AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿಗೆ ರಾಜಮೌಳಿ ಸಾಂತ್ವನ; ಆರ್​ಆರ್​ಆರ್​ ನಿರ್ದೇಶಕ ಹೇಳಿದ್ದೇನು?

‘ಜನನಿ’ ಸಾಂಗ್​ ರಿಲೀಸ್​ ಮಾಡೋಕೆ ಚಿತ್ರದ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ಸಾಂಗ್​ ರಿಲೀಸ್ ಮಾಡಿದ ನಂತರದಲ್ಲಿ ಅವರು ನೇರವಾಗಿ ಪುನೀತ್​ ಮನೆಗೆ ತೆರಳಿದ್ದಾರೆ.

ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿಗೆ ರಾಜಮೌಳಿ ಸಾಂತ್ವನ; ಆರ್​ಆರ್​ಆರ್​ ನಿರ್ದೇಶಕ ಹೇಳಿದ್ದೇನು?
ರಾಜಮೌಳಿ
TV9 Web
| Edited By: |

Updated on:Nov 26, 2021 | 4:53 PM

Share

ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ ನಂತರದಲ್ಲಿ ಸಾಕಷ್ಟು ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ. ಕೇವಲ ಸ್ಯಾಂಡಲ್​​ವುಡ್​ ಮಾತ್ರವಲ್ಲದೆ, ನೆರೆಯ ರಾಜ್ಯದಿಂದಲೂ ಸ್ಟಾರ್​ಗಳು ಆಗಮಿಸಿದ್ದರು. ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಕೂಡ ಇಂದು (ನವೆಂಬರ್ 26) ಪುನೀತ್​ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಸ್ಟಾರ್​ ಕಲಾವಿದರ ಸಮಾಗಮ ಸಿನಿಮಾದಲ್ಲಿದೆ. ಈಗಾಗಲೇ ರಿಲೀಸ್​ ಆದ ಸಿನಿಮಾದ ಟೀಸರ್​ ಹಾಗೂ ಪೋಸ್ಟರ್​​ಗಳು ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಮಾಡಿದೆ. ಈ ಸಿನಿಮಾದ ‘ಜನನಿ’ ಸಾಂಗ್​ ರಿಲೀಸ್​ ಮಾಡೋಕೆ ಚಿತ್ರದ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ಸಾಂಗ್​ ರಿಲೀಸ್ ಮಾಡಿದ ನಂತರದಲ್ಲಿ ಅವರು ನೇರವಾಗಿ ಪುನೀತ್​ ಮನೆಗೆ ತೆರಳಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಇದ್ದಾರೆ. ಪ್ರಚಾರಕ್ಕೆ ಹಾಗೂ ಸಿನಿಮಾದ ಕೆಲಸಕ್ಕೆ ಅವರು ನಾನಾ ಕಡೆಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಬೆಂಗಳೂರಿಗೆ ಬರೋಕೆ ಸಾಧ್ಯವಾಗಿರಲಿಲ್ಲ. ಈಗ ‘ಆರ್​ಆರ್​ಆರ್​’ ಸಾಂಗ್ ರಿಲೀಸ್​ ಕಾರ್ಯಕ್ರಮಕ್ಕೆ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿಯೇ ಪುನೀತ್​ ಮನೆಗೆ ಭೇಟಿ ನೀಡಿದರು.

ಪುನೀತ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ರಾಜಮೌಳಿ, ‘ಪುನೀತ್ ಅಗಲಿ ಹಲವು ದಿನಗಳೇ ಆಗಿದ್ದರೂ ಎಲ್ಲರೂ ಶಾಕ್​ನಲ್ಲಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರನ್ನು ಇಲ್ಲೇ ಭೇಟಿ‌ ಮಾಡಿದ್ದೆ. ಒಟ್ಟು ಎರಡು ಬಾರಿ ಮೀಟ್ ಮಾಡಿದ್ದೇನೆ ಅಷ್ಟೇ. ಆದರೂ, ಅವರು ಕುಟುಂಬದವರ ತರಹ ನನ್ನನ್ನು ಟ್ರೀಟ್ ಮಾಡಿದ್ದರು. ಒಬ್ಬ ಸ್ಟಾರ್ ಆಗಿ ನನ್ನ ಜೊತೆ ಮಾತನಾಡಲಿಲ್ಲ. ಅವರು ಮಾತನಾಡುವಾಗ ಯಾವಾಗಲೂ ತಗ್ಗಿಬಗ್ಗಿ ಮಾತನಾಡುತ್ತಿದ್ದರು. ತುಂಬಾ ನೋವು‌ ಆಗುತ್ತದೆ. ಎಷ್ಟೆಲ್ಲ ಜನಕ್ಕೆ‌ ಸಹಾಯ ಮಾಡುತ್ತಿದ್ದರು ಎಂಬುದು  ಅವರ ನಿಧನದ ನಂತರ ಗೊತ್ತಾಯಿತು’ ಎಂದರು. ರಾಜಮೌಳಿ ಪತ್ನಿ ರಮಾ ಕೂಡ ಈ ಸಂದರ್ಭದಲ್ಲಿದ್ದರು.

ಇದನ್ನೂ ಓದಿ:  ಕನ್ನಡ ಮಾತನಾಡೋಕೆ ಪ್ರಯತ್ನಿಸುತ್ತಿದ್ದೇನೆ, ದಯವಿಟ್ಟು ಅಡ್ಜಸ್ಟ್​ ಮಾಡಿಕೊಳ್ಳಿ: ರಾಜಮೌಳಿ

SS Rajamouli: ಕನ್ನಡಿಗರಲ್ಲಿ ಎರಡು ವಿಚಾರಕ್ಕೆ ಕ್ಷಮೆ ಕೇಳಿ ಮಾತು ಆರಂಭಿಸಿದ ಎಸ್​ಎಸ್​ ರಾಜಮೌಳಿ

Published On - 4:35 pm, Fri, 26 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್