Vikrant Rona: ‘ವಿಕ್ರಾಂತ್​ ರೋಣ’ ಚಿತ್ರ ಮೆಚ್ಚಿದ ರಾಜಮೌಳಿ; ಸ್ಟಾರ್​ ನಿರ್ದೇಶಕನ ಗಮನ ಸೆಳೆದಿದೆ ಒಂದು ವಿಶೇಷ ಪಾತ್ರ

| Updated By: ಮದನ್​ ಕುಮಾರ್​

Updated on: Jul 31, 2022 | 1:08 PM

Rajamouli | Kichcha Sudeep: ಎಸ್​ಎಸ್​ ರಾಜಮೌಳಿ ಅವರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ತುಂಬ ಇಷ್ಟ ಆಗಿದೆ. ಅವರ ಮಾತುಗಳಿಗೆ ಕಿಚ್ಚ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

Vikrant Rona: ‘ವಿಕ್ರಾಂತ್​ ರೋಣ’ ಚಿತ್ರ ಮೆಚ್ಚಿದ ರಾಜಮೌಳಿ; ಸ್ಟಾರ್​ ನಿರ್ದೇಶಕನ ಗಮನ ಸೆಳೆದಿದೆ ಒಂದು ವಿಶೇಷ ಪಾತ್ರ
ರಾಜಮೌಳಿ, ಕಿಚ್ಚ ಸುದೀಪ್
Follow us on

ಕನ್ನಡದ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿರುವ ಈ ಚಿತ್ರವನ್ನು ಹೊರರಾಜ್ಯದ ಮಂದಿ ಇಷ್ಟಪಟ್ಟಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಿಂದ ಕಿಚ್ಚ ಸುದೀಪ್​ (Kichcha Sudeep) ವೃತ್ತಿಜೀವನಕ್ಕೆ ಹೊಸ ಮೈಲೇಜ್​ ಸಿಕ್ಕಿದೆ. ಇಡೀ ತಂಡದ ಶ್ರಮಕ್ಕೆ ಸೂಕ್ತ ಪ್ರತಿಫಲ ದೊರಕುತ್ತಿದೆ. ಬಾಕ್ಸ್​ ಆಫೀಸ್​ನಲ್ಲೂ ಉತ್ತಮ ಕಮಾಯಿ ಆಗುತ್ತಿದೆ. ಈಗ ಸ್ಟಾರ್​ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ‘ವಿಕ್ರಾಂತ್​ ರೋಣ’ ಚಿತ್ರವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಖುಷಿಪಟ್ಟಿರುವ ಅವರು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಭಾಸ್ಕರ್​ ಎಂಬ ಪಾತ್ರದ ಬಗ್ಗೆ ಅವರು ವಿಶೇಷವಾಗಿ ಪ್ರಸ್ತಾಪ ಮಾಡಿದ್ದಾರೆ.

ರಾಜಮೌಳಿ ಮತ್ತು ಕಿಚ್ಚ ಸುದೀಪ್​ ನಡುವೆ ಅನೇಕ ವರ್ಷಗಳಿಂದ ಸ್ನೇಹ ಇದೆ. ‘ಈಗ’, ‘ಬಾಹುಬಲಿ’ ಸಿನಿಮಾಗಳಲ್ಲಿ ಅವರಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ‘ವಿಕ್ರಾಂತ್​ ರೋಣ’ ಚಿತ್ರವನ್ನು ರಾಜಮೌಳಿ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ತೆಲುಗು ಪ್ರೇಕ್ಷಕರ ವಲಯದಲ್ಲಿ ‘ವಿಕ್ರಾಂತ್​ ರೋಣ’ ಬಗ್ಗೆ ಕ್ರೇಜ್​ ಜಾಸ್ತಿ ಆಗಿದೆ.

ಇದನ್ನೂ ಓದಿ
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

‘ವಿಕ್ರಾಂತ್​ ರೋಣ ಸಿನಿಮಾದ ಗೆಲುವಿಗಾಗಿ ಕಿಚ್ಚ ಸುದೀಪ್​ ಅವರಿಗೆ ಅಭಿನಂದನೆಗಳು. ಈ ರೀತಿ ಕಥೆಯನ್ನು ಆಯ್ಕೆ ಮಾಡಿಕೊಳ್ಳಲು ಧೈರ್ಯ ಮತ್ತು ನಂಬಿಕೆ ಬೇಕು. ನಿಮ್ಮ ಕಾರ್ಯಕ್ಕೆ ಯಶಸ್ಸು ಸಿಕ್ಕಿದೆ. ಈ ಚಿತ್ರದಲ್ಲಿ ಪ್ರೀ-ಕ್ಲೈಮ್ಯಾಕ್ಸ್​ ದೃಶ್ಯ ತುಂಬ ಮಹತ್ವದಾಗಿದೆ. ಗುಡ್ಡಿಯ ಸ್ನೇಹಿತ ಭಾಸ್ಕರ್​ ಬಗ್ಗೆ ವಿಶೇಷವಾಗಿ ಹೇಳಲೇಬೇಕು’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ. ಸಿನಿಮಾದಲ್ಲಿ ಭಾಸ್ಕರ್​ ಎಂಬ ಪಾತ್ರ ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ವಿಶೇಷವಾಗಿರುವ ಆ ಪಾತ್ರದ ಬಗ್ಗೆ ತಿಳಿಯಲು ಸಿನಿಮಾ ನೋಡಬೇಕು.

ರಾಜಮೌಳಿ ಅವರ ಮಾತುಗಳಿಗೆ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್​. ನಿಮ್ಮಿಂದ ಈ ಮಾತುಗಳನ್ನು ಕೇಳಲು ಹೆಮ್ಮೆ ಆಗುತ್ತದೆ. ಭಾಸ್ಕರ್​ ಸೇರಿದಂತೆ ನಮ್ಮ ಇಡೀ ತಂಡದಿಂದ ನಿಮಗೆ ಧನ್ಯವಾದ ಮತ್ತು ಪ್ರೀತಿಯ ಅಪ್ಪುಗೆ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

3ಡಿಯಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್​ ಮಂಜು ನಿರ್ಮಾಣ ಮಾಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದರು ನಟಿಸಿದ್ದಾರೆ. ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನದ ಹಾಡುಗಳಿಂದ ಈ ಚಿತ್ರದ ಮೆರುಗು ಹೆಚ್ಚಿದೆ.