AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಂತ್​ ರಾವ್​ ಬಿಡುಗಡೆ ಮಾಡಿದ ‘ಸಾರಾಂಶ’ ಟ್ರೇಲರ್​ ಹೇಗಿದೆ ನೋಡಿ..

ಈಗಿನ ಕಾಲಕ್ಕೆ ತಕ್ಕಂತಹ ಕಥೆಯನ್ನು ಆಯ್ದುಕೊಂಡು ‘ಸಾರಾಂಶ’ ಸಿನಿಮಾ ಮಾಡಲಾಗಿದೆ. ಸೂರ್ಯ ವಸಿಷ್ಠ ಅವರು ನಿರ್ದೇಶನದ ಜೊತೆಗೆ ಒಂದು ಪ್ರಧಾನ ಪಾತ್ರವನ್ನೂ ಮಾಡಿದ್ದಾರೆ. ದೀಪಕ್ ಸುಬ್ರಮಣ್ಯ ಅವರ ಪಾತ್ರ ವಿಶಿಷ್ಟವಾಗಿ ಇರಲಿದೆ. ಶ್ರುತಿ ಹರಿಹರನ್ ಅವರು ಮಾಯಾ ಎಂಬ ಪಾತ್ರದ ಮೂಲಕ ಪ್ರೇಕ್ಷಕರನ್ನು ಎದುರಾಗಲಿದ್ದಾರೆ.

ಹೇಮಂತ್​ ರಾವ್​ ಬಿಡುಗಡೆ ಮಾಡಿದ ‘ಸಾರಾಂಶ’ ಟ್ರೇಲರ್​ ಹೇಗಿದೆ ನೋಡಿ..
‘ಸಾರಾಂಶ’ ಸಿನಿಮಾದ ಟ್ರೇಲರ್​
ಮದನ್​ ಕುಮಾರ್​
|

Updated on:Feb 01, 2024 | 5:31 PM

Share

ಒಂದಷ್ಟು ಕಾರಣಗಳಿಂದ ಕನ್ನಡದ ‘ಸಾರಾಂಶ’ ಸಿನಿಮಾ (Saramsha Movie) ಕೌತುಕ ಮೂಡಿಸಿದೆ. ಫೆಬ್ರವರಿ 15ರಂದು ಬಿಡುಗಡೆ ಆಗಲಿರುವ ಈ ಸಿನಿಮಾಗೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಪ್ರೇಕ್ಷಕರ ಕುತೂಹಲ ಕೆರಳಿಸಿರುವ ಈ ಸಿನಿಮಾ ತಂಡ ಈಗ ಟ್ರೇಲರ್​ (Saramsha Movie Trailer) ಬಿಡುಗಡೆ ಮಾಡಿದೆ. ಆ ಮೂಲಕ ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಿರ್ದೇಶಕ ಹೇಮಂತ್ ಎಂ. ರಾವ್​ (Hemanth M. Rao) ಅವರು ಇತ್ತೀಚೆಗೆ ‘ಸಾರಾಂಶ’ ಸಿನಿಮಾದ ಟ್ರೇಲರ್​ ಅನಾವರಣ ಮಾಡಿ ಶುಭ ಕೋರಿದ್ದಾರೆ.

ಬಹಳ ಡಿಫರೆಂಟ್​ ಆಗಿ ‘ಸಾರಾಂಶ’ ಸಿನಿಮಾದ ಟ್ರೇಲರ್​ ಮೂಡಿಬಂದಿದೆ. ಇಡೀ ಸಿನಿಮಾದ ಕಥಾವಸ್ತು ಯಾವ ರೀತಿ ಇದೆ ಎಂಬುದರ ಝಲಕ್​ ತೋರಿಸುವ ರೀತಿಯಲ್ಲಿ ಈ ಟ್ರೇಲರ್​ ಮೂಡಿಬಂದಿದೆ. ಈ ಸಿನಿಮಾದಲ್ಲಿ ಶ್ರುತಿ ಹರಿಹರನ್​, ಸೂರ್ಯ ವಸಿಷ್ಠ, ದೀಪಕ್​ ಸುಬ್ರಮಣ್ಯ, ಶ್ವೇತಾ ಗುಪ್ತಾ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡದವರು ಭಾಗಿಯಾಗಿ ಒಂದಷ್ಟು ಮಾಹಿತಿ ಹಂಚಿಕೊಂಡರು.

ಈಗಿನ ಕಾಲಕ್ಕೆ ತಕ್ಕಂತಹ ಕಥೆಯನ್ನು ಆಯ್ದುಕೊಂಡು ‘ಸಾರಾಂಶ’ ಸಿನಿಮಾ ಮಾಡಲಾಗಿದೆ. ಸೂರ್ಯ ವಸಿಷ್ಠ ಅವರು ನಿರ್ದೇಶನದ ಜೊತೆಗೆ ಒಂದು ಪ್ರಧಾನ ಪಾತ್ರವನ್ನೂ ಮಾಡಿದ್ದಾರೆ. ದೀಪಕ್ ಸುಬ್ರಮಣ್ಯ ಅವರ ಪಾತ್ರ ವಿಶಿಷ್ಟವಾಗಿ ಇರಲಿದೆ. ಶ್ರುತಿ ಹರಿಹರನ್ ಅವರು ಮಾಯಾ ಎಂಬ ಪಾತ್ರದ ಮೂಲಕ ಪ್ರೇಕ್ಷಕರನ್ನು ಎದುರಾಗಲಿದ್ದಾರೆ. ಈ ಎಲ್ಲ ಪಾತ್ರಗಳ ಪರಿಚಯ ಈ ಟ್ರೇಲರ್​ನಲ್ಲಿ ಆಗಿದೆ.

ಇದನ್ನೂ ಓದಿ: ‘ಸಾರಾಂಶ’: ಕತೆಗಾರನಿಂದ ಪಾತ್ರವೋ, ಪಾತ್ರದಿಂದ ಕತೆಗಾರನೋ

ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸೂಚನೆ ಸಿಗುತ್ತಿದೆ. ಕನ್ನಡದ ಬಗ್ಗೆ ಬಹಳ ಪ್ರೀತಿ, ಆಸಕ್ತಿ ಇಟ್ಟುಕೊಂಡಿರುವ ಕನ್ನಡೇತರ ಪುಸ್ತಕ ಪ್ರಕಾಶಕರ ಪಾತ್ರವೂ ‘ಸಾರಾಂಶ’ ಸಿನಿಮಾದಲ್ಲಿದೆ. ಟ್ರೇಲರ್​ನಲ್ಲಿ ಮುಖ್ಯವಾಗಿ 2 ಬೊಂಬೆಗಳ ಪಾತ್ರ ಗಮನ ಸೆಳೆಯುತ್ತಿವೆ. ಆ ಪಾತ್ರಗಳನ್ನು ರಾಮ್ ಪ್ರಸಾದ್ ಬಾಣಾವರ ಹಾಗೂ ಸತೀಶ್ ಕುಮಾರ್ ಮಾಡಿದ್ದಾರೆ.

‘ಸಾರಾಂಶ’ ಸಿನಿಮಾದ ಟ್ರೇಲರ್​:

ರವಿ ಕಶ್ಯಪ್ ಹಾಗೂ ಆರ್.ಕೆ. ನಲ್ಲಮ್ ಅವರ ‘ವಿಭಾ ಕಶ್ಯಪ್ ಪ್ರೊಡಕ್ಷನ್ಸ್’ ಮತ್ತು ‘ಕ್ಲ್ಯಾಪ್ ಬೋರ್ಡ್ ಪ್ರೊಡಕ್ಷನ್’ ಮೂಲಕ ‘ಸಾರಾಂಶ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ಪೃಥ್ವಿ ಬನವಾಸಿ, ಸತೀಶ್ ಕುಮಾರ್, ರಾಮ್ ಮಂಜುನಾಥ್ ಮುಂತಾದವರು ಕೂಡ ನಟಿಸಿದ್ದಾರೆ. ಅಪರಾಜಿತ್ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರದೀಪ್ ನಾಯಕ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಅನಂತ್ ಭಾರದ್ವಾಜ್ ಅವರ ಛಾಯಾಗ್ರಹಣವಿದೆ. ಈ ಸಿನಿಮಾಗೆ ಉದಿತ್ ಹರಿತಾಸ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:26 pm, Thu, 1 February 24

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ