AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬಜೆಟ್ ಸಿನಿಮಾ ನೋಡಿ ಮನಸಾರೆ ಕೊಂಡಾಡಿದ ರಾಜಮೌಳಿ

Tourist Family: ಎಸ್​ಎಸ್ ರಾಜಮೌಳಿ ಭಾರಿ ಬಜೆಟ್ ಸಿನಿಮಾಗಳನ್ನೆ ನಿರ್ದೇಶನ ಮಾಡುತ್ತಾರೆ. ಆದರೆ ಇದೀಗ ಅವರು ಒಂದು ಸಣ್ಣ ಬಜೆಟ್​ನ ಯಾವುದೇ ದೊಡ್ಡ ಸ್ಟಾರ್ ನಟ-ನಟಿಯರು ಇಲ್ಲದ ಸಿನಿಮಾದ ಬಗ್ಗೆ ಟ್ವೀಟ್ ಮಾಡಿದ್ದು ಇದೊಂದು ಅದ್ಭುತವಾದ ಸಿನಿಮಾ ಎಂದು ಕೊಂಡಾಡಿದ್ದಾರೆ. ಅಷ್ಟಕ್ಕೂ ಯಾವುದು ಆ ಸಿನಿಮಾ?

ಕಡಿಮೆ ಬಜೆಟ್ ಸಿನಿಮಾ ನೋಡಿ ಮನಸಾರೆ ಕೊಂಡಾಡಿದ ರಾಜಮೌಳಿ
Tourist Family
ಮಂಜುನಾಥ ಸಿ.
|

Updated on: May 20, 2025 | 12:45 PM

Share

ಎಸ್​ಎಸ್ ರಾಜಮೌಳಿ (SS Rajamouli) ಎಲ್ಲ ದೊಡ್ಡ ಬಜೆಟ್ ಸಿನಿಮಾಗಳನ್ನೇ ಮಾಡುವುದು. ಈಗಂತೂ ಮಹೇಶ್ ಬಾಬು ಜೊತೆಗೆ ಭಾರತದಲ್ಲಿ ಯಾರೂ ನಿರ್ಮಾಣ ಮಾಡದಷ್ಟು ದೊಡ್ಡ ಬಜೆಟ್​ನ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತದ್ದಾರೆ. ಭಾರಿ ಬಜೆಟ್​ನ ನಿರ್ದೇಶಕ ರಾಜಮೌಳಿ ಇತ್ತೀಚೆಗೆ ಬಿಡುಗಡೆ ಆದ ಒಂದು ಸಣ್ಣ ಬಜೆಟ್​ನ ಸಿನಿಮಾವನ್ನು ಬಲುವಾಗಿ ಕೊಂಡಾಡಿದ್ದಾರೆ. ಭಾರಿ ಅದ್ಧೂರಿ ಸಿನಿಮಾಗಳನ್ನು ನಿರ್ದೇಶಿಸಿರುವ ರಾಜಮೌಳಿ, ಈ ಸಣ್ಣ ಬಜೆಟ್​ನ ಸಿನಿಮಾವನ್ನು ‘ಅದ್ಭುತ ಸಿನಿಮ್ಯಾಟಿಕ್ ಅನುಭವ’ ಎಂದಿರುವುದು ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.

ಮೇ 1 ರಂದು ‘ಟೂರಿಸ್ಟ್ ಫ್ಯಾಮಿಲಿ’ ಹೆಸರಿನ ಸಣ್ಣ ಬಜೆಟ್​ನ ತಮಿಳು ಸಿನಿಮಾ ಒಂದು ಬಿಡುಗಡೆ ಆಗಿದೆ. ಯಾವುದೇ ಕಮರ್ಶಿಯಲ್ ಎಲಿಮೆಂಟ್​ಗಳು ಇಲ್ಲದ ಒಂದು ಸಣ್ಣ ಕುಟುಂಬದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಸಿಮ್ರನ್ ನಾಯಕಿ, ‘ನಾಡೋಡಿಗಲ್’ ಖ್ಯಾತಿಯ ಸಶಿಕುಮಾರ್ ನಾಯಕ. ಶ್ರೀಲಂಕಾದಿಂದ ತಪ್ಪಿಸಿಕೊಂಡು ಭಾರತಕ್ಕೆ ಬರುವ ಸಣ್ಣ ಕುಟುಂಬದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಸಿನಿಮಾ ನೋಡಿರುವ ಎಸ್​ಎಸ್ ರಾಜಮೌಳಿ ಸಿನಿಮಾ ಬಗ್ಗೆ ಟ್ವೀಟ್ ಮಾಡಿದ್ದು, ‘ಹೃದಯಕ್ಕೆ ಬೆಚ್ಚನೆ ಅನುಭವ ಕೊಡುವ ಸಿನಿಮಾ, ಕಚಗುಳಿ ಇಡುವ ಹಾಸ್ಯಮಯ ಸಿನಿಮಾ. ಇದೊಂದು ಅದ್ಭುತವಾದ ಸಿನಿಮ್ಯಾಟಿಕ್ ಅನುಭವವನ್ನು ನೀಡುತ್ತದೆ. ಸಿನಿಮಾ ಅನ್ನು ಮಿಸ್ ಮಾಡಿಕೊಳ್ಳಬೇಡಿ ಎಂದು ಬರೆದಿದ್ದಾರೆ. ರಾಜಮೌಳಿಯ ಟ್ವೀಟ್​ಗೆ ‘ಟೂರಿಸ್ಟ್ ಫ್ಯಾಮಿಲಿ’ ಸಿನಿಮಾದ ನಿರ್ದೇಶಕ ಪ್ರತಿಕ್ರಿಯೆ ನೀಡಿದ್ದು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:‘ಆರ್​ಆರ್​​ಆರ್ 2’ ಮಾಡಲ್ಲ’: ನಟರ ಕಾಟಕ್ಕೆ ಹೈರಾಣಾದ ರಾಜಮೌಳಿ

‘ಟೂರಿಸ್ಟ್ ಫ್ಯಾಮಿಲಿ’ ಸಿನಿಮಾವನ್ನು ಅಭಿಷಾನ್ ಜೀವಿಂತ್ ನಿರ್ದೇಶನ ಮಾಡಿದ್ದಾರೆ. ಕತೆಯೂ ಅವರದ್ದೆ. ಸಿನಿಮಾ ನಿರ್ಮಾಣಕ್ಕೆ ಕೇವಲ 14 ಕೋಟಿ ಬಜೆಟ್ ಹಾಕಲಾಗಿದೆ. ಮೇ 1 ರಂದು ಬಿಡುಗಡೆ ಆಗಿರುವ ಈ ಸಿನಿಮಾ ಈಗಾಗಲೇ 20 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ತಮಿಳುನಾಡಿನಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಈಗ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ರಾಜಮೌಳಿ ಪ್ರಸ್ತುತ ಮಹೇಶ್ ಬಾಬು ನಟನೆಯ ಸಿನಿಮಾ ಅನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಸುಮಾರು ಸಾವಿರ ಕೋಟಿ ಬಜೆಟ್ ಹಾಕಲಾಗುತ್ತಿದೆ. ಸಿನಿಮಾಕ್ಕಾಗಿ ಹಲವು ಹಾಲಿವುಡ್ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಇದೊಂದು ಅಡ್ವೇಂಚರ್ ಆಕ್ಷನ್ ಸಿನಿಮಾ ಆಗಿದ್ದು ಭಾರತ ಮಾತ್ರವಲ್ಲದೆ ಹಲವು ದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಸಹ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ