AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜೊತೆ ಶ್ರೀಮುರಳಿ ಹೊಸ ಸಿನಿಮಾ ಅನೌನ್ಸ್

ಖ್ಯಾತ ನಟ ಶ್ರೀಮುರಳಿ ಅವರಿಗೆ ಇಂದು (ಡಿಸೆಂಬರ್​ 17) ಹುಟ್ಟುಹಬ್ಬದ ಸಂಭ್ರಮ. ಸಖತ್ ಸಡಗರದಿಂದ ಬರ್ತ್​ಡೇ ಆಚರಣೆ ಮಾಡಲಾಗಿದೆ. ಈ ವರ್ಷ ‘ಬಘೀರ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಅವರಿಗೆ ಜನ್ಮದಿನದ ಖುಷಿ ಡಬಲ್ ಎನ್ನಬಹುದು. ಇದೇ ಖುಷಿಯಲ್ಲಿ ಅಭಿಮಾನಿಗಳಿಗೆ ಇನ್ನೊಂದು ಗುಡ್ ನ್ಯೂಸ್​ ಸಿಕ್ಕಿದೆ. ಶ್ರೀಮುರಳಿ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

ತೆಲುಗಿನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜೊತೆ ಶ್ರೀಮುರಳಿ ಹೊಸ ಸಿನಿಮಾ ಅನೌನ್ಸ್
ಶ್ರೀಮುರಳಿ
ಮದನ್​ ಕುಮಾರ್​
|

Updated on: Dec 17, 2024 | 7:32 PM

Share

‘ರೋರಿಂಗ್ ಸ್ಟಾರ್​’ ಶ್ರೀಮುರಳಿ ಅವರು ಇಂದು (ಡಿ.17) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವರ್ಷ ತೆರೆಕಂಡ ‘ಬಘೀರ’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಈ ವರ್ಷ ಬರ್ತ್​ಡೇ ಅವರಿಗೆ ಸ್ಪೆಷಲ್ ಆಗಿದೆ. ಅಭಿಮಾನಿಗಳ ಜೊತೆ ಅವರು ಬರ್ತ್​ಡೇ ಸೆಲೆಬ್ರೇಟ್​ ಮಾಡಿದ್ದಾರೆ. ‘ಬಘೀರ’ ಸೂಪರ್​ ಹಿಟ್​ ಆದ ಬಳಿಕ ಶ್ರೀಮುರಳಿ ಅವರ ಹೊಸ ಸಿನಿಮಾ ಯಾವುದು ಎಂದು ತಿಳಿಯಲು ಫ್ಯಾನ್ಸ್ ಕಾದಿದ್ದರು. ಆ ಬಗ್ಗೆ ಅಪ್​ಡೇಟ್​ ಸಿಕ್ಕಿದೆ. ಶ್ರೀಮುರಳಿ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಚಿತ್ರದ ನಿರ್ದೇಶಕರು ಯಾರು? ಶೀರ್ಷಿಕೆ ಏನು? ತಾರಾಗಣದಲ್ಲಿ ಮತ್ತು ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ವಿಶೇಷ ಏನೆಂದರೆ, ಪರಭಾಷೆಯ ನಿರ್ಮಾಣ ಸಂಸ್ಥೆಗಳಿಂದ ಶ್ರೀಮುರಳಿ ಅವರಿಗೆ ಬೇಡಿಕೆ ಬಂದಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ಯಾದ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜೊತೆ ಶ್ರೀಮುರಳಿ ಅವರು ಈಗ ಕೈ ಜೋಡಿಸಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡಲಿರುವ ಹೊಸ ಚಿತ್ರದಲ್ಲಿ ಹೀರೋ ಆಗಿ ಶ್ರೀಮುರಳಿ ಅಭಿನಯಿಸಲಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಖುಷಿ ಆಗಿದೆ.

ಶ್ರೀಮುರಳಿ ನಟಿಸಲಿರುವ ಈ ಸಿನಿಮಾದ ಮೂಲಕ ಟಾಲಿವುಡ್​ನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದೆ. ಈಗಾಗಲೇ ಕನ್ನಡದ ಕೆಲವು ನಿರ್ಮಾಣ ಸಂಸ್ಥೆಗಳು ಪರಭಾಷೆ ಚಿತ್ರಗಳ ನಿರ್ಮಾಣದಲ್ಲಿ‌ ತೊಡಗಿವೆ. ಅದೇ ರೀತಿ, ಬೇರೆ ಭಾಷೆಯಲ್ಲಿ ಸಕ್ರಿಯವಾಗಿರುವ ಪ್ರೊಡಕ್ಷನ್ ಹೌಸ್​ಗಳು ಕನ್ನಡಕ್ಕೆ ಆಗಮಿಸಿದೆ.

ಇದನ್ನೂ ಓದಿ: ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ

ಜನಮೆಚ್ಚಿದ ‘ಬಘೀರ’ ಸಿನಿಮಾದ ಗೆಲುವಿನ ನಂತರ ಶ್ರೀಮುರಳಿ ಅವರು ಮತ್ತೊಂದು ಬಿಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾ ಹೇಗಿರಲಿದೆ ಎಂದು ತಿಳಿಯುವ ಕುತೂಹಲ ಅಭಿಮಾನಿಗಳ ಮನದಲ್ಲಿ ಮೂಡಿದೆ. ಶ್ರೀಮುರಳಿ ಬರ್ತಡೇ ದಿನವೇ ಅಧಿಕೃತ ಪೋಸ್ಟರ್ ಅನಾವರಣ ಮಾಡಲಾಗಿದೆ. ಶ್ರೀಮುರಳಿ ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾ ಸ್ಪೆಷಲ್ ಆಗಿರಲಿದೆ ಎಂಬ ಭರವಸೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ