AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕಿತ ಸ್ನೇಹಿತರಿಗೆ ಬೆಡ್​ ಸಿಗದೇ 13 ಗಂಟೆ ಅಲೆದಾಡಿದ ನಟಿ ಶ್ರುತಿ ಹರಿಹರನ್​

ಬೆಡ್​ ಕೊಡಿಸಲು ಶ್ರುತಿ ಹರಿಹರನ್​ ಅವರು ಕಷ್ಟಪಟ್ಟಿದ್ದಾರೆ. ಸತತ 13 ಗಂಟೆಗಳ ಕಾಲ ಅವರು ಹರಸಾಹಸ ಪಟ್ಟಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕೊವಿಡ್​ ಸೋಂಕಿತ ಸ್ನೇಹಿತರಿಗೆ ಬೆಡ್​ ಸಿಗದೇ 13 ಗಂಟೆ ಅಲೆದಾಡಿದ ನಟಿ ಶ್ರುತಿ ಹರಿಹರನ್​
ಶ್ರುತಿ ಹರಿಹರನ್
ಮದನ್​ ಕುಮಾರ್​
|

Updated on: May 01, 2021 | 2:21 PM

Share

ಸದ್ಯಕ್ಕಂತೂ ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿ ಕಡಿಮೆ ಆಗುವಂತೆ ಕಾಣುತ್ತಿಲ್ಲ. ಎಷ್ಟೇ ಹಣ, ಪ್ರಭಾವ ಬಳಸಿದರೂ ಜನರನ್ನು ಉಳಿಸಿಕೊಳ್ಳಲು ಆಗದಂತಹ ವಾತಾವರಣ ನಿರ್ಮಾಣ ಆಗಿದೆ. ಈ ಸಂದರ್ಭದಲ್ಲಿ ತಮ್ಮವರನ್ನು ಉಳಿಸಿಕೊಳ್ಳಲು ಸೆಲೆಬ್ರಿಟಿಗಳು ಕೂಡ ಕಷ್ಟಪಡುತ್ತಿದ್ದಾರೆ. ಇತ್ತೀಚೆಗೆ ನಟಿ ಶ್ರುತಿ ಹರಿಹರನ್​ ಅವರು ಸ್ನೇಹಿತರೊಬ್ಬರಿಗೆ ಚಿಕಿತ್ಸೆ ಕೊಡಿಸಲು ಪರದಾಡಿದ್ದಾರೆ.

ಕೊವಿಡ್​ ಸೋಂಕಿತ ಸ್ನೇಹಿತರಿಗಾಗಿ ಬೆಡ್​ ಕೊಡಿಸಲು ಶ್ರುತಿ ಹರಿಹರನ್​ ಅವರು ಕಷ್ಟಪಟ್ಟಿದ್ದಾರೆ. ಸತತ 13 ಗಂಟೆಗಳ ಕಾಲ ಅವರು ಹರಸಾಹಸ ಪಟ್ಟಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಒಬ್ಬ ರೋಗಿಗೆ ಬೆಡ್​ ಸಿಗಬೇಕಿದ್ದರೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಶ್ರುತಿ ಹರಿಹರನ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೇಳಿಕೊಂಡಿರುವ ಪ್ರಕಾರ, ಯಾರಿಗಾಗಿ ಅವರು ಬೆಡ್​ ವ್ಯವಸ್ಥೆ ಮಾಡಲು ಕಷ್ಟಪಡುತ್ತಿದ್ದರೋ ಆ ವ್ಯಕ್ತಿ ನಿಧನರಾಗಿದ್ದಾರೆ. ಸೂಕ್ತ ಸಮಯಕ್ಕೆ ಐಸಿಯು ಸಿಗದ ಕಾರಣ ಅವರು ಅಸುನೀಗಿದರು ಎಂಬ ಬೇಸರದ ವಿಷಯವನ್ನು ಶ್ರುತಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಸಹಾಯಕ ಸ್ಥಿತಿಯಲ್ಲಿ ಇದ್ದಾರೆ ಎಂಬುದಕ್ಕೆ ಇದು ಉದಾಹರಣೆ ಆಗಿದೆ. ಇತ್ತೀಚೆಗಷ್ಟೇ ತಮ್ಮ ಸಹೋದರ ಕೋಮಲ್​ ಕುಮಾರ್​ ಅವರಿಗೆ ಚಿಕಿತ್ಸೆ ಕೊಡಿಸಲು ತೀವ್ರ ಕಷ್ಟ ಅನುಭವಿಸಬೇಕಾಯಿತು ಎಂದು ನಟ ಜಗ್ಗೇಶ್​ ಹೇಳಿಕೊಂಡಿದ್ದರು.

ಕೆಲವೇ ದಿನಗಳಿಂದ ಚಿತ್ರರಂಗದ ಅನೇಕರು ಕೊರೊನಾ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ಏ.26ರಂದು ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ಕೋಟಿ ರಾಮು ಅವರು ನಿಧನರಾದರು. ಯುವ ನಟ-ನಿರ್ಮಾಪಕ ಡಿ.ಎಸ್​. ಮಂಜುನಾಥ್, ಪೆಟ್ರೋಮ್ಯಾಕ್ಸ್​ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​ ಅವರು ಕೂಡ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹೀಗೆ ಕೊರೊನಾ ಮಹಾಮಾರಿಯ ಮರಣ ಮೃದಂಗ ಮುಂದುವರಿಸಿದೆ. ಆದಷ್ಟು ಸುರಕ್ಷಿತವಾಗಿರಿ ಎಂದು ಅನೇಕ ಸೆಲೆಬ್ರಿಟಿಗಳು ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!