AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ‘ವೇಷಗಳು’ ಸಿನಿಮಾ ಶೂಟಿಂಗ್: ನಾಟಕದ ಬೃಹತ್ ಸೆಟ್ ನಿರ್ಮಾಣ

ಸಾಹಿತ್ಯ ಕೃತಿ ಆಧರಿಸಿದ ‘ವೇಷಗಳು’ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗೆ ಮುಹೂರ್ತ ಸಮಾರಂಭ ನಡೆಯಿತು. ಭರತ್ ಬೋಪಣ್ಣ, ಅಂಕಿತಾ ಅಮರ್, ಶ್ರೀನಗರ ಕಿಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಕೌಶಿಕ್ ಹರ್ಷ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ 12 ಹಾಡುಗಳು ಇರಲಿವೆ.

ಶುರುವಾಯ್ತು ‘ವೇಷಗಳು’ ಸಿನಿಮಾ ಶೂಟಿಂಗ್: ನಾಟಕದ ಬೃಹತ್ ಸೆಟ್ ನಿರ್ಮಾಣ
Veshagalu Movie Team
ಮದನ್​ ಕುಮಾರ್​
|

Updated on: Dec 02, 2025 | 9:29 PM

Share

ಭರತ್ ಬೋಪಣ್ಣ, ಶ್ರೀನಗರ ಕಿಟ್ಟಿ (Srinagara Kitty), ಅಂಕಿತಾ ಅಮರ್, ತಬಲಾನಾಣಿ, ಶರತ್ ಲೋಹಿತಾಶ್ವ ಮುಂತಾದವರು ನಟಿಸಿರುವ ‘ವೇಷಗಳು’ ಸಿನಿಮಾದ ಚಿತ್ರೀಕರಣ ಆರಂಭ ಆಗಿದೆ. ರವಿ ಬೆಳಗೆರೆ ಬರೆದ ‘ವೇಷಗಳು’ ಎಂಬ ಸಣ್ಣ ಕಥೆ ಆಧರಿಸಿ ಈ ಸಿನಿಮಾ ತಯಾರಾಗುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಸಮಾರಂಭ ಮಾಡಲಾಯಿತು. ಮೈಸೂರು ರಸ್ತೆಯ ಕೆಂಗೇರಿ ಸಮೀಪದ ಜೆ.ಕೆ. ಗ್ರ್ಯಾಂಡ್ ಅರೇನಾ ಆವರಣದಲ್ಲಿ ಸಿನಿಮಾಗಾಗಿ ಬೃಹತ್ ಡ್ರಾಮಾ ಸ್ಟೇಜ್ ಸೆಟ್ ನಿರ್ಮಾಣ ಮಾಡಲಾಗಿದೆ. ಮುಹೂರ್ತ ದೃಶ್ಯಕ್ಕೆ ಡಿವೈಎಸ್​ಪಿ ರಾಜೇಶ್ ಕ್ಲ್ಯಾಪ್ ಮಾಡಿದರು. ‘ಗ್ರೀನ್ ಟ್ರೀ ಸ್ಟುಡಿಯೋಸ್’ ಮೂಲಕ ಕಿಶನ್ ರಾವ್ ದಳವಿ ಅವರು ‘ವೇಷಗಳು’ (Veshagalu) ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಶಾಕುಂತಲಾ ದುಷ್ಯಂತ ಮಹಾರಾಜನ ನಾಟಕವೇ ‘ವೇಷಗಳು’ ಸಿನಿಮಾದ ಪ್ರಥಮ ದೃಶ್ಯ. ವೃತ್ತಿಯಲ್ಲಿ ಶಿಕ್ಷಕಿ ಆಗಿರುವ ಸೌಜನ್ಯ ಅವರು ಸಂಭಾಷಣೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ರಂಗಭೂಮಿ ಕಲಾವಿದರ ಜೊತೆಗೆ ಜೋಗತಿಯರ ಜೀವನ ಶೈಲಿಯ ಬಗ್ಗೆಯೂ ಹೇಳಲಾಗುತ್ತಿದೆ. ಶ್ರೀನಗರ ಕಿಟ್ಟಿ ಅವರು ಬಸಪ್ಪ ಮತ್ತು ಬಸಮ್ಮ ಜೋಗತಿಯಾಗಿ 2 ಗೆಟಪ್​​ನಲ್ಲಿ ನಟಿಸುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಕಿಶನ್ ರಾವ್ ಮಾತನಾಡಿದರು. ‘ಬಹುತೇಕ ರಂಗಸಜ್ಜಿಕೆಯೊಳಗೇ ನಡೆಯುವ ನಾಟಕದ ಹಿನ್ನೆಲೆಯಲ್ಲಿ ಸಾಗುವ ಪ್ರೇಮಕಥೆಯಿದು. ಮಾಲೂರು ವಿಜಯ್ ಅವರು ಅದ್ಭುತವಾದ ಡ್ರಾಮಾ ಸೆಟ್ ಹಾಕಿಕೊಟ್ಟಿದ್ದಾರೆ. ಮನೋಹರ ಜೋಷಿ ಅವರು ಛಾಯಾಗ್ರಾಹಕರಾಗಿ ಸಿಕ್ಕಮೇಲೆ ಬೇರೆಯದೇ ಎನರ್ಜಿ ಬಂತು. ಕವಿರಾಜ್, ನಾಗೇಂದ್ರ ಪ್ರಸಾದ್, ವಿ. ಮನೋಹರ್, ಕಲ್ಯಾಣ್ ಸಾಹಿತ್ಯ ಬರೆಯುತ್ತಿದ್ದಾರೆ. ಸಿನಿಮಾದಲ್ಲಿ 40ರಿಂದ 50 ಭಾಗ ನಾಟಕದ ದೃಶ್ಯಗಳು ಬರುತ್ತದೆ. ಈ ಸಿನಿಮಾದ ಕಥೆ ಬಳ್ಳಾರಿಯಿಂದ ಶುರುವಾಗಿ ಉತ್ತರ ಕರ್ನಾಟಕ, ಮೈಸೂರು, ಬೆಂಗಳೂರು, ಮಧ್ಯಪ್ರದೇಶದ ತನಕ ಸಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ನಟ ಶ್ರೀನಗರ ಕಿಟ್ಟಿ ಅವರು ಮಾತನಾಡಿ, ‘ಕಿಶೋರ್ ಈ ಕಥೆಯನ್ನು ಸಿನಿಮಾ ಮಾಡುತ್ತೇನೆ ಎಂದಾಗ ನನ್ನ ಹೆಂಡತಿ ಒಪ್ಪಿದಳು. ರಂಗಭೂಮಿಯ ಒಳಹರಿವುಗಳು ಹೇಗಿರುತ್ತದೆ. ಅಲೆಮಾರಿ ತಂಡಗಳು ಯಾವ ರೀತಿ ಇರುತ್ತವೆ ಎಂಬುದನ್ನೆಲ್ಲ ನಮ್ಮ ಸಿನಿಮಾದಲ್ಲಿ ತೋರಿಸಲಿದ್ದೇವೆ. ನನ್ನ ಪಾತ್ರ ಬಸಪ್ಪ ಮತ್ತು ಬಸಮ್ಮ ಎಂಬ 2 ಶೇಡ್​ಗಳಲ್ಲಿ ಬರುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಜೋಗತಿ ಪಾತ್ರದಲ್ಲಿ ಶ್ರೀನಗರ ಕಿಟ್ಟಿ; ‘ವೇಷಗಳು’ ಸಿನಿಮಾದ ಟೀಸರ್ ಬಿಡುಗಡೆ

ಶರತ್ ಲೋಹಿತಾಶ್ವ ಅವರು ಈ ಸಿನಿಮಾದಲ್ಲಿ ಸಿಂಹಣ್ಣ ಎಂಬ ಪವರ್ ಫುಲ್ ಪಾತ್ರ ಮಾಡುತ್ತಿದ್ದಾರೆ. ನಾಟಕ ತಂಡದಲ್ಲಿ ಹಾರ್ಮೋನಿಯಂ ನುಡಿಸುವ ಪಾತ್ರವನ್ನು ತಬಲಾನಾಣಿ ಮಾತನಾಡುತ್ತಿದ್ದಾರೆ. ‘ಇವರೆಲ್ಲರ ಜತೆ ನಾನೂ ಒಂದು ಪಾತ್ರ ಮಾಡುತ್ತಿದ್ದೇನೆ ಎನ್ನುವುದೇ ಹೆಮ್ಮೆಯ ವಿಷಯ’ ಎಂದು ನಾಣಿ ಹೇಳಿದರು. ಅಲಮೇಲು ಎಂಬ ಪಾತ್ರದಲ್ಲಿ ಅಂಕಿತಾ ಅಮರ್ ನಟಿಸುತ್ತಿದ್ದಾರೆ. ಚಿನ್ನಲ್ಲ ಎಂಬ ಮುಗ್ಧ ಹುಡುಗನ ಪಾತ್ರದಲ್ಲಿ ಭರತ್ ಬೋಪಣ್ಣ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ