AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ‘ಕಬ್ಜ’ ಸಾಂಗ್​ ರಿಲೀಸ್​​​ಗೆ ಬರ್ತಿಲ್ಲ ರಾಜಮೌಳಿ; ಕಾರಣ ತಿಳಿಸಿದ ನಿರ್ದೇಶಕ

ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರು ಫೆಬ್ರವರಿ 3ರಂದು ನಿಧನ ಹೊಂದಿದರು. ರಾಜಮೌಳಿ ಸೇರಿ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದರು. ವಿಶ್ವನಾಥ್ ಅವರನ್ನು ಕಳೆದುಕೊಂಡ ನೋವಿನಿಂದ ರಾಜಮೌಳಿ ಅವರು ಹೊರ ಬಂದಿಲ್ಲ.

SS Rajamouli: ‘ಕಬ್ಜ’ ಸಾಂಗ್​ ರಿಲೀಸ್​​​ಗೆ ಬರ್ತಿಲ್ಲ ರಾಜಮೌಳಿ; ಕಾರಣ ತಿಳಿಸಿದ ನಿರ್ದೇಶಕ
ರಾಜಮೌಳಿ-ಉಪೇಂದ್ರ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 04, 2023 | 11:19 AM

Share

ಉಪೇಂದ್ರ ಹಾಗೂ ಸುದೀಪ್ (Kichcha Sudeep) ನಟನೆಯ ‘ಕಬ್ಜ’ ಸಿನಿಮಾದ (Kabzaa Movie) ಮೊದಲ ಸಾಂಗ್ ರಿಲೀಸ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ರಾತ್ರಿ 7 ಗಂಟೆಗೆ ಈ ಕಾರ್ಯಕ್ರಮ ಆರಂಭ ಆಗಲಿದೆ. ಈಗಾಗಲೇ ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. ಈ ಸಿನಿಮಾದ ಟೀಸರ್ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಈಗ ಚಿತ್ರದ ಟೈಟಲ್ ಟ್ರ್ಯಾಕ್ ಕೇಳಲು ಫ್ಯಾನ್ಸ್ ಕಾದಿದ್ದಾರೆ. ಈ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಬರಬೇಕಿತ್ತು. ಆದರೆ, ಅವರು ಆಗಮಿಸಲು ಸಾಧ್ಯವಾಗುತ್ತಿಲ್ಲ.

ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರು ಫೆಬ್ರವರಿ 3ರಂದು ನಿಧನ ಹೊಂದಿದರು. ರಾಜಮೌಳಿ ಸೇರಿ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದರು. ವಿಶ್ವನಾಥ್ ಅವರನ್ನು ಕಳೆದುಕೊಂಡ ನೋವಿನಿಂದ ರಾಜಮೌಳಿ ಅವರು ಹೊರ ಬಂದಿಲ್ಲ. ಈ ಕಾರಣಕ್ಕೆ ಅವರು ‘ಕಬ್ಜ’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ, ಗಣ್ಯರ ಉಪಸ್ಥಿತಿಯಲ್ಲಿ ಕೆಲವು ಬದಲಾವಣೆ ಆಗಲಿದೆ ಎಂದು ತಂಡ ತಿಳಿಸಿದೆ.

ಭರವಸೆ ನೀಡಿದ ರಾಜಮೌಳಿ

‘ಕಬ್ಜ’ ಸಿನಿಮಾ ತಂಡ ಪ್ರಮೋಷನ್​ಗೆ ದೊಡ್ಡ ಮಟ್ಟದ ಪ್ಲ್ಯಾನ್ ರೂಪಿಸಿಕೊಂಡಿದೆ. ಈ ಕಾರಣಕ್ಕೆ ತಂಡ ಮತ್ತೆ ಹೈದರಾಬಾದ್​ಗೆ ತೆರಳಲಿದೆ.  ಮುಂದಿನ ದಿನಗಳಲ್ಲಿ ‘ಕಬ್ಜ’ ಚಿತ್ರದ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಇದು ಪೂರ್ವ ನಿರ್ಧರಿತ ಕಾರ್ಯಕ್ರಮ ಆಗಿರುವುದರಿಂದ ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರಿಗೆ ಮೌನಾಚರಣೆ ಕೋರಿ ‘ಕಬ್ಜ’ ಸಾಂಗ್ ರಿಲೀಸ್ ಮಾಡಲಾಗುತ್ತಿದೆ.

ಇದನ್ನೂ ಓದಿ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​
Image
ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
Image
Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​
Image
‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

ಹೈಪ್ ಹೆಚ್ಚಿಸಲು ಪ್ಲ್ಯಾನ್

ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ತಂಡ ಸಜ್ಜಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಹಾಡನ್ನು ಬಿಡುಗಡೆ ಮಾಡಲಾಗುವುದು. ಹೈದರಾಬಾದ್​ನಲ್ಲಿ ಫಸ್ಟ್​ ಸಾಂಗ್​ ರಿಲೀಸ್​ ಆಗಲಿದೆ.

ತೆಲುಗು ನೆಲದಲ್ಲಿ ಉಪೇಂದ್ರ, ಸುದೀಪ್​ ಹಾಗೂ ಶ್ರೀಯಾ ಶರಣ್​ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರೂರು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಎಲ್ಲ ಕಾರಣದಿಂದ ಹೈದರಾಬಾದ್​ನಲ್ಲಿ ನಡೆಯಲಿರುವ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಅಭಿಮಾನಿಗಳಲ್ಲಿ ಬಲವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್