AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗಲಿದೆ ‘GST’ ಸಿನಿಮಾ, ಇದೆ ಹಲವು ವಿಶೇಷತೆಗಳು

ಕನ್ನಡದಲ್ಲಿ ಭಿನ್ನ ಹೆಸರಿನ ಸಿನಿಮಾಗಳು ಬರುತ್ತಿವೆ. ಉಪೇಂದ್ರ ‘ಯುಐ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ತಂಡವೊಂದು ‘ಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಇದೀಗ ‘ಜಿಎಸ್​ಟಿ’ ಹೆಸರಿನ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಶೀಘ್ರ ಬಿಡುಗಡೆ ಆಗಲಿದೆ.

ಬಿಡುಗಡೆ ಆಗಲಿದೆ ‘GST’ ಸಿನಿಮಾ, ಇದೆ ಹಲವು ವಿಶೇಷತೆಗಳು
ಮಂಜುನಾಥ ಸಿ.
|

Updated on: Aug 12, 2024 | 10:08 PM

Share

ಕನ್ನಡದಲ್ಲಿ ಭಿನ್ನ ಹೆಸರಿನ ಸಿನಿಮಾಗಳು ಒಂದರ ಹಿಂದೊಂದು ತೆರೆಗೆ ಬರುತ್ತಿವೆ. ಉಪೇಂದ್ರ ಆರಂಭಿಸಿದ ಈ ಟ್ರೆಂಡ್ ಇಂದಿಗೂ ನಡೆದುಕೊಂಡು ಬರುತ್ತಿದೆ. ಇದೀಗ ಉಪೇಂದ್ರ ‘ಯುಐ’ ಎಂದು ಭಿನ್ನ ಹೆಸರಿಟ್ಟು ಸಿನಿಮಾ ಮಾಡುತ್ತಿದ್ದಾರೆ. ಇನ್ನೊಂದು ಹೊಸ ತಂಡ ‘ಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಇದರ ಜೊತೆಗೆ ‘ಜಿಎಸ್​ಟಿ’ ಹೆಸರಿನ ಸಿನಿಮಾ ಸಹ ನಿರ್ಮಾಣಗೊಂಡಿದೆ. ಸೃಜನ್ ಲೋಕೇಶ್ ನಟಿಸಿರುವ ‘ಜಿಎಸ್​ಟಿ’ ಸಿನಿಮಾ ಇತ್ತೀಚೆಗಷ್ಟೆ ಚಿತ್ರೀಕರಣ ಮುಗಿಸಿದ್ದು ಶೀಘ್ರವೇ ಬಿಡುಗಡೆ ಸಹ ಆಗಲಿದೆ. ಅಂದಹಾಗೆ ಈ ‘ಜಿಎಸ್​ಟಿ’ ಸಿನಿಮಾಕ್ಕೂ ತೆರಿಗೆಗೂ ಯಾವುದೇ ಸಂಬಂಧವಿಲ್ಲ.

ನಿರ್ಮಾಪಕ ಸಂದೇಶ್ ಅವರು ‘ಜಿಎಸ್​ಟಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಸೃಜನ್ ಲೋಕೇಶ್ ನಾಯಕನಾಗಿ ನಟಿಸಿದ್ದಾರೆ. ಮಾತ್ರವಲ್ಲದೆ ಪ್ರಥಮ ಬಾರಿಗೆ ನಿರ್ದೇಶನವನ್ನು ಸಹ ಮಾಡಿದ್ದಾರೆ. ‘GST’ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಕ್ತಾಯ ಆಗಿದೆ. ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್ ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ. ಈ ಹಾಡುಗಳನ್ನು ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಬರೆದಿದ್ದಾರೆ. ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ “ಜಿ ಎಸ್ ಟಿ” ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಈಗ ಸಿನಿಮಾದ ಸಿಜಿ ಕಾರ್ಯ ನಡೆಯಲಿದೆ.

ಇದನ್ನೂ ಓದಿ:ಆ್ಯಂಕರ್​ಗೆ ದುಡ್ಡು ಕೊಡಲ್ಲ ಸೃಜನ್ ಲೋಕೇಶ್; ತಾರಾ ಹೊಸ ಆರೋಪ

‘GST’ ಸಿನಿಮಾ ಕೆಲ ವಿಶೇಷತೆಗಳನ್ನು ಒಳಗೊಂಡಿದೆ. ಈ ಸಿನಿಮಾದ ನಿರ್ಮಾಪಕ ಸಂದೇಶ್, ಪ್ರಮುಖ ಪಾತ್ರದಲ್ಲಿ ನಟಸಿದ್ದಾರೆ ಸಹ. ಆದರೆ ಅವರು ಯಾವ ಪಾತ್ರದಲ್ಲಿ ನಟಿಸಿದ್ದಾರೆ ಎಂಬುದನ್ನು ನಿರ್ದೇಶಕ ಸೃಜನ್ ಗುಟ್ಟಾಗಿ ಇಟ್ಟಿದ್ದಾರೆ. ಈ ಸಿನಿಮಾದಲ್ಲಿ ಸೃಜನ್​ರ ತಾಯಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿರುವುದು ವಿಶೇಷ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೆ ‘GST’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಜಿಎಸ್​ಟಿ ಎಂದರೆ “ಘೋಸ್ಟ್ ಇನ್ ಟ್ರಬಲ್” ಎಂದರ್ಥ.

ನಾಯಕ ಸೃಜನ್ ಲೋಕೇಶ್​ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟನೆ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!