‘ರಾಜ್ಯೋತ್ಸವ’ಕ್ಕೆ ಶುಭ ಹಾರೈಸಿದ ಶ್ರೀಮುರಳಿ

ಕಳೆದ ಕೆಲವು ವರ್ಷಗಳಿಂದ ಶ್ರೀಮುರಳಿ ಅವರು ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಈ ವರ್ಷ ಅವರು ಫ್ಯಾನ್ಸ್​ ಜೊತೆ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಇಂದು (ಡಿ.17) ಬೆಳಗ್ಗೆ 10.30ರ ನಂತರ ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್​ ರಸ್ತೆಯಲ್ಲಿ ಇರುವ ದೇವರಾಜ್​ ಅರಸ್​ ಭವನದಲ್ಲಿ ಶ್ರೀಮುರಳಿ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿದ್ದಾರೆ. ಹಾರ, ಕೇಕ್​, ಉಡುಗೊರೆ ಮುಂತಾದ್ದನ್ನು ತರುವುದು ಬೇಡ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್