ಮಜಾ ಟಾಕೀಸ್​ ತಂಡವನ್ನು ಅಪರ್ಣಾ ಸೇರಿಕೊಂಡಿದ್ದು ಹೇಗೆ? ಸೃಜನ್ ರಿವೀಲ್ ಮಾಡಿದರು ಅಸಲಿ ಕಥೆ

ಅಪರ್ಣಾ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಆಗಮಿಸಿದ ಸೃಜನ್ ಅವರು ಅಗಲಿದ ಅಪರ್ಣಾಗೆ ನಮನ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿದ ಅಪರ್ಣಾ, ‘ಮಜಾ ಟಾಕೀಸ್ ನೋಡಿ ನಿಮಗೆ ಹೊಸ ಹುರುಪು ಬರ್ತಿದೆ ಎಂದು ವೈದ್ಯರು ಅಪರ್ಣಾಗೆ ಹೇಳಿದ್ದರಂತೆ.

ಮಜಾ ಟಾಕೀಸ್​ ತಂಡವನ್ನು ಅಪರ್ಣಾ ಸೇರಿಕೊಂಡಿದ್ದು ಹೇಗೆ? ಸೃಜನ್ ರಿವೀಲ್ ಮಾಡಿದರು ಅಸಲಿ ಕಥೆ
ಅಪರ್ಣಾ-ಸೃಜನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 12, 2024 | 2:13 PM

ಸೃಜನ್ ಲೋಕೇಶ್ ಅವರು ನಡೆಸಿಕೊಡುತ್ತಿದ್ದ ‘ಮಜಾ ಟಾಕೀಸ್​​’ನಲ್ಲಿ ಅಪರ್ಣಾ ಅವರು ನಟಿಸಿದ್ದರು. ಅವರು ವರಲಕ್ಷ್ಮಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈ ಪಾತ್ರ ಹುಟ್ಟಿಕೊಂಡಿದ್ದು ಹೇಗೆ? ಈ ಪಾತ್ರಕ್ಕೆ ಅವರನ್ನು ಆಯ್ಕೆ ಮಾಡಿಕೊಂಡಿದ್ದು ಹೇಗೆ ಎನ್ನುವ ಪ್ರಶ್ನೆಗೆ ಸೃಜನ್ ಲೋಕೇಶ್ ಅವರು ಮಾತನಾಡಿದ್ದಾರೆ. ಅಪರ್ಣಾ ಅವರು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ.

ಅಪರ್ಣಾ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಆಗಮಿಸಿದ ಸೃಜನ್ ಅವರು ಅಗಲಿದ ಅಪರ್ಣಾಗೆ ನಮನ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿದ ಅಪರ್ಣಾ, ‘ಮಜಾ ಟಾಕೀಸ್ ನೋಡಿ ನಿಮಗೆ ಹೊಸ ಹುರುಪು ಬರ್ತಿದೆ ಎಂದು ವೈದ್ಯರು ಅಪರ್ಣಾಗೆ ಹೇಳಿದ್ದರಂತೆ. ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದ ಎಂದು ಅವರು ನನಗೆ ಹೇಳಿದ್ದರು. ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದರು. ಆದರೂ ತಗ್ಗಿ-ಬಗ್ಗಿ ನಡೆಯುತ್ತಿದ್ದರು. ಎರಡು ವರ್ಷಗಳ ಕಾಲ ಕ್ಯಾನ್ಸರ್​ನಿಂದ ಬಳಲಿದ್ದರು’ ಎಂದು ಬೇಸರದ ನುಡಿಗಳನ್ನು ಆಡಿದ್ದಾರೆ ಸೃಜನ್.

‘ನಾನು ಅಪರ್ಣಾ ಪಾತ್ರಕ್ಕೆ ವರಲಕ್ಷ್ಮಿ ಅಂತ ಹೆಸರು ಇಟ್ಟಿದ್ದೆ. ಅವರೇ ಒನ್ ಆ್ಯಂಡ್ ಓನ್ಲಿ ವರಲಕ್ಷ್ಮಿ ಅಂತ ಹೆಸರು ಇಟ್ಟುಕೊಂಡರು. ಮಜಾ ಟಾಕೀಸ್ ಒಂದು ನೆಪ ಮಾತ್ರ. ಅವರಲ್ಲಿರೋ ಪ್ರತಿಭೆಯನ್ನು ಇದರಲ್ಲಿ ತೋರಿಸಿದರು. ಅವರು ಶೂಟಿಂಗ್ ವೇಳೆ ಯಾವಾಗಲೂ ರೀಟೇಕ್ ತೆಗೆದುಕೊಂಡಿಲ್ಲ ಎಂದಿದ್ದಾರೆ ಸೃಜನ್. ಈ ಮೂಲಕ ಅಪರ್ಣಾ ನಟನೆಯನ್ನು ಬಾಯ್ತುಂಬ ಹೊಗಳಿದ್ದಾರೆ.

ಇದನ್ನೂ ಓದಿ: ಅಪರ್ಣಾಗೆ ಮದುವೆ ಮಾಡಬೇಡಿ ಎಂದು ಕೋರಿದ್ದ ನಿರ್ದೇಶಕ; ಚಿತ್ರರಂಗಕ್ಕೆ ಬರಲು ಕಾರಣವಾಗಿದ್ದು ಇದೇ ವ್ಯಕ್ತಿ  

‘ಅಪರ್ಣಾ ಅವರನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದ್ದು ನನ್ನ ಪತ್ನಿ. ಮಜಾ ಟಾಕೀಸ್ ಹಾಸ್ಯ ಶೋ. ಅವರು ಎಲ್ಲರ ಎದುರು ಸದಾ ಗಂಭೀರವಾಗಿ ಇರುತ್ತಿದ್ದರು. ಹೀಗಾಗಿ, ತಮಗೆ ಈ ಶೋ ಸರಿ ಹೊಂದಲ್ಲ ಎಂದುಕೊಂಡಿದ್ದರು. ಕೊನೆಗೆ ನನ್ನ ಪತ್ನಿ ಅವರೇ ಈ ಪಾತ್ರ ಮಾಡಿಸಲು ಒಪ್ಪಿಸಿದರು. ಅಪರ್ಣಾ ನಮ್ಮ ಮನಸ್ಸಲ್ಲಿ ಹಾಗೆಯೇ ಇರುತ್ತಾರೆ. ಅವರ ನೆನಪು ಶಾಶ್ವತವಾಗಿ ಇರುತ್ತದೆ’ ಎಂದಿದ್ದಾರೆ ಸೃಜನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ