AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಲ್ಡ್ ಮಾಂಕ್​’ ಬಿಡುಗಡೆಗೆ ದಿನಾಂಕ ಫಿಕ್ಸ್​; ಫೆ.25ಕ್ಕೆ ತೆರೆಕಾಣಲಿದೆ ಶ್ರೀನಿ, ಅದಿತಿ ಪ್ರಭುದೇವ ಸಿನಿಮಾ

‘ಬೀರ್​ಬಲ್’​, ‘ಶ್ರೀನಿವಾಸ ಕಲ್ಯಾಣ’​ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಶ್ರೀನಿ ಅವರು ‘ಓಲ್ಡ್​ ಮಾಂಕ್​’ ಮೂಲಕ ಯಾವ ರೀತಿ ಮನರಂಜನೆ ನೀಡಲಿದ್ದಾರೆ ಎಂಬುದು ಫೆ.25ರಂದು ಗೊತ್ತಾಗಲಿದೆ. ಈ ಚಿತ್ರದ ಟ್ರೇಲರ್ ಕೌತುಕ ಮೂಡಿಸಿದೆ.

‘ಓಲ್ಡ್ ಮಾಂಕ್​’ ಬಿಡುಗಡೆಗೆ ದಿನಾಂಕ ಫಿಕ್ಸ್​; ಫೆ.25ಕ್ಕೆ ತೆರೆಕಾಣಲಿದೆ ಶ್ರೀನಿ, ಅದಿತಿ ಪ್ರಭುದೇವ ಸಿನಿಮಾ
‘ಓಲ್ಡ್​ ಮಾಂಕ್​’ ಸಿನಿಮಾದಲ್ಲಿ ಅದಿತಿ ಪ್ರಭುದೇವ, ಶ್ರೀನಿ
TV9 Web
| Edited By: |

Updated on: Jan 31, 2022 | 8:55 AM

Share

ಬಹುನಿರೀಕ್ಷಿತ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕದ ಬಗ್ಗೆ ಚಿತ್ರತಂಡಗಳು ಘೋಷಣೆ ಮಾಡುತ್ತಿವೆ. ಕೊರೊನಾ ವೈರಸ್​ ಮೂರನೇ ಅಲೆಯ ಕಾರಣದಿಂದ ರಿಲೀಸ್​ ಡೇಟ್​ ಮುಂದೂಡಿಕೊಂಡಿದ್ದ ಸಿನಿಮಾಗಳೆಲ್ಲ ಈಗ ಬಿಡುಗಡೆಗೆ ಸಜ್ಜಾಗುತ್ತಿವೆ. ಕನ್ನಡದ ‘ಓಲ್ಡ್​ ಮಾಂಕ್​’ ಸಿನಿಮಾ (Old Monk Movie) ಕೂಡ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ. ಶ್ರೀನಿ (ಎಂ.ಜಿ. ಶ್ರೀನಿವಾಸ್)​ ಮತ್ತು ಅದಿತಿ ಪ್ರಭುದೇವ (Aditi Prabhudeva) ಜೋಡಿಯಾಗಿ ನಟಿಸಿರುವ ಈ ಸಿನಿಮಾ ಫೆ.25ರಂದು ಬಿಡುಗಡೆ ಆಗಲಿದೆ. ಹಲವು ದಿನಗಳ ಮುನ್ನವೇ ‘ಓಲ್ಡ್​ ಮಾಂಕ್​’ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಇಷ್ಟೊತ್ತಿಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಅದಕ್ಕೆ ಕೊರೊನಾ ಅಡ್ಡಿ ಆಗಿತ್ತು. ಈಗ ನಿಧಾನವಾಗಿ ಗಾಂಧಿನಗರದ ವಹಿವಾಟು ಸಹಜಸ್ಥಿತಿಗೆ ಮರಳುವ ಸೂಚನೆ ಸಿಕ್ಕಿದೆ. ಅನೇಕ ಸಿನಿಮಾಗಳು ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಆ ಪೈಕಿ ‘ಓಲ್ಡ್​ ಮಾಂಕ್​’ ಕೂಡ ರಿಲೀಸ್​ಗೆ ತಯಾರಿ ಮಾಡಿಕೊಂಡಿದೆ. ಶ್ರೀನಿ (Srini) ಅವರು ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ.

2021ರ ಅಕ್ಟೋಬರ್​ನಲ್ಲಿಯೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ​ಆಗಿತ್ತು. ಒಂದು ಮಿಲಿಯನ್​ಗಿಂತಲೂ ಹೆಚ್ಚು ಬಾರಿ ಈ ಟ್ರೇಲರ್​ ವೀಕ್ಷಣೆ ಕಂಡಿದೆ. ಆ ಮೂಲಕ ಪ್ರೇಕ್ಷಕರಿಗೆ ‘ಓಲ್ಡ್​ ಮಾಂಕ್​’ ಸಿನಿಮಾ ಮೇಲೆ ಎಷ್ಟು ಕೌತುಕ ಇದೆ ಎಂಬುದು ಗೊತ್ತಾಗಿದೆ. ಸಖತ್​ ಫನ್ನಿ ಆಗಿ ಈ ಟ್ರೇಲರ್​ ಅನ್ನು ಕಟ್ಟಿಕೊಡಲಾಗಿದೆ. ರಣವೀರ್​ ಸಿಂಗ್​, ಎ.ಆರ್​. ರೆಹಮಾನ್, ಉಪೇಂದ್ರ​ ಮುಂತಾದ ಘಟಾನಿಘಟಿಗಳ ಹೆಸರುಗಳು ಟ್ರೇಲರ್​ನಲ್ಲಿ ಕಾಣಿಸಿಕೊಂಡಿದೆ. ಆದರೆ ಅವರ‍್ಯಾರಿಗೂ ಈ ಚಿತ್ರ ಸಂಬಂಧಪಟ್ಟಿಲ್ಲ! ಆರ್​ಆರ್​ಆರ್​, ಕೆಜಿಎಫ್​, ಟೈಟಾನಿಕ್​, ಅವತಾರ್​ ಮುಂತಾದ ಸಿನಿಮಾಗಳ ಶೀರ್ಷಿಕೆಗಳನ್ನು ಈ ಚಿತ್ರದ ಟ್ರೇಲರ್​ನಲ್ಲಿ ಬಳಕೆ ಮಾಡಲಾಗಿದೆ. ಆದರೆ ಆ ಸಿನಿಮಾಗಳಿಗೂ ‘ಓಲ್ಡ್​ ಮಾಂಕ್​’ ಚಿತ್ರಕ್ಕೂ ಸಂಬಂಧ ಇಲ್ಲ. ಕೌತುಕ ಮೂಡಿಸುವ ಸಲುವಾಗಿ ಇಂಥದ್ದೊಂದು ಪ್ರಯೋಗವನ್ನು ಶ್ರೀನಿ ಮಾಡಿದ್ದಾರೆ.

ಅದಿತಿ ಪ್ರಭುದೇವ, ಶ್ರೀನಿ ಜೊತೆಗೆ ಸುಜಯ್​ ಶಾಸ್ತ್ರಿ, ಎಸ್​. ನಾರಾಯಣ್​, ಸಿಹಿ ಕಹಿ ಚಂದ್ರು, ಅರುಣಾ ಬಾಲರಾಜ್​ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸೌರಭ್​ ಮತ್ತು ವೈಭವ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ದೀಪು ಎಸ್​. ಕುಮಾರ್​ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಭರತ್​ ಪರಶುರಾಮ್​ ಛಾಯಾಗ್ರಹಣ ಮಾಡಿದ್ದಾರೆ.

‘ಬೀರ್​ಬಲ್​’, ‘ಶ್ರೀನಿವಾಸ ಕಲ್ಯಾಣ’​ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಶ್ರೀನಿ ಅವರು ಈ ಬಾರಿ ಯಾವ ರೀತಿಯ ಮನರಂಜನೆ ನೀಡಲಿದ್ದಾರೆ ಎಂಬುದು ಫೆ.25ರಂದು ಗೊತ್ತಾಗಲಿದೆ. ಫೆ.25ರೊಳಗೆ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಚಿತ್ರತಂಡ ಇದೆ. ಹೌಸ್​ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಬೇಕು ಎಂಬ ಒತ್ತಾಯ ಚಿತ್ರರಂಗದಿಂದ ಕೇಳಿಬರುತ್ತಿದೆ.

ಇದನ್ನೂ ಓದಿ:

ರಿಲೀಸ್​ ಡೇಟ್​ ಮುಂದೂಡಿಕೊಂಡ ‘ಗಜಾನನ ಆ್ಯಂಡ್​ ಗ್ಯಾಂಗ್​’; ಚಿತ್ರತಂಡ ನೀಡಿದ ಕಾರಣ ಏನು?

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​