AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhagaja: ‘ಮದಗಜ’ ಚಿತ್ರದ ಹೊಸ ಹಾಡಿನಲ್ಲಿ ಮಿಂಚುತ್ತಿರುವ ಶ್ರೀ ಮುರಳಿ, ಆಶಿಕಾ ರಂಗನಾಥ್; ವಿಡಿಯೋ ನೋಡಿ

Srii Murali: ಶ್ರೀ ಮುರಳಿ ಹಾಗೂ ಆಶಿಕಾ ರಂಗನಾಥ್ ನಟನೆಯ ‘ಮದಗಜ’ ಚಿತ್ರದ ಹೊಸ ಹಾಡು ಬಿಡುಗಡೆಯಾಗಿದೆ. ರವಿ ಬಸ್ರೂರ್ ಸಂಗೀತವಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

Madhagaja: ‘ಮದಗಜ’ ಚಿತ್ರದ ಹೊಸ ಹಾಡಿನಲ್ಲಿ ಮಿಂಚುತ್ತಿರುವ ಶ್ರೀ ಮುರಳಿ, ಆಶಿಕಾ ರಂಗನಾಥ್; ವಿಡಿಯೋ ನೋಡಿ
‘ಮದಗಜ’ ಚಿತ್ರದಲ್ಲಿ ಶ್ರೀ ಮುರಳಿ, ಆಶಿಕಾ ರಂಗನಾಥ್
TV9 Web
| Edited By: |

Updated on: Oct 07, 2021 | 12:22 PM

Share

ಸ್ಯಾಂಡಲ್​ವುಡ್​ನಲ್ಲಿ ಈಗಾಗಲೇ ತನ್ನ ಟೀಸರ್ ಹಾಗೂ ಪೋಸ್ಟರ್ ಮುಖಾಂತರ ‘ಮದಗಜ’ ಚಿತ್ರ ಸಾಕಷ್ಟು ಸದ್ದು ಮಾಡಿದೆ. ನಟ ಶ್ರೀ ಮುರಳಿ ಹಾಗೂ ನಟಿ ಆಶಿಕಾ ರಂಗನಾಥ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹೊಸ ಹಾಡು ಬಿಡುಗಡೆಯಾಗಿದೆ. ‘ಗೆಳೆಯ ನನ್ನ ಗೆಳೆಯ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ರವಿ ಬಸ್ರೂರ್ ಸಂಗೀತ ನೀಡಿದ್ದಾರೆ. ಚೇತನ್ ಕುಮಾರ್ ಸಾಹಿತ್ಯ ರಚಿಸಿರುವ ಈ ಹಾಡಿಗೆ ಗಾಯಕಿ ವೈಶ್ ದನಿಯಾಗಿದ್ದು, ವೀಕ್ಷಕರ ಮೆಚ್ಚುಗೆ ಗಳಿಸುತ್ತಿದೆ.

2019ರಲ್ಲಿ ತೆರೆಕಂಡ ‘ಭರಾಟೆ’ ಚಿತ್ರದ ನಂತರ ಶ್ರೀ ಮುರಳಿ ನಟನೆಯ ಯಾವ ಚಿತ್ರಗಳೂ ಬಿಡುಗಡೆಯಾಗಿಲ್ಲ. ಆದ್ದರಿಂದಲೇ ‘ಮದಗಜ’ ಚಿತ್ರಕ್ಕೆ ಅಪಾರ ನಿರೀಕ್ಷೆಯಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. ಕಳೆದ ಕೆಲ ಸಮಯದ ಹಿಂದೆ ಚಿತ್ರತಂಡವು 74 ದಿನಗಳ ಚಿತ್ರೀಕರಣವನ್ನು ಪೂರೈಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿತ್ತು. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿರುವುದು ಅಭಿಮಾನಿಗಳಲ್ಲಿ ಚಿತ್ರದ ಕುರಿತು ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

ಚಿತ್ರದ ಹಾಡು ಇಲ್ಲಿದೆ:

‘ಮದಗಜ’ ಚಿತ್ರವನ್ನು ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಎಸ್.ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ನವೀನ್ ಕುಮಾರ್.ಐ ಛಾಯಾಗ್ರಹಣವಿದ್ದು, ಹರೀಶ್ ಕೊಮ್ಮೆಯವರ ಸಂಕಲನವಿದೆ. ಚಿತ್ರದಲ್ಲಿ ಟಾಲಿವುಡ್​ನ ಖ್ಯಾತ ನಟ ಜಗಪತಿ ಬಾಬು ಸೇರಿದಂತೆ ಬೃಹತ್ ತಾರಾಗಣವಿದೆ. ಚಿತ್ರತಂಡ ಈಗಾಗಲೇ ನಟಿ ಆಶಿಕಾ ರಂಗನಾಥ್ ಅವರ ಎರಡು ಭಿನ್ನ ಗೆಟಪ್​ಗಳ ಪೋಸ್ಟರ್ ಬಿಟ್ಟಿದ್ದು, ಸಾಕಷ್ಟು ಸದ್ದು ಮಾಡಿತ್ತು. ಚಿತ್ರದ ಮೊದಲ ಟೀಸರ್ ಕೂಡ ಎಲ್ಲರ ಗಮನ ಸೆಳೆದಿತ್ತು. ಪ್ರಸ್ತುತ ಬಿಡುಗಡೆಯಾಗಿರುವ ಹಾಡು ಕೂಡ ಎಲ್ಲರ ಗಮನ ಸೆಳೆದಿದ್ದು, ಈ ಚಿತ್ರದ ಮೇಲೆ ನಿರೀಕ್ಷೆ ಮತ್ತಷ್ಟು ಜಾಸ್ತಿಯಾಗಿದೆ.

ಇದನ್ನೂ ಓದಿ:

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ