AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sruthi Hariharan: ಇದು ಶ್ರುತಿ ಹರಿಹರನ್ ಮೀಟೂ ಕೇಸ್​ ನಡೆದು ಬಂದ ಹಾದಿ; ಇಲ್ಲಿದೆ ಸಂಪೂರ್ಣ ಟೈಮ್​ಲೈನ್​

ಶ್ರುತಿ ಹರಿಹರನ್ ಮೀಟೂ ಕೇಸ್​ನಲ್ಲಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಈ ಪ್ರಕರಣ ನಡೆದು ಬಂದ ಹಾದಿ ಬಗ್ಗೆ ಇಲ್ಲಿದೆ ವಿವರ.

Sruthi Hariharan: ಇದು ಶ್ರುತಿ ಹರಿಹರನ್ ಮೀಟೂ ಕೇಸ್​ ನಡೆದು ಬಂದ ಹಾದಿ; ಇಲ್ಲಿದೆ ಸಂಪೂರ್ಣ ಟೈಮ್​ಲೈನ್​
ಅರ್ಜುನ್ ಸರ್ಜಾ-ಶ್ರತಿ ಹರಿಹರನ್
ರಾಜೇಶ್ ದುಗ್ಗುಮನೆ
|

Updated on: Jun 09, 2023 | 11:22 AM

Share

ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ (Arjun Sarja) ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದರು. ಅವರಿಂದ ಲೈಂಗಿಕ ಕಿರುಕುಳ ಆಗಿದೆ ಎಂದು ಅವರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಶ್ರುತಿ ಹರಿಹರನ್ (Sruthi Hariharan) ಆರೋಪವನ್ನು ಕೆಲವರು ಟೀಕಿಸಿದರೆ ಇನ್ನೂ ಕೆಲವರು ನಟಿಯನ್ನು ಬೆಂಬಲಿಸಿದ್ದರು. ಮೂರು ವರ್ಷ ತನಿಖೆ ನಡೆಸಿದ್ದರೂ ಪೊಲೀಸರಿಗೆ ಸಾಕ್ಷ್ಯ ಸಿಕ್ಕಿರಲಿಲ್ಲ. ಹೀಗಾಗಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಈ ಪ್ರಕರಣ ನಡೆದು ಬಂದ ಹಾದಿ ಬಗ್ಗೆ ಇಲ್ಲಿದೆ ವಿವರ.

‘ವಿಸ್ಮಯ’ ಚಿತ್ರದಲ್ಲಿ ನಟಿಸಿದ್ದ ಅರ್ಜುನ್-ಶ್ರುತಿ

ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ‘ವಿಸ್ಮಯ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಅರುಣ್​ ವೈದ್ಯನಾಥನ್​ ಈ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರ ಮಾಡಿದ್ದರು. ಈ ಚಿತ್ರದ ಶೂಟಿಂಗ್ 2015-16ರಲ್ಲಿ ನಡೆದಿತ್ತು. 2017ರಲ್ಲಿ ಸಿನಿಮಾ ರಿಲೀಸ್ ಆಗಿತ್ತು.

2018ರಲ್ಲಿ ಆರೋಪ ಮಾಡಿದ ನಟಿ

2018ರಲ್ಲಿ ಮೀ ಟೂ ಆಂದೋಲನ ಆರಂಭ ಆಗಿತ್ತು. ಅನೇಕ ನಟಿಯರು ತಮಗಾದ ಕಹಿ ಅನುಭವ ಬಗ್ಗೆ ಹೇಳಿಕೊಂಡಿದ್ದರು. ಮಾಧ್ಯಮದ ಜೊತೆ ಮಾತನಾಡುತ್ತಾ ಶ್ರುತಿ ಹರಿಹರನ್ ಕೂಡ ತಮಗೂ ಲೈಂಗಿಕ ಕಿರುಕುಳ ಆಗಿತ್ತು ಎಂದಿದ್ದರು. ‘ವಿಸ್ಮಯ’ ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದರು. ಇದಾದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು.

ನಡೆದಿತ್ತು ಸಂಧಾನ ಪ್ರಯತ್ನ

ಶ್ರುತಿ ಹಾಗೂ ಅರ್ಜುನ್ ಮಧ್ಯೆ ಸಂಧಾನ ಪ್ರಯತ್ನ ಕೂಡ ಆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

ಮೂರು ವರ್ಷ ನಡೆದಿತ್ತು ತನಿಖೆ

ಶ್ರುತಿ ನೀಡಿದ ದೂರನ್ನು ಆಧರಿಸಿ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲು ಆಗಿತ್ತು. ಮೂರು ವರ್ಷ ತನಿಖೆಯೂ ನಡೆಯಿತು. ಆದರೆ, ಸಾಕ್ಷ್ಯ ಸಿಗದ ಕಾರಣ ಕಾರಣ 2021 ಡಿಸೆಂಬರ್​ನಲ್ಲಿ ಕೋರ್ಟ್​​ಗೆ ಪೊಲೀಸರು ಬಿ ರಿಪೋರ್ಟ್​ ಸಲ್ಲಿಕೆ ಮಾಡಿದ್ದರು.

ಏನಿದು ಬಿ ರಿಪೋರ್ಟ್

ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌.

ಇದನ್ನೂ ಓದಿ: Sruthi Hariharan: ಮತ್ತೆ ಮುನ್ನೆಲೆಗೆ ಬಂದ ಮೀಟೂ ಕೇಸ್​; ಬಿ ರಿಪೋರ್ಟ್​ ಚಾಲೆಂಜ್ ಮಾಡಿದ ಶ್ರುತಿ ಹರಿರಹರನ್​ಗೆ ನೋಟಿಸ್

ಚಾಲೆಂಜ್ ಮಾಡಿದ ಶ್ರುತಿ ಹರಿಹರನ್

ಪೊಲೀಸರ ಬಿ ರಿಪೋರ್ಟ್​​ನ ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಅವರಿಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್​ನಿಂದ ನೋಟಿಸ್​ ಜಾರಿ ಆಗಿದೆ. ಸಾಕ್ಷ್ಯ ಒದಗಿಸುವಂತೆ ಶ್ರುತಿಗೆ ಸೂಚಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!