Vikrant Rona: ‘ವಿಕ್ರಾಂತ್​ ರೋಣ’ ಚಿತ್ರ ಮೆಚ್ಚಿದ ರಾಜಮೌಳಿ; ಸ್ಟಾರ್​ ನಿರ್ದೇಶಕನ ಗಮನ ಸೆಳೆದಿದೆ ಒಂದು ವಿಶೇಷ ಪಾತ್ರ

Rajamouli | Kichcha Sudeep: ಎಸ್​ಎಸ್​ ರಾಜಮೌಳಿ ಅವರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ತುಂಬ ಇಷ್ಟ ಆಗಿದೆ. ಅವರ ಮಾತುಗಳಿಗೆ ಕಿಚ್ಚ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

Vikrant Rona: ‘ವಿಕ್ರಾಂತ್​ ರೋಣ’ ಚಿತ್ರ ಮೆಚ್ಚಿದ ರಾಜಮೌಳಿ; ಸ್ಟಾರ್​ ನಿರ್ದೇಶಕನ ಗಮನ ಸೆಳೆದಿದೆ ಒಂದು ವಿಶೇಷ ಪಾತ್ರ
ರಾಜಮೌಳಿ, ಕಿಚ್ಚ ಸುದೀಪ್
Follow us
| Updated By: ಮದನ್​ ಕುಮಾರ್​

Updated on: Jul 31, 2022 | 1:08 PM

ಕನ್ನಡದ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿರುವ ಈ ಚಿತ್ರವನ್ನು ಹೊರರಾಜ್ಯದ ಮಂದಿ ಇಷ್ಟಪಟ್ಟಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಿಂದ ಕಿಚ್ಚ ಸುದೀಪ್​ (Kichcha Sudeep) ವೃತ್ತಿಜೀವನಕ್ಕೆ ಹೊಸ ಮೈಲೇಜ್​ ಸಿಕ್ಕಿದೆ. ಇಡೀ ತಂಡದ ಶ್ರಮಕ್ಕೆ ಸೂಕ್ತ ಪ್ರತಿಫಲ ದೊರಕುತ್ತಿದೆ. ಬಾಕ್ಸ್​ ಆಫೀಸ್​ನಲ್ಲೂ ಉತ್ತಮ ಕಮಾಯಿ ಆಗುತ್ತಿದೆ. ಈಗ ಸ್ಟಾರ್​ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ‘ವಿಕ್ರಾಂತ್​ ರೋಣ’ ಚಿತ್ರವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಖುಷಿಪಟ್ಟಿರುವ ಅವರು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಭಾಸ್ಕರ್​ ಎಂಬ ಪಾತ್ರದ ಬಗ್ಗೆ ಅವರು ವಿಶೇಷವಾಗಿ ಪ್ರಸ್ತಾಪ ಮಾಡಿದ್ದಾರೆ.

ರಾಜಮೌಳಿ ಮತ್ತು ಕಿಚ್ಚ ಸುದೀಪ್​ ನಡುವೆ ಅನೇಕ ವರ್ಷಗಳಿಂದ ಸ್ನೇಹ ಇದೆ. ‘ಈಗ’, ‘ಬಾಹುಬಲಿ’ ಸಿನಿಮಾಗಳಲ್ಲಿ ಅವರಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ‘ವಿಕ್ರಾಂತ್​ ರೋಣ’ ಚಿತ್ರವನ್ನು ರಾಜಮೌಳಿ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ತೆಲುಗು ಪ್ರೇಕ್ಷಕರ ವಲಯದಲ್ಲಿ ‘ವಿಕ್ರಾಂತ್​ ರೋಣ’ ಬಗ್ಗೆ ಕ್ರೇಜ್​ ಜಾಸ್ತಿ ಆಗಿದೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Image
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

‘ವಿಕ್ರಾಂತ್​ ರೋಣ ಸಿನಿಮಾದ ಗೆಲುವಿಗಾಗಿ ಕಿಚ್ಚ ಸುದೀಪ್​ ಅವರಿಗೆ ಅಭಿನಂದನೆಗಳು. ಈ ರೀತಿ ಕಥೆಯನ್ನು ಆಯ್ಕೆ ಮಾಡಿಕೊಳ್ಳಲು ಧೈರ್ಯ ಮತ್ತು ನಂಬಿಕೆ ಬೇಕು. ನಿಮ್ಮ ಕಾರ್ಯಕ್ಕೆ ಯಶಸ್ಸು ಸಿಕ್ಕಿದೆ. ಈ ಚಿತ್ರದಲ್ಲಿ ಪ್ರೀ-ಕ್ಲೈಮ್ಯಾಕ್ಸ್​ ದೃಶ್ಯ ತುಂಬ ಮಹತ್ವದಾಗಿದೆ. ಗುಡ್ಡಿಯ ಸ್ನೇಹಿತ ಭಾಸ್ಕರ್​ ಬಗ್ಗೆ ವಿಶೇಷವಾಗಿ ಹೇಳಲೇಬೇಕು’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ. ಸಿನಿಮಾದಲ್ಲಿ ಭಾಸ್ಕರ್​ ಎಂಬ ಪಾತ್ರ ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ವಿಶೇಷವಾಗಿರುವ ಆ ಪಾತ್ರದ ಬಗ್ಗೆ ತಿಳಿಯಲು ಸಿನಿಮಾ ನೋಡಬೇಕು.

ರಾಜಮೌಳಿ ಅವರ ಮಾತುಗಳಿಗೆ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್​. ನಿಮ್ಮಿಂದ ಈ ಮಾತುಗಳನ್ನು ಕೇಳಲು ಹೆಮ್ಮೆ ಆಗುತ್ತದೆ. ಭಾಸ್ಕರ್​ ಸೇರಿದಂತೆ ನಮ್ಮ ಇಡೀ ತಂಡದಿಂದ ನಿಮಗೆ ಧನ್ಯವಾದ ಮತ್ತು ಪ್ರೀತಿಯ ಅಪ್ಪುಗೆ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

3ಡಿಯಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್​ ಮಂಜು ನಿರ್ಮಾಣ ಮಾಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದರು ನಟಿಸಿದ್ದಾರೆ. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನದ ಹಾಡುಗಳಿಂದ ಈ ಚಿತ್ರದ ಮೆರುಗು ಹೆಚ್ಚಿದೆ.

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ