AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಶುರುವಾಯ್ತು ರಾಜಮೌಳಿ-ಮಹೇಶ್ ಬಾಬು ಸಿನಿಮಾ

SS Rajamouli-Mahesh Babu: ಎಸ್​ಎಸ್ ರಾಜಮೌಳಿ ಮತ್ತು ಮಹೇಶ್ ಬಾಬು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂದು ಘೋಷಣೆ ಮಾಡಿ ವರ್ಷಗಳೇ ಕಳೆದಿವೆ. ಇದೀಗ ಕೊನೆಗೂ ಇಂದು (ಜನವರಿ 02) ಅಧಿಕೃತವಾಗಿ ಈ ಇಬ್ಬರ ಸಿನಿಮಾ ಸೆಟ್ಟೇರಿದೆ. ಇಂದು ಹೈದರಾಬಾದ್​ನಲ್ಲಿ ಸಿನಿಮಾದ ಮುಹೂರ್ತ ಮಾಡಲಾಗಿದೆ.

ಕೊನೆಗೂ ಶುರುವಾಯ್ತು ರಾಜಮೌಳಿ-ಮಹೇಶ್ ಬಾಬು ಸಿನಿಮಾ
Ssr Mahesh Babu
ಮಂಜುನಾಥ ಸಿ.
|

Updated on:Jan 02, 2025 | 3:47 PM

Share

ರಾಜಮೌಳಿ ಮತ್ತು ಮಹೇಶ್ ಬಾಬು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂದು ಘೋಷಿಸಿ ಮೂರು ವರ್ಷಗಳೇ ಆದವು. ‘ಆರ್​ಆರ್​ಆರ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಅಧಿಕೃತವಾಗಿ ರಾಜಮೌಳಿಯೇ ತಮ್ಮ ಮುಂದಿನ ಸಿನಿಮಾ ಮಹೇಶ್ ಬಾಬು ಜೊತೆಗೆ ಎಂದು ಘೋಷಿಸಿದ್ದರು. ಆದರೆ ‘ಆರ್​ಆರ್​ಆರ್’ ಸಿನಿಮಾದ ಅಭೂತಪೂರ್ವ ಯಶಸ್ಸು, ಆ ಸಿನಿಮಾ ವಿಶ್ವದಾದ್ಯಂತ ಪರ್ಯಟನೆ ಮಾಡಿದ ಪರಿ, ಆಸ್ಕರ್ ರೇಸ್ ಇತ್ಯಾದಿಗಳಿಂದಾಗಿ ಸಿನಿಮಾ ಪ್ರಾರಂಭವಾಗುವುದು ತಡವಾಗಿತ್ತು. ‘ಆರ್​ಆರ್​ಆರ್’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ಮುಂದಿನ ಸಿನಿಮಾವನ್ನು ಹಾಲಿವುಡ್ ಲೆವೆಲ್​ನಲ್ಲಿಯೇ ಮಾಡಬೇಕು ಎಂದು ರಾಜಮೌಳಿ ಹಠ ತೊಟ್ಟಿದ್ದರಿಂದಾಗಿ ಸಿನಿಮಾ ಇಷ್ಟು ತಡವಾಗಿದೆ.

ಆದರೆ ಕೊನೆಗೂ ಇಂದು (ಜನವರಿ 02) ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾ ಅಧಿಕೃತವಾಗಿ ಆರಂಭವಾಗಿದೆ. ಸಿನಿಮಾದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನಡೆದಿದೆ. ಹೈದರಾಬಾದ್​ನ ಅಲ್ಯುಮೀನಿಯಂ ಫ್ಯಾಕ್ಟರಿಯಲ್ಲಿ ಸಿನಿಮಾದ ಮುಹೂರ್ತ ನಡೆದಿದೆ. ಮುಹೂರ್ತದಲ್ಲಿ ರಾಜಮೌಳಿ ಅವರ ಪತ್ನಿ ರಮಾ ಪಾಲ್ಗೊಂಡಿದ್ದರು. ಮಹೇಶ್ ಬಾಬು ಹಾಗೂ ಅವರ ಕುಟುಂಬದವರು ಸಹ ಪೂಜೆಗೆ ಆಗಮಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಹೇಶ್ ಬಾಬು ನಟನೆಯ 29ನೇ ಸಿನಿಮಾ ಇದಾಗಿದ್ದು, ಈ ಸಿನಿಮಾ ಅರಣ್ಯದಲ್ಲಿ ನಡೆಯುವ ಆಕ್ಷನ್ ಕತೆಯನ್ನು ಒಳಗೊಂಡಿರಲಿದೆ. ಸಿನಿಮಾದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಿಯಾಂಕಾ ಚೋಪ್ರಾ ಜೊತೆಗೆ ಹಾಲಿವುಡ್​ನ ನಟಿಯೊಬ್ಬರು ಸಹ ಸಿನಿಮಾದಲ್ಲಿ ಇರಲಿದ್ದಾರೆ. ಇವರ ಜೊತೆಗೆ ಹಾಲಿವುಡ್​ನ ಖ್ಯಾತ ನಟ ‘ಥೋರ್’ ಖ್ಯಾತಿಯ ಕ್ರಿಸ್ ಹ್ಯಾಮ್ಸ್​ವರ್ತ್​ ಸಹ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರಾಜಮೌಳಿ-ಮಹೇಶ್ ಬಾಬು ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ

ಸ್ಟಿವನ್ ಸ್ಪೀಲ್​ಬರ್ಗ್​ ಅವರ ಹಾಲಿವುಡ್​ ಸಿನಿಮಾ ‘ಇಂಡಿಯಾನಾ ಜೋನ್ಸ್’ ನಿಂದ ಸ್ಪೂರ್ತಿ ಪಡೆದ ಕತೆ ಇದಾಗಿದ್ದು, ರಾಜಮೌಳಿ ಹಲವು ವರ್ಷಗಳಿಂದಲೂ ಒಂದು ‘ಜಂಗಲ್ ಅಡ್ವೇಂಚರ್’ ಸಿನಿಮಾ ಮಾಡಲು ಯೋಜಿಸಿದ್ದರಂತೆ. ಅದರಂತೆ ಈಗ ಮಹೇಶ್ ಬಾಬು ಜೊತೆ ಈ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಅಮೆಜಾನ್ ಕಾಡುಗಳು ಸೇರಿದಂತೆ ಹಲವು ದೇಶಗಳಲ್ಲಿ ನಡೆಯಲಿದೆ. ‘ಮಿಷನ್ ಇಂಪಾಸಿಬಲ್’ ಸಿನಿಮಾಗಳಲ್ಲಿ ಇರುವಂತೆ ಈ ಸಿನಿಮಾದ ಕತೆ ಸಹ ಹಲವು ದೇಶಗಳಲ್ಲಿ ನಡೆಯಲಿದೆಯಂತೆ ಆದರೆ ಅರಣ್ಯದಲ್ಲಿ ನಡೆಯುವ ಸಾಹಸ ಸಿನಿಮಾದ ಪ್ರಧಾನ ಅಂಶವಂತೆ. ಸಿನಿಮಾದ ಕತೆಯನ್ನು ರಾಜಮೌಳಿಯವರ ತಂದೆ ವಿಜಯೇಂದ್ರ ಪ್ರಸಾದ್ ಬರೆದಿದ್ದಾರೆ.

ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ಗಾಗಿ ರಾಜಮೌಳಿ ಸುಮಾರು ಒಂದು ವರ್ಷಕ್ಕೂ ಹೆಚ್ಚು ಸಮಯ ವ್ಯಯಿಸಿದ್ದಾರೆ. ಹಾಲಿವುಡ್​ನ ಹಲವು ಅತ್ಯುತ್ತಮ ವಿಎಫ್​ಎಕ್ಸ್ ಮತ್ತು ಇನ್ನಿತರೆ ಸಂಸ್ಥೆಗಳೊಟ್ಟಿಗೆ ಹಲವು ಸುತ್ತುಗಳ ಮಾತುಕತೆಯನ್ನು ಮಾಡಿದ್ದಾರೆ. ಈ ಸಿನಿಮಾವನ್ನು ಖ್ಯಾತ ಹಾಲಿವುಡ್ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ನಿರ್ಮಿಸುವುದು ಅವರ ಗುರಿ. ಅದಕ್ಕೆ ಇಂದು ದೇವರ ಆಶೀರ್ವಾದ ಪಡೆಯಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Thu, 2 January 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ