AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ. ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ […]

ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?
ನಿಖಿಲ್​-ರೇವತಿ ದಂಪತಿ
ಸಾಧು ಶ್ರೀನಾಥ್​
|

Updated on: May 05, 2020 | 12:43 PM

Share

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ.

ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ ಮದುವೆ ಸಮಾರಂಭ ನಡೆದಿದೆ. ಮದುವೆಯಲ್ಲಿ 80-95 ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೂ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿತ್ತು.

ಮದುವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸಲಾಗಿತ್ತು. ಆದರೆ ಮಾಂಗಲ್ಯ ಧಾರಣೆಯ ವೇಳೆ ಮಾತ್ರ ಮಾಸ್ಕ್ ಧರಿಸಿಲ್ಲ. ಕುಟುಂಬಸ್ಥರು ಕೂಡ ಆಗ ಮಾತ್ರ ಮಾಸ್ಕ್ ಧರಿಸಿಲ್ಲದಿರುವುದು ಕಂಡುಬಂದಿದೆ ಎಂದು ಕೋರ್ಟ್‌ಗೆ ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ್ ವಿವರಣೆ ನೀಡಿದ್ದಾರೆ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ