AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜು ವೆಡ್ಸ್ ಗೀತ 2’ ಬಿಡುಗಡೆಗೆ ಇದ್ದ ತೊಡಕು ನಿವಾರಣೆ: ವಿವರ ನೀಡಿದ ನಾಗಶೇಖರ್

Sanju Weds Geetha 2: ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಜನವರಿ 10ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಬಿಡುಗಡೆ ವಿರುದ್ಧ ಹೈದರಾಬಾದ್ ನ್ಯಾಯಾಲಯ ತಡೆ ನೀಡಿತ್ತು. ಇದೀಗ ಪತ್ರಿಕಾಗೋಷ್ಠಿ ನಡೆಸಿರುವ ನಾಗಶೇಖರ್, ಸಿನಿಮಾದ ವಿರುದ್ಧ ಹೇರಲಾಗಿದ್ದ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಶೀಘ್ರವೇ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ತಡೆ ಆಜ್ಞೆ ನೀಡಲು ಕಾರಣ ಏನಾಗಿತ್ತು ಎಂಬುದನ್ನು ವಿವರಿಸಿದ್ದಾರೆ.

‘ಸಂಜು ವೆಡ್ಸ್ ಗೀತ 2’ ಬಿಡುಗಡೆಗೆ ಇದ್ದ ತೊಡಕು ನಿವಾರಣೆ: ವಿವರ ನೀಡಿದ ನಾಗಶೇಖರ್
Sanju Weds Geetha 2
ಮಂಜುನಾಥ ಸಿ.
|

Updated on: Jan 12, 2025 | 7:36 AM

Share

ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟಿಸಿ ನಾಗಶೇಖರ್ ನಿರ್ದೇಶನ ಮಾಡಿರುವ ‘ಸಂಜು ವೆಡ್ಸ್ ಗೀತ 2’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ಬಿಡುಗಡೆಗೆ ಹೈದರಾಬಾದ್ ಸಿಟಿ ಸಿವಿಲ್ ನ್ಯಾಯಾಲಯ ತಡೆ ಆದೇಶ ನೀಡಿತ್ತು. ನಾಗಶೇಖರ್ ನಿರ್ದೇಶನ ಮಾಡಿದ್ದ ತೆಲುಗಿನ ಸಿನಿಮಾ ಒಂದರ ಫೈನ್ಯಾನ್ಶಿಯರ್ ಒಬ್ಬರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ಆಗದಂತೆ ತಡೆ ಆಜ್ಞೆ ತಂದಿದ್ದರು. ಆದರೆ ಈಗ ತಡೆ ಆಜ್ಞೆ ತೆರವಾಗಿದೆ. ಈ ವಿಷಯವನ್ನು ಚಿತ್ರತಂಡ, ಮಾಧ್ಯಮಗಳ ಬಳಿ ಹಂಚಿಕೊಂಡಿದೆ.

ಜನವರಿ 10ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು, ಆದರೆ ತಡೆಯಾಜ್ಞೆ ತಂದಿದ್ದ ಕಾರಣಕ್ಕೆ ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾದ ಮೇಲೆ ತಡೆಯಾಜ್ಞೆ ಬೀಳಲು ಕಾರಣ ಏನೆಂದು ವಿವರಿಸಿದ ನಾಗಶೇಖರ್, ‘ಗೆಳೆಯ ಭಾವನಾ ರವಿ ಜೊತೆ ಸೇರಿ ತೆಲುಗಿನಲ್ಲಿ ‘ಗುರ್ತುಂದಾ ಸೀತಾಕಾಲಂ’ ಹೆಸರಿನ ಸಿನಿಮಾ ಮಾಡಿದ್ದೆ. ಆ ಸಿನಿಮಾದ ಫೈನ್ಯಾನ್ಶಿಯರ್ ಈ ಕೇಸು ಹಾಕಿದ್ದರು. ‘ಸಂಜು ವೆಡ್ಸ್ ಗೀತಾ 2’ ನನ್ನದೇ ಬ್ಯಾನರ್ ಸಿನಿಮಾ ಎಂದುಕೊಂಡು ಅವರು ಕೇಸು ಹಾಕಿದ್ದರು. ಹಳೆಯ ವಿಡಿಯೋ ನೋಡಿ, ಅವರು ಇದು ನನ್ನ ಸಿನಿಮಾ ಅಂದುಕೊಂಡಿದ್ದರು ಹಾಗಾಗಿ ಸ್ಟೇ ತಂದಿದ್ದರು’ ಎಂದಿದ್ದಾರೆ.

ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಬೀಳುತ್ತಿದ್ದಂತೆ ಕೆಲವರು ಕೆಲವು ರೀತಿ ಮಾತನಾಡುತ್ತಿದ್ದಾರೆ ಎಂದ ನಾಗಶೇಖರ್, ‘ನಿರ್ಮಾಪಕರು ಆರು ಕೋಟಿ ಬ್ಯಾಲೆನ್ಸ್ ಉಳಿಸಿಕೊಂಡಿದ್ದಾರೆ ಎಂದೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ನಾವು ನ್ಯಾಯಾಲಯದಲ್ಲಿ ನಾಲ್ಕು ಕೋಟಿ ಶೂರಿಟಿ ಕೊಟ್ಟು ಸಿನಿಮಾದ ತಡೆ ಆಜ್ಞೆ ತೆರವು ಮಾಡಿಸಿದ್ದೀವಿ. ನಾಲ್ಕು ಕೋಟಿ ಕೊಟ್ಟವರಿಗೆ ಆರು ಕೋಟಿ ಹೆಚ್ಚಿನದಲ್ಲ. ಈ ಸಿನಿಮಾಕ್ಕೆ 15 ಕೋಟಿ ಬಂಡವಾಳ ಹಾಕಲಾಗಿದೆ. ಹಾಗಿರುವಾಗ ಇದೆಲ್ಲ ಬಹಳ ದೊಡ್ಡ ಮೊತ್ತ ಅಲ್ಲ. ಇಲ್ಲ ಸಲ್ಲದ ವಿಷಯಗಳನ್ನು ಸಿನಿಮಾದ ಬಗ್ಗೆ ಹಬ್ಬಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್; ಏನಿದು ಕಿರಿಕ್?

‘ಒಂದು ಮದ್ವೆ ಮಾಡಬೇಕಾದಾಗ ಎಷ್ಟು ವಿಘ್ನ ಬರುತ್ತೆ ಅಂತಾ ಗೊತ್ತಿದ್ದರೂ ಈ ಟೈಟಲ್ ಇಟ್ಟು ಸಿನಿಮಾ ಮಾಡಿದ್ದೀನಿ, ಸಿನಿಮಾ ಮಾಡುವಾಗ ಬೀದಿಲಿ ನಿಂತಿದ್ದೀನಿ. ಕಷ್ಟ ಪಟ್ಟಿದ್ದೀನಿ. ಆದರೆ ಸಂಜು ವೆಡ್ಸ್ ಗೀತಾ ಸಿನಿಮಾ ಕೊಟ್ಟ ಸಕ್ಸಸ್ ನಾ ಮರೆಯೊಲ್ಲ. ಈ ಸಿನಿಮಾ ಸಹ ಅದೇ ಯಶಸ್ಸು ಕೊಡುವ ನಿರೀಕ್ಷೆ ಇದೆ’ ಎಂದರು. ನಟ ಶ್ರೀನಗರ ಕಿಟ್ಟಿ ಮಾತನಾಡಿ, ‘ಸಂಜು ವೆಡ್ಸ್ ಗೀತಾ 2’ ಸಿನಿಮಾಕ್ಕೆ ತಡೆಯಾಜ್ಞೆ ದೊರೆಯುತ್ತಿದ್ದಂತೆ, ಕೆಲವರು ಕೆಲವು ರೀತಿ ಮಾತನಾಡಿ, ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಲು ಪ್ರಾರಂಭ ಮಾಡಿದ್ದಾರೆ. ದಯವಿಟ್ಟು ಹಾಗೆ ಮಾಡುವುದು ಬೇಡ ಎಂದು ಮನವಿ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ