AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 28ಕ್ಕೆ ಬಿಡುಗಡೆ ಆಗಲಿದೆ ಸೃಜನ್ ನಿರ್ದೇಶನದ ಮೊದಲ ಸಿನಿಮಾ ‘ಜಿಎಸ್​ಟಿ’

ಸೃಜನ್ ಲೋಕೇಶ್ ಅವರು ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ‘ಜಿಎಸ್​ಟಿ’ ಬಿಡುಗಡೆಗೆ ಸಜ್ಜಾಗಿದೆ. ಉಪೇಂದ್ರ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಚಿತ್ರತಂಡ ಸುದ್ದಿಗೋಷ್ಠಿ ಮಾಡಿದೆ. ಇದು ಹಾರರ್ ಸಿನಿಮಾ ಆದರೂ ಕೂಡ ನಗು ಇರಲಿದೆ ಎಂದು ಸೃಜನ್ ಲೋಕೇಶ್ ಅವರು ಹೇಳಿದ್ದಾರೆ.

ನವೆಂಬರ್ 28ಕ್ಕೆ ಬಿಡುಗಡೆ ಆಗಲಿದೆ ಸೃಜನ್ ನಿರ್ದೇಶನದ ಮೊದಲ ಸಿನಿಮಾ ‘ಜಿಎಸ್​ಟಿ’
Gst Movie Trailer Launch
ಮದನ್​ ಕುಮಾರ್​
|

Updated on: Nov 12, 2025 | 3:57 PM

Share

ನಟ, ನಿರೂಪಕ ಸೃಜನ್ ಲೋಕೇಶ್ (Srujan Lokesh) ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾಗೆ ‘ಜಿಎಸ್​ಟಿ’ (GST) ಎಂದು ಶೀರ್ಷಿಕೆ ಇಡಲಾಗಿದೆ. ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ನಿರ್ಮಾಣ ಮಾಡಿದ್ದಾರೆ. ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ನವೆಂಬರ್ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ಆಗಿದೆ. ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಟ್ರೇಲರ್ ರಿಲೀಸ್ ಮಾಡಿದರು. ಪ್ರಿಯಾಂಕಾ ಉಪೇಂದ್ರ ಅವರು ಹಾಡಿನ ಪ್ರೋಮೋ ರಿಲೀಸ್ ಮಾಡಿ ಶುಭ ಹಾರೈಸಿದರು.

ಈ ಕಾರ್ಯಕ್ರಮಕ್ಕೆ ನಟಿ ತಾರಾ ಅನುರಾಧ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಸೃಜನ್ ಲೋಕೇಶ್ ಮಾತನಾಡಿದರು. ‘ಇದು ನಾನು ಕಂಡ ಕನಸು. ಅದನ್ನು ನನಸು ಮಾಡಿದವರು ನಿರ್ಮಾಪಕ ಸಂದೇಶ್. ನಾನು ಈ ಸಿನಿಮಾ ಮೂಲಕ ನಿರ್ದೇಶಕನಾಗಿದ್ದೇನೆ. ನಮ್ಮ ತಾತಾ ಸುಬ್ಬಯ್ಯ ನಾಯ್ಡು ಅವರು ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ನಮ್ಮ ತಂದೆ ಲೋಕೇಶ್ ಅವರನ್ನು ಬಾಲನಟನಾಗಿ ತೆರೆಗೆ ತಂದರು. ಬಳಿಕ ನಮ್ಮ ತಂದೆ ನಿರ್ದೇಶನದ ‘ಬುಜಂಗಯ್ಯನ ದಶಾವತಾರ’ ಚಿತ್ರದ ಮೂಲಕ ಬಾಲನಟನಾಗಿ ನಾನು ಚಿತ್ರರಂಗಕ್ಕೆ ಬಂದೆ. ಈಗ ನನ್ನ ಮಗ ಸುಕೃತ್ ನನ್ನ ಮೊದಲ ನಿರ್ದೇಶನದಲ್ಲಿ ಬೆಳ್ಳಿತೆರೆ ಪ್ರವೇಶಿಸಿದ್ದಾನೆ’ ಎಂದು ಸೃಜನ್ ಹೇಳಿದರು.

‘ಈ ಸಿನಿಮಾದಲ್ಲಿ ನಮ್ಮ ತಾಯಿ, ನಾನು ಹಾಗೂ ನನ್ನ ಮಗ ನಟಿಸಿದ್ದೇವೆ. ಇದು ಹಾರಾರ್ ಸಿನಿಮಾ ಆದರೂ ನಗುವೇ ಪ್ರಧಾನ. ಯಾವುದೇ ಸಂದೇಶ ನೀಡದೇ ನಗುವಿನ ಮೂಲಕ ಜನರ ಮನಸ್ಸನ್ನು ಗೆಲ್ಲಲ್ಲಿದ್ದೇನೆ. ಲೋಕೇಶ್ ಮ್ಯೂಸಿಕ್ ಎಂಬ ಮ್ಯೂಸಿಕ್ ಸಂಸ್ಥೆ ಸಹ ಆರಂಭಿಸಿದ್ದೇನೆ. ಅದರಲ್ಲಿ ನಮ್ಮ ಸಿನಿಮಾದ ಹಾಡುಗಳು ಬಿಡುಗಡೆ ಆಗಲಿದೆ. ಯಾರು ಊಹಿಸಲಾಗದ 4O ನಿಮಿಷಗಳ ಕ್ಲೈಮ್ಯಾಕ್ಸ್ ಇದೆ’ ಎಂದಿದ್ದಾರೆ ಸೃಜನ್ ಲೋಕೇಶ್.

ನಿರ್ಮಾಪಕ ಸಂದೇಶ್ ಅವರು ಮಾತನಾಡಿ, ‘ನಾನು ಈ ಸಿನಿಮಾದ ಕಥೆ ಕೇಳಿಲ್ಲ. ಸೃಜನ್ ನನ್ನ ಆತ್ಮೀಯ ಸ್ನೇಹಿತ. ಅವರು ಒಳ್ಳೆಯ ಸಿನಿಮಾ ಮಾಡಿರುತ್ತಾರೆ ಎಂಬ ನಂಬಿಕೆ ಇದೆ. ಇದು ನಮ್ಮ ಸಂಸ್ಥೆಯಿಂದ ನಿರ್ಮಾಣ ಆದ 34ನೇ ಸಿನಿಮಾ. ಎಂದಿನಂತೆ ಈ ಸಿನಿಮಾಗೂ ನಿಮ್ಮೆಲ್ಲರ ಬೆಂಬಲವಿರಲಿ’ ಎಂದು ಹೇಳಿದರು. ಚಿತ್ರೀಕರಣದ ಅನುಭವಗಳ ಬಗ್ಗೆ ಮಾತನಾಡಿದ ನಾಯಕಿ ರಜನಿ ಭಾರದ್ವಾಜ್ ಅವರು ತಮ್ಮ ಪಾತ್ರದ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಪ್ರಾಮಾಣಿಕ ಮಾತು

ಗಿರಿಜಾ ಲೋಕೇಶ್ ಅವರು ಮಾತನಾಡಿ, ‘ಕನ್ನಡ ಚಿತ್ರರಂಗದ ಹಲವು ಪ್ರಥಮಗಳು ಸುಬ್ಬಯ್ಯ ನಾಯ್ಡು ಅವರ ಕುಟುಂಬದ್ದೇ ಆಗಿರುವುದು ನಮಗೆ ಹೆಮ್ಮೆ ಇದೆ‌‌. ನಮ್ಮ ಕುಟುಂಬಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹ ಈ ಸಿನಿಮಾದಲ್ಲೂ ಮುಂದುವರಿಯಲಿ’ ಎಂದರು. ಹಿರಿಯ ನಟ ಅಶೋಕ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ