Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ ಮೂಡಿಬಂದಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ.

Bagheera Teaser: ‘ಬಘೀರ’ ಟೀಸರ್​ನಲ್ಲಿ ಶ್ರೀಮುರಳಿ ಅಬ್ಬರ; ‘ರೋರಿಂಗ್​ ಸ್ಟಾರ್​’ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್​
ಶ್ರೀಮುರಳಿ
Follow us
ಮದನ್​ ಕುಮಾರ್​
|

Updated on: Dec 17, 2023 | 10:53 AM

‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರು ಇಂದು (ಡಿಸೆಂಬರ್​ 17) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ‘ಬಘೀರ’ (Bagheera) ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಜನ್ಮದಿನದ ಸಲುವಾಗಿ ರಿಲೀಸ್​ ಆದ ಟೀಸರ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಚಿತ್ರ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ (Bagheera Teaser) ಮೂಡಿಬಂದಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’, ‘ಸಲಾರ್​’ ರೀತಿಯೇ ಈ ಸಿನಿಮಾ ಕೂಡ ಡಾರ್ಕ್​ ಶೇಡ್​ನಲ್ಲಿ ಮೂಡಿಬರುತ್ತಿದೆ ಎಂಬುದಕ್ಕೆ ಟೀಸರ್​ ಸಾಕ್ಷಿ ಒದಗಿಸುತ್ತಿದೆ. ಈ ಟೀಸರ್​ನಲ್ಲಿ ಯಾವುದೇ ಡೈಲಾಗ್​ ಇಲ್ಲ. ಕೇವಲ ಸಾಹಸ ದೃಶ್ಯಗಳು ಹೈಲೈಟ್​ ಆಗಿವೆ. ಇದು ಭರ್ಜರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ ಎಂಬುದು ಸ್ಪಷ್ಟವಾಗಿದೆ.

ಬಿ. ಅಜನೀಶ್​ ಲೋಕನಾಥ್​ ಅವರು ‘ಬಘೀರ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುವಂತಿದೆ. ಪ್ರಣವ್​ ಶ್ರೀ ಪ್ರಸಾದ್​​ ಸಂಕಲನ ಮಾಡುತ್ತಿದ್ದಾರೆ. ಎಜೆ ಶೆಟ್ಟಿ ಅವರ ಛಾಯಾಗ್ರಹಣದಲ್ಲಿ ‘ಬಘೀರ’ ಸಿನಿಮಾ ಮೂಡಿಬರುತ್ತಿದೆ. ಪ್ರಶಾಂತ್​ ನೀಲ್​ ಅವರು ಕಥೆ ಬರೆದಿದ್ದಾರೆ ಎಂಬ ಕಾರಣದಿಂದ ಈ ಸಿನಿಮಾ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

ಇದನ್ನೂ ಓದಿ: ರಾಗಿಣಿ ‘ರಾಜ್ಯೋತ್ಸವ’ಕ್ಕೆ ಶುಭ ಹಾರೈಸಿದ ಶ್ರೀಮುರಳಿ

ಕಳೆದ ಕೆಲವು ವರ್ಷಗಳಿಂದ ಶ್ರೀಮುರಳಿ ಅವರು ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಈ ವರ್ಷ ಅವರು ಫ್ಯಾನ್ಸ್​ ಜೊತೆ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಇಂದು (ಡಿ.17) ಬೆಳಗ್ಗೆ 10.30ರ ನಂತರ ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್​ ರಸ್ತೆಯಲ್ಲಿ ಇರುವ ದೇವರಾಜ್​ ಅರಸ್​ ಭವನದಲ್ಲಿ ಶ್ರೀಮುರಳಿ ಅವರು ಅಭಿಮಾನಿಗಳನ್ನು ಭೇಟಿ ಆಗುತ್ತಿದ್ದಾರೆ. ಹಾರ, ಕೇಕ್​, ಉಡುಗೊರೆ ಮುಂತಾದ್ದನ್ನು ತರುವುದು ಬೇಡ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ