AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ ಮೂಡಿಬಂದಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​
ಶ್ರೀಮುರಳಿ
ಮದನ್​ ಕುಮಾರ್​
|

Updated on: Dec 17, 2023 | 10:53 AM

Share

‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರು ಇಂದು (ಡಿಸೆಂಬರ್​ 17) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ‘ಬಘೀರ’ (Bagheera) ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಜನ್ಮದಿನದ ಸಲುವಾಗಿ ರಿಲೀಸ್​ ಆದ ಟೀಸರ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಚಿತ್ರ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ (Bagheera Teaser) ಮೂಡಿಬಂದಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’, ‘ಸಲಾರ್​’ ರೀತಿಯೇ ಈ ಸಿನಿಮಾ ಕೂಡ ಡಾರ್ಕ್​ ಶೇಡ್​ನಲ್ಲಿ ಮೂಡಿಬರುತ್ತಿದೆ ಎಂಬುದಕ್ಕೆ ಟೀಸರ್​ ಸಾಕ್ಷಿ ಒದಗಿಸುತ್ತಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ. ಇದು ಭರ್ಜರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ ಎಂಬುದು ಸ್ಪಷ್ಟವಾಗಿದೆ.

ಬಿ. ಅಜನೀಶ್​ ಲೋಕನಾಥ್​ ಅವರು ‘ಬಘೀರ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುವಂತಿದೆ. ಪ್ರಣವ್​ ಶ್ರೀ ಪ್ರಸಾದ್​​ ಸಂಕಲನ ಮಾಡುತ್ತಿದ್ದಾರೆ. ಎಜೆ ಶೆಟ್ಟಿ ಅವರ ಛಾಯಾಗ್ರಹಣದಲ್ಲಿ ‘ಬಘೀರ’ ಸಿನಿಮಾ ಮೂಡಿಬರುತ್ತಿದೆ. ಪ್ರಶಾಂತ್​ ನೀಲ್​ ಅವರು ಕಥೆ ಬರೆದಿದ್ದಾರೆ ಎಂಬ ಕಾರಣದಿಂದ ಈ ಸಿನಿಮಾ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

ಇದನ್ನೂ ಓದಿ: ರಾಗಿಣಿ ‘ರಾಜ್ಯೋತ್ಸವ’ಕ್ಕೆ ಶುಭ ಹಾರೈಸಿದ ಶ್ರೀಮುರಳಿ

ಕಳೆದ ಕೆಲವು ವರ್ಷಗಳಿಂದ ಶ್ರೀಮುರಳಿ ಅವರು ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಈ ವರ್ಷ ಅವರು ಫ್ಯಾನ್ಸ್​ ಜೊತೆ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಇಂದು (ಡಿ.17) ಬೆಳಗ್ಗೆ 10.30ರ ನಂತರ ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್​ ರಸ್ತೆಯಲ್ಲಿ ಇರುವ ದೇವರಾಜ್​ ಅರಸ್​ ಭವನದಲ್ಲಿ ಶ್ರೀಮುರಳಿ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿದ್ದಾರೆ. ಹಾರ, ಕೇಕ್​, ಉಡುಗೊರೆ ಮುಂತಾದ್ದನ್ನು ತರುವುದು ಬೇಡ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ