AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್

Bagheera Trailer: ಶ್ರೀಮುರಳಿ ನಾಯಕನಾಗಿ ನಟಿಸಿ, ಹೊಂಬಾಳೆ ಫಿಲಮ್ಸ್​ ಬಂಡವಾಳ ಹೂಡಿದ್ದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರೆ ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬಂದಿತ್ತು. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್
ಧ್ರುವ
ರಾಜೇಶ್ ದುಗ್ಗುಮನೆ
|

Updated on: Oct 21, 2024 | 10:40 AM

Share

ನಟ ಶ್ರೀಮುರಳಿ ಅವರು ಇತ್ತೀಚೆಗೆ ಆ್ಯಕ್ಷನ್ ಹೀರೋ ಎನಿಸಿಕೊಂಡಿದ್ದಾರೆ. ಅವರು ‘ಬಘೀರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ, ಡಾ. ಸೂರಿ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಶ್ರೀಮುರಳಿ ಎರಡು ಶೇಡ್​ನ ಕಾಣಿಸಿಕೊಂಡಿದ್ದಾರೆ.

ಶ್ರೀಮುರಳಿ ಅವರು ‘ಬಘೀರ’ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಕೆಟ್ಟವರ ನಾಶ ಮಾಡಲು ‘ಬಘೀರ’ನಾಗುತ್ತಾನೆ. ಅವರದ್ದು ಎರಡು ಶೇಡ್​ನ ಪಾತ್ರ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಸಿನಿಮಾ ಉದ್ದಕ್ಕೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ.  ಅಲ್ಲಲ್ಲಿ ‘ಕೆಜಿಎಫ್’ನಂತೆ ಬ್ಲ್ಯಾಕ್​ಶೇಡ್​ನಲ್ಲಿ ಸಿನಿಮಾ ಮೂಡಿ ಬಂದಿದೆ.

ಈ ಚಿತ್ರದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ.

ಈ ಚಿತ್ರದಲ್ಲಿ ಶ್ರೀಮುರಳಿ ಅವರು ಬ್ಯಾಟ್​ಮ್ಯಾನ್ ರೀತಿಯೂ ಕಾಣಿಸಿಕೊಳ್ಳುತ್ತಾರೆ. ಈ ಟ್ರೇಲರ್ ಕೆಲವೇ ನಿಮಿಷಗಳಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ‘ರುದ್ರ + ಹರ= ಬಘೀರ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಬಘೀರ’ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರೇ ಈ ಚಿತ್ರಕ್ಕೆ ಕಥೆ ಬರೆದಿರುವುದರಿಂದ ಪರಭಾಷಿಗರು ಚಿತ್ರವನ್ನು ಇಷ್ಟಪಡಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಘೋಷಣೆಯಾಯ್ತು ಶ್ರೀಮುರಳಿಯ ‘ಬಘೀರ’ ಬಿಡುಗಡೆ ದಿನಾಂಕ

ಶ್ರೀಮುರಳಿ ನಟನೆಯ ಕೊನೆಯ ಸಿನಿಮಾ ‘ಮದಗಜ’. ಈ ಚಿತ್ರ 2021ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಸಾಧಾರಣ ಮೆಚ್ಚುಗೆ ವ್ಯಕ್ತವಾಯಿತು. ಈಗ ಅವರು ಮತ್ತೆ ತೆರೆಮೇಲೆ ಬರಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು