AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಶುರುವಾಯ್ತು ರಾಜಮೌಳಿ-ಮಹೇಶ್ ಬಾಬು ಸಿನಿಮಾ

SS Rajamouli-Mahesh Babu: ಎಸ್​ಎಸ್ ರಾಜಮೌಳಿ ಮತ್ತು ಮಹೇಶ್ ಬಾಬು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂದು ಘೋಷಣೆ ಮಾಡಿ ವರ್ಷಗಳೇ ಕಳೆದಿವೆ. ಇದೀಗ ಕೊನೆಗೂ ಇಂದು (ಜನವರಿ 02) ಅಧಿಕೃತವಾಗಿ ಈ ಇಬ್ಬರ ಸಿನಿಮಾ ಸೆಟ್ಟೇರಿದೆ. ಇಂದು ಹೈದರಾಬಾದ್​ನಲ್ಲಿ ಸಿನಿಮಾದ ಮುಹೂರ್ತ ಮಾಡಲಾಗಿದೆ.

ಕೊನೆಗೂ ಶುರುವಾಯ್ತು ರಾಜಮೌಳಿ-ಮಹೇಶ್ ಬಾಬು ಸಿನಿಮಾ
Ssr Mahesh Babu
ಮಂಜುನಾಥ ಸಿ.
|

Updated on:Jan 02, 2025 | 3:47 PM

Share

ರಾಜಮೌಳಿ ಮತ್ತು ಮಹೇಶ್ ಬಾಬು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂದು ಘೋಷಿಸಿ ಮೂರು ವರ್ಷಗಳೇ ಆದವು. ‘ಆರ್​ಆರ್​ಆರ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಅಧಿಕೃತವಾಗಿ ರಾಜಮೌಳಿಯೇ ತಮ್ಮ ಮುಂದಿನ ಸಿನಿಮಾ ಮಹೇಶ್ ಬಾಬು ಜೊತೆಗೆ ಎಂದು ಘೋಷಿಸಿದ್ದರು. ಆದರೆ ‘ಆರ್​ಆರ್​ಆರ್’ ಸಿನಿಮಾದ ಅಭೂತಪೂರ್ವ ಯಶಸ್ಸು, ಆ ಸಿನಿಮಾ ವಿಶ್ವದಾದ್ಯಂತ ಪರ್ಯಟನೆ ಮಾಡಿದ ಪರಿ, ಆಸ್ಕರ್ ರೇಸ್ ಇತ್ಯಾದಿಗಳಿಂದಾಗಿ ಸಿನಿಮಾ ಪ್ರಾರಂಭವಾಗುವುದು ತಡವಾಗಿತ್ತು. ‘ಆರ್​ಆರ್​ಆರ್’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ಮುಂದಿನ ಸಿನಿಮಾವನ್ನು ಹಾಲಿವುಡ್ ಲೆವೆಲ್​ನಲ್ಲಿಯೇ ಮಾಡಬೇಕು ಎಂದು ರಾಜಮೌಳಿ ಹಠ ತೊಟ್ಟಿದ್ದರಿಂದಾಗಿ ಸಿನಿಮಾ ಇಷ್ಟು ತಡವಾಗಿದೆ.

ಆದರೆ ಕೊನೆಗೂ ಇಂದು (ಜನವರಿ 02) ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾ ಅಧಿಕೃತವಾಗಿ ಆರಂಭವಾಗಿದೆ. ಸಿನಿಮಾದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನಡೆದಿದೆ. ಹೈದರಾಬಾದ್​ನ ಅಲ್ಯುಮೀನಿಯಂ ಫ್ಯಾಕ್ಟರಿಯಲ್ಲಿ ಸಿನಿಮಾದ ಮುಹೂರ್ತ ನಡೆದಿದೆ. ಮುಹೂರ್ತದಲ್ಲಿ ರಾಜಮೌಳಿ ಅವರ ಪತ್ನಿ ರಮಾ ಪಾಲ್ಗೊಂಡಿದ್ದರು. ಮಹೇಶ್ ಬಾಬು ಹಾಗೂ ಅವರ ಕುಟುಂಬದವರು ಸಹ ಪೂಜೆಗೆ ಆಗಮಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಹೇಶ್ ಬಾಬು ನಟನೆಯ 29ನೇ ಸಿನಿಮಾ ಇದಾಗಿದ್ದು, ಈ ಸಿನಿಮಾ ಅರಣ್ಯದಲ್ಲಿ ನಡೆಯುವ ಆಕ್ಷನ್ ಕತೆಯನ್ನು ಒಳಗೊಂಡಿರಲಿದೆ. ಸಿನಿಮಾದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಿಯಾಂಕಾ ಚೋಪ್ರಾ ಜೊತೆಗೆ ಹಾಲಿವುಡ್​ನ ನಟಿಯೊಬ್ಬರು ಸಹ ಸಿನಿಮಾದಲ್ಲಿ ಇರಲಿದ್ದಾರೆ. ಇವರ ಜೊತೆಗೆ ಹಾಲಿವುಡ್​ನ ಖ್ಯಾತ ನಟ ‘ಥೋರ್’ ಖ್ಯಾತಿಯ ಕ್ರಿಸ್ ಹ್ಯಾಮ್ಸ್​ವರ್ತ್​ ಸಹ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರಾಜಮೌಳಿ-ಮಹೇಶ್ ಬಾಬು ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ

ಸ್ಟಿವನ್ ಸ್ಪೀಲ್​ಬರ್ಗ್​ ಅವರ ಹಾಲಿವುಡ್​ ಸಿನಿಮಾ ‘ಇಂಡಿಯಾನಾ ಜೋನ್ಸ್’ ನಿಂದ ಸ್ಪೂರ್ತಿ ಪಡೆದ ಕತೆ ಇದಾಗಿದ್ದು, ರಾಜಮೌಳಿ ಹಲವು ವರ್ಷಗಳಿಂದಲೂ ಒಂದು ‘ಜಂಗಲ್ ಅಡ್ವೇಂಚರ್’ ಸಿನಿಮಾ ಮಾಡಲು ಯೋಜಿಸಿದ್ದರಂತೆ. ಅದರಂತೆ ಈಗ ಮಹೇಶ್ ಬಾಬು ಜೊತೆ ಈ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಅಮೆಜಾನ್ ಕಾಡುಗಳು ಸೇರಿದಂತೆ ಹಲವು ದೇಶಗಳಲ್ಲಿ ನಡೆಯಲಿದೆ. ‘ಮಿಷನ್ ಇಂಪಾಸಿಬಲ್’ ಸಿನಿಮಾಗಳಲ್ಲಿ ಇರುವಂತೆ ಈ ಸಿನಿಮಾದ ಕತೆ ಸಹ ಹಲವು ದೇಶಗಳಲ್ಲಿ ನಡೆಯಲಿದೆಯಂತೆ ಆದರೆ ಅರಣ್ಯದಲ್ಲಿ ನಡೆಯುವ ಸಾಹಸ ಸಿನಿಮಾದ ಪ್ರಧಾನ ಅಂಶವಂತೆ. ಸಿನಿಮಾದ ಕತೆಯನ್ನು ರಾಜಮೌಳಿಯವರ ತಂದೆ ವಿಜಯೇಂದ್ರ ಪ್ರಸಾದ್ ಬರೆದಿದ್ದಾರೆ.

ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ಗಾಗಿ ರಾಜಮೌಳಿ ಸುಮಾರು ಒಂದು ವರ್ಷಕ್ಕೂ ಹೆಚ್ಚು ಸಮಯ ವ್ಯಯಿಸಿದ್ದಾರೆ. ಹಾಲಿವುಡ್​ನ ಹಲವು ಅತ್ಯುತ್ತಮ ವಿಎಫ್​ಎಕ್ಸ್ ಮತ್ತು ಇನ್ನಿತರೆ ಸಂಸ್ಥೆಗಳೊಟ್ಟಿಗೆ ಹಲವು ಸುತ್ತುಗಳ ಮಾತುಕತೆಯನ್ನು ಮಾಡಿದ್ದಾರೆ. ಈ ಸಿನಿಮಾವನ್ನು ಖ್ಯಾತ ಹಾಲಿವುಡ್ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ನಿರ್ಮಿಸುವುದು ಅವರ ಗುರಿ. ಅದಕ್ಕೆ ಇಂದು ದೇವರ ಆಶೀರ್ವಾದ ಪಡೆಯಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Thu, 2 January 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?