AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜಾಮೀನು ರದ್ದು ಮಾಡಲು ಅರ್ಜಿ: ನೀಡಿದ ಏಳು ಕಾರಣಗಳು

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮೊರೆ ಹೋಗಿದ್ದು, ಜಾಮೀನು ರದ್ದು ಮಾಡಲು ಏಳು ಕಾರಣಗಳನ್ನು ನೀಡಿದೆ. ಇಲ್ಲಿದೆ ಮಾಹಿತಿ.

ದರ್ಶನ್ ಜಾಮೀನು ರದ್ದು ಮಾಡಲು ಅರ್ಜಿ: ನೀಡಿದ ಏಳು ಕಾರಣಗಳು
Darshan Thoogudeepa Renuka
ಮಂಜುನಾಥ ಸಿ.
|

Updated on: Jan 24, 2025 | 10:43 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಹೈಕೋರ್ಟ್​ ನಲ್ಲಿ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿಯ ಎಲ್ಲ ಆರೋಪಿಗಳಿಗೆ ಜಾಮೀನು ದೊರೆತಿದೆ. ಇದೀಗ ಪೊಲೀಸರು, ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ದರ್ಶನ್​ ಹಾಗೂ ಪ್ರಕರಣದ ಇತರೆ ಆರೋಪಿಗಳಾದ ಪವಿತ್ರಾ ಗೌಡ, ಜಗದೀಶ್‌, ಅನುಕುಮಾರ್‌, ನಾಗರಾಜ, ಎಂ ಲಕ್ಷ್ಮಣ್‌, ಪ್ರದೋಶ್‌ ನೀಡಲಾಗಿರುವ ಜಾಮೀನುನನ್ನು ಏಕೆ ರದ್ದು ಮಾಡಬೇಕು ಎಂದು ಏಳು ಕಾರಣಗಳನ್ನು ನೀಡಿದೆ.

ಕಾರಣ 1

ದರ್ಶನ್‌ ಅವರು ಸಿನಿಮಾ ನಟ/ಸೆಲಿಬ್ರೆಟಿಯಾಗಿದ್ದು, ರಾಜ್ಯದ ಒಳಗೆ ಮತ್ತು ಹೊರಗೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂಬುದನ್ನು ಹೈಕೋರ್ಟ್‌ ಪರಿಗಣಿಸಿಲ್ಲ.

ಕಾರಣ 2

ಸತ್ರ ನ್ಯಾಯಾಲಯದಲ್ಲಿ ಪ್ರಕರಣವು ಇನ್ನೂ ಆರೋಪ ನಿಗದಿ ಹಂತಕ್ಕೆ ಬಂದಿಲ್ಲ. ಅದಾಗ್ಯೂ, ಆರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಿದ್ದು, ವಿಚಾರಣೆಯು ವಿಳಂಬವಾಗುವುದರಿಂದ ಜಾಮೀನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್‌ ಹೇಳಿದೆ. ಹೈಕೋರ್ಟ್‌ನ ಈ ಅಭಿಪ್ರಾಯವು ಅವಸರದಿಂದ ಕೂಡಿರುವುದರಿಂದ ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿದೆ.

ಕಾರಣ 3

ಆರೋಪಿಗಳು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬಲವಂತವಾಗಿ ಕಾರಿನಲ್ಲಿ ಬೆಂಗಳೂರಿಗೆ ಕರೆತಂದಿದ್ದಾರೆ. ಇದು ಐಪಿಸಿ ಸೆಕ್ಷನ್‌ 364ರ ಅಡಿ ಅಪರಾಧವಾಗಿದ್ದು, ಇದನ್ನು ಪರಿಗಣಿಸಲು ಹೈಕೋರ್ಟ್‌ ವಿಫಲವಾಗಿದೆ.

ಕಾರಣ 4

ಲಭ್ಯ ಸಾಕ್ಷಿಯ ದಾಖಲೆಗಳನ್ನು ಪರಿಗಣಿಸದೇ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವುದನ್ನು ಹೈಕೋರ್ಟ್‌ ಸಮರ್ಥಿಸಿಲ್ಲ. 76 ಮತ್ತು 91ನೇ ಪ್ರತ್ಯಕ್ಷ ಸಾಕ್ಷಿಗಳು ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿ ಆರೋಪಿಗಳು ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿರುವುದರ ಸಂಬಂಧ ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿಕೆ ನೀಡಿರುವುದನ್ನು ಹೈಕೋರ್ಟ್‌ ಪರಿಗಣಿಸಲು ವಿಫಲವಾಗಿದೆ.

ಕಾರಣ 5

ಸಾಂದರ್ಭಿಕ ಸಾಕ್ಷಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು, ಆರೋಪಿಗಳ ಬಟ್ಟೆ/ ಶೂ/ಚಪ್ಪಲಿಗಳಲ್ಲಿ ಸಂತ್ರಸ್ತನ ವಂಶವಾಹಿ ಗುರುತು, ಕರೆ ದಾಖಲೆ ವಿಶ್ಲೇಷಣೆ, ಸೆಲ್‌ ಟವರ್‌ ಸ್ಥಳ, ಸಿಸಿಟಿವಿ ತುಣುಕುಗಳು, ಅಪರಾಧದ ಸ್ಥಳದಲ್ಲಿ ಆರೋಪಿಗಳ ಓಡಾಟ, ಆರೋಪಿಗಳ ಮೊಬೈಲ್‌ನಲ್ಲಿ ಸಂತ್ರಸ್ತನ ಫೋಟೊಗಳು ಪತ್ತೆಯಾಗಿರುವುದನ್ನು ಹೈಕೋರ್ಟ್‌ ಪರಿಗಣಿಸಲು ವಿಫಲವಾಗಿದೆ.

ಕಾರಣ 6

ಎಲ್ಲಾ ಆರೋಪಿಗಳಿಗೆ ಒಂದೇ ತೆರನಾದ ಬಂಧನದ ಆಧಾರ ನೀಡಲಾಗಿದೆ. ಇದು ಹೈಕೋರ್ಟ್‌ನ ತೀರ್ಪಿಗೆ ಅನುಗುಣವಾಗಿಲ್ಲ ಎಂದು ಹೇಳಿದೆ . ಕಾನೂನಿನ ಪ್ರಕಾರ ತನಿಖಾಧಿಕಾರಿಯು ಆರೋಪಿಗಳಿಗೆ ಏಕೆ ಬಂಧಿಸಲಾಗುತ್ತಿದೆ ಎಂಬುದರ ಸಾಮಾನ್ಯ ವಿಚಾರಗಳನ್ನು ತಿಳಿಸಿದರೆ ಸಾಕಾಗಿದೆ.

ಕಾರಣ 7

ಮಧ್ಯಂತರ ಪರಿಹಾರದ ಭಾಗವಾಗಿ ಮಧ್ಯಂತರ ಏಕಪಕ್ಷೀಯ ಆದೇಶದ ಮೂಲಕ ಜಾಮೀನು ಆದೇಶವನ್ನು ತಡೆ ಹಿಡಿಯಬೇಕು ಎಂದು ರಾಜ್ಯ ಸರ್ಕಾರ ಮನವಿ. ಇದಿಷ್ಟು ಕಾರಣಗಳನ್ನ ನೀಡಿ ಆರೋಪಿಗಳ ಜಾಮೀನು ರದ್ದಿಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಇನ್ನಷ್ಟೆ ಪ್ರಕರಣದ ವಿಚಾರಣೆ ನಡೆಯಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು