ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್

|

Updated on: Oct 21, 2024 | 10:40 AM

Bagheera Trailer: ಶ್ರೀಮುರಳಿ ನಾಯಕನಾಗಿ ನಟಿಸಿ, ಹೊಂಬಾಳೆ ಫಿಲಮ್ಸ್​ ಬಂಡವಾಳ ಹೂಡಿದ್ದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರೆ ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬಂದಿತ್ತು. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್
ಧ್ರುವ
Follow us on

ನಟ ಶ್ರೀಮುರಳಿ ಅವರು ಇತ್ತೀಚೆಗೆ ಆ್ಯಕ್ಷನ್ ಹೀರೋ ಎನಿಸಿಕೊಂಡಿದ್ದಾರೆ. ಅವರು ‘ಬಘೀರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ, ಡಾ. ಸೂರಿ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಶ್ರೀಮುರಳಿ ಎರಡು ಶೇಡ್​ನ ಕಾಣಿಸಿಕೊಂಡಿದ್ದಾರೆ.

ಶ್ರೀಮುರಳಿ ಅವರು ‘ಬಘೀರ’ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಕೆಟ್ಟವರ ನಾಶ ಮಾಡಲು ‘ಬಘೀರ’ನಾಗುತ್ತಾನೆ. ಅವರದ್ದು ಎರಡು ಶೇಡ್​ನ ಪಾತ್ರ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಸಿನಿಮಾ ಉದ್ದಕ್ಕೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ.  ಅಲ್ಲಲ್ಲಿ ‘ಕೆಜಿಎಫ್’ನಂತೆ ಬ್ಲ್ಯಾಕ್​ಶೇಡ್​ನಲ್ಲಿ ಸಿನಿಮಾ ಮೂಡಿ ಬಂದಿದೆ.

ಈ ಚಿತ್ರದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ.

ಈ ಚಿತ್ರದಲ್ಲಿ ಶ್ರೀಮುರಳಿ ಅವರು ಬ್ಯಾಟ್​ಮ್ಯಾನ್ ರೀತಿಯೂ ಕಾಣಿಸಿಕೊಳ್ಳುತ್ತಾರೆ. ಈ ಟ್ರೇಲರ್ ಕೆಲವೇ ನಿಮಿಷಗಳಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ‘ರುದ್ರ + ಹರ= ಬಘೀರ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಬಘೀರ’ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರೇ ಈ ಚಿತ್ರಕ್ಕೆ ಕಥೆ ಬರೆದಿರುವುದರಿಂದ ಪರಭಾಷಿಗರು ಚಿತ್ರವನ್ನು ಇಷ್ಟಪಡಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಘೋಷಣೆಯಾಯ್ತು ಶ್ರೀಮುರಳಿಯ ‘ಬಘೀರ’ ಬಿಡುಗಡೆ ದಿನಾಂಕ

ಶ್ರೀಮುರಳಿ ನಟನೆಯ ಕೊನೆಯ ಸಿನಿಮಾ ‘ಮದಗಜ’. ಈ ಚಿತ್ರ 2021ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಸಾಧಾರಣ ಮೆಚ್ಚುಗೆ ವ್ಯಕ್ತವಾಯಿತು. ಈಗ ಅವರು ಮತ್ತೆ ತೆರೆಮೇಲೆ ಬರಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.