AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಶ್ರೀಮುರಳಿ

ತೊನ್ನು ಸಮಸ್ಯೆ ಕುರಿತ ಕಥಾಹಂದರ ಇರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಹೇಶ್ ಗೌಡ, ಕಾಜಲ್ ಕುಂದರ್, ಜಹಂಗೀರ್, ಲಕ್ಷ್ಮಿ ಸಿದ್ದಯ್ಯ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್ ನೋಡಿ ಶ್ರೀಮುರಳಿ ಅವರು ಮೆಚ್ಚಿಕೊಂಡಿದ್ದಾರೆ. ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಶ್ರೀಮುರಳಿ
Mahesh Gowda, Sri Murali, Kaajal Kunder
ಮದನ್​ ಕುಮಾರ್​
|

Updated on: Oct 16, 2025 | 6:27 PM

Share

ವಿಶೇಷ ಕಾನ್ಸೆಪ್ಟ್ ಹೊಂದಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ (Bili Chukki Halli Hakki) ಸಿನಿಮಾ ಅಕ್ಟೋಬರ್ 24ರಂದು ಬಿಡುಗಡೆ ಆಗಲಿದೆ. ‘ಮಹಿರಾ’ ಖ್ಯಾತಿಯ ಮಹೇಶ್ ಗೌಡ (Mahesh Gowda) ಅವರು ಈ ಸಿನಿಮಾದ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿದ್ದಾರೆ. ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಅವರು ಅರ್ಪಿಸುತ್ತಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಈ ಚಿತ್ರ ಗಮನ ಸೆಳೆದಿದೆ. ಈಗ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಶ್ರೀಮುರಳಿ (Sri Murali) ಅವರು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಿದರು. ಟ್ರೇಲರ್ ನೋಡಿದ ಅವರು ಚಿತ್ರತಂಡದ ಶ್ರಮ ಕಂಡು ಭೇಷ್ ಎಂದಿದ್ದಾರೆ.

ಭಾರತೀಯ ಚಿತ್ರರಂಗದಲ್ಲೇ ಮೊದಲ ಬಾರಿಗೆ ತೊನ್ನು ಸಮಸ್ಯೆಯ ಕುರಿತು ಮೂಡಿಬಂದಿರುವ ಸಿನಿಮಾ ‘ಬಿಳಿಚುಕ್ಕಿ ಹಳ್ಳಿಹಕ್ಕಿ’. ಶ್ರೀಮುರಳಿ ಅವರು ಅತ್ಯಂತ ಹುರುಪಿನಿಂದ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದರು. ಸ್ವತಃ ತೊನ್ನು ಸಮಸ್ಯೆ ಹೊಂದಿರುವ ವ್ಯಕ್ತಿಯೇ ನಿರ್ದೇಶನ ಮಾಡಿ, ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡು ನಟಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಟಿಲಿಗೋ ಕೇಂದ್ರಿತವಾದ ಈ ಚಿತ್ರವನ್ನು ಮನಸಾರೆ ಮೆಚ್ಚಿಕೊಂಡು ಹೆಮ್ಮೆಯಿಂದ ಅರ್ಪಿಸುತ್ತಿರುವುದಾಗಿ ಶ್ರೀಮುರಳಿ ಹೇಳಿದರು.

ಈ ವೇಳೆ ನೆನಪೊಂದನ್ನು ಅವರು ಹಂಚಿಕೊಂಡರು. ಶಾಲಾ ದಿನಗಳಲ್ಲಿ ವಿಟಿಲಿಗೋ ಸಮಸ್ಯೆಯ ಹೊಂದಿದ್ದ ಗೆಳೆಯನ ಬಗ್ಗೆ ಹೇಳಿದರು. ವಿಟಿಲಿಗೋವನ್ನು ಸಮಸ್ಯೆ ಅಂದುಕೊಳ್ಳಬಾರದು ಎಂಬ ಸಂದೇಶವನ್ನೂ ತಿಳಿಸಿದರು. ಇದೇ ವೇಳೆ ಈ ಸಿನಿಮಾದ ವಿತರಣೆಗೂ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ನಿರ್ದೇಶಕ ಮಹೇಶ್ ಗೌಡ ಅವರು ಸಿನಿಮಾ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು.

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಟ್ರೇಲರ್:

‘ವಿಟಿಲಿಗೋ ಸಮಸ್ಯೆಯ ಸುತ್ತ ಹೆಣೆದಿರುವ ಕಥೆ ಎಂದಮಾತ್ರಕ್ಕೆ ಮನರಂಜನೆ ಇರುವುದಿಲ್ಲ ಅಂತ ತಿಳಿದುಕೊಳ್ಳಬೇಕಿಲ್ಲ. ಇದೊಂದು ಪಕ್ಕಾ ಕಮರ್ಶಿಯಲ್ ಶೈಲಿಯ ಸಿನಿಮಾ. ಈ ರೀತಿಯ ಗಹನವಾದ ಕಥೆಯನ್ನು ಗಂಭೀರವಾಗಿ ಕಟ್ಟಿಕೊಟ್ಟರೆ ಪ್ರೇಕ್ಷಕರಿಗೆ ತಲುಪುವುದು ಕಷ್ಟ. ಹಾಗಾಗಿ ದುಗುಡವನ್ನೂ ಸಹ ತೆಳು ಹಾಸ್ಯದ ಮೂಲಕ ದಾಟಿಸಿ, ಸಾಮಾಜಿಕ ಸಂದೇಶ ನೀಡಲಾಗಿದೆ. ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾ ಇದು’ ಎಂದು ಮಹೇಶ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: ತೊನ್ನು ಸಮಸ್ಯೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಅಕ್ಟೋಬರ್ 24ಕ್ಕೆ ಬಿಡುಗಡೆ

‘ಹೊನ್ನುಡಿ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರದಲ್ಲಿ ಕಾಜಲ್ ಕುಂದರ್ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಹಾಗೂ ಲಕ್ಷ್ಮಿ ಸಿದ್ದಯ್ಯ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಕಿರಣ್ ಸಿಹೆಚ್‌ಎಂ ಅವರ ಛಾಯಾಗ್ರಹಣ, ಮೊನಿಷ್ ಅವರ ಸಂಕಲನ, ರಿಯೋ ಆಂಟನಿ ಅವರ ಸಂಗೀತ ಈ ಚಿತ್ರಕ್ಕಿದೆ. ಅದಿತಿ ನಾರಾಯಣ್ ಹಾಗೂ ರಘು ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಪ್ರತಾಪ್ ನಾರಾಯಣ್ ಹಾಗೂ ಮಹೇಂದ್ರ ಗೌಡ ಸಾಹಿತ್ಯ ರಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ