SS Rajamouli: ‘ಕಬ್ಜ’ ಸಾಂಗ್​ ರಿಲೀಸ್​​​ಗೆ ಬರ್ತಿಲ್ಲ ರಾಜಮೌಳಿ; ಕಾರಣ ತಿಳಿಸಿದ ನಿರ್ದೇಶಕ

ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರು ಫೆಬ್ರವರಿ 3ರಂದು ನಿಧನ ಹೊಂದಿದರು. ರಾಜಮೌಳಿ ಸೇರಿ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದರು. ವಿಶ್ವನಾಥ್ ಅವರನ್ನು ಕಳೆದುಕೊಂಡ ನೋವಿನಿಂದ ರಾಜಮೌಳಿ ಅವರು ಹೊರ ಬಂದಿಲ್ಲ.

SS Rajamouli: ‘ಕಬ್ಜ’ ಸಾಂಗ್​ ರಿಲೀಸ್​​​ಗೆ ಬರ್ತಿಲ್ಲ ರಾಜಮೌಳಿ; ಕಾರಣ ತಿಳಿಸಿದ ನಿರ್ದೇಶಕ
ರಾಜಮೌಳಿ-ಉಪೇಂದ್ರ-ಸುದೀಪ್
Follow us
|

Updated on: Feb 04, 2023 | 11:19 AM

ಉಪೇಂದ್ರ ಹಾಗೂ ಸುದೀಪ್ (Kichcha Sudeep) ನಟನೆಯ ‘ಕಬ್ಜ’ ಸಿನಿಮಾದ (Kabzaa Movie) ಮೊದಲ ಸಾಂಗ್ ರಿಲೀಸ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ರಾತ್ರಿ 7 ಗಂಟೆಗೆ ಈ ಕಾರ್ಯಕ್ರಮ ಆರಂಭ ಆಗಲಿದೆ. ಈಗಾಗಲೇ ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. ಈ ಸಿನಿಮಾದ ಟೀಸರ್ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಈಗ ಚಿತ್ರದ ಟೈಟಲ್ ಟ್ರ್ಯಾಕ್ ಕೇಳಲು ಫ್ಯಾನ್ಸ್ ಕಾದಿದ್ದಾರೆ. ಈ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಬರಬೇಕಿತ್ತು. ಆದರೆ, ಅವರು ಆಗಮಿಸಲು ಸಾಧ್ಯವಾಗುತ್ತಿಲ್ಲ.

ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರು ಫೆಬ್ರವರಿ 3ರಂದು ನಿಧನ ಹೊಂದಿದರು. ರಾಜಮೌಳಿ ಸೇರಿ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದರು. ವಿಶ್ವನಾಥ್ ಅವರನ್ನು ಕಳೆದುಕೊಂಡ ನೋವಿನಿಂದ ರಾಜಮೌಳಿ ಅವರು ಹೊರ ಬಂದಿಲ್ಲ. ಈ ಕಾರಣಕ್ಕೆ ಅವರು ‘ಕಬ್ಜ’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ, ಗಣ್ಯರ ಉಪಸ್ಥಿತಿಯಲ್ಲಿ ಕೆಲವು ಬದಲಾವಣೆ ಆಗಲಿದೆ ಎಂದು ತಂಡ ತಿಳಿಸಿದೆ.

ಭರವಸೆ ನೀಡಿದ ರಾಜಮೌಳಿ

‘ಕಬ್ಜ’ ಸಿನಿಮಾ ತಂಡ ಪ್ರಮೋಷನ್​ಗೆ ದೊಡ್ಡ ಮಟ್ಟದ ಪ್ಲ್ಯಾನ್ ರೂಪಿಸಿಕೊಂಡಿದೆ. ಈ ಕಾರಣಕ್ಕೆ ತಂಡ ಮತ್ತೆ ಹೈದರಾಬಾದ್​ಗೆ ತೆರಳಲಿದೆ.  ಮುಂದಿನ ದಿನಗಳಲ್ಲಿ ‘ಕಬ್ಜ’ ಚಿತ್ರದ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಇದು ಪೂರ್ವ ನಿರ್ಧರಿತ ಕಾರ್ಯಕ್ರಮ ಆಗಿರುವುದರಿಂದ ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರಿಗೆ ಮೌನಾಚರಣೆ ಕೋರಿ ‘ಕಬ್ಜ’ ಸಾಂಗ್ ರಿಲೀಸ್ ಮಾಡಲಾಗುತ್ತಿದೆ.

ಇದನ್ನೂ ಓದಿ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​
Image
ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
Image
Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​
Image
‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

ಹೈಪ್ ಹೆಚ್ಚಿಸಲು ಪ್ಲ್ಯಾನ್

ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ತಂಡ ಸಜ್ಜಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಹಾಡನ್ನು ಬಿಡುಗಡೆ ಮಾಡಲಾಗುವುದು. ಹೈದರಾಬಾದ್​ನಲ್ಲಿ ಫಸ್ಟ್​ ಸಾಂಗ್​ ರಿಲೀಸ್​ ಆಗಲಿದೆ.

ತೆಲುಗು ನೆಲದಲ್ಲಿ ಉಪೇಂದ್ರ, ಸುದೀಪ್​ ಹಾಗೂ ಶ್ರೀಯಾ ಶರಣ್​ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರೂರು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಎಲ್ಲ ಕಾರಣದಿಂದ ಹೈದರಾಬಾದ್​ನಲ್ಲಿ ನಡೆಯಲಿರುವ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಅಭಿಮಾನಿಗಳಲ್ಲಿ ಬಲವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ