AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜು ವೆಡ್ಸ್ ಗೀತ 2’ ಬಿಡುಗಡೆಗೆ ಇದ್ದ ತೊಡಕು ನಿವಾರಣೆ: ವಿವರ ನೀಡಿದ ನಾಗಶೇಖರ್

Sanju Weds Geetha 2: ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಜನವರಿ 10ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಬಿಡುಗಡೆ ವಿರುದ್ಧ ಹೈದರಾಬಾದ್ ನ್ಯಾಯಾಲಯ ತಡೆ ನೀಡಿತ್ತು. ಇದೀಗ ಪತ್ರಿಕಾಗೋಷ್ಠಿ ನಡೆಸಿರುವ ನಾಗಶೇಖರ್, ಸಿನಿಮಾದ ವಿರುದ್ಧ ಹೇರಲಾಗಿದ್ದ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಶೀಘ್ರವೇ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ತಡೆ ಆಜ್ಞೆ ನೀಡಲು ಕಾರಣ ಏನಾಗಿತ್ತು ಎಂಬುದನ್ನು ವಿವರಿಸಿದ್ದಾರೆ.

‘ಸಂಜು ವೆಡ್ಸ್ ಗೀತ 2’ ಬಿಡುಗಡೆಗೆ ಇದ್ದ ತೊಡಕು ನಿವಾರಣೆ: ವಿವರ ನೀಡಿದ ನಾಗಶೇಖರ್
Sanju Weds Geetha 2
ಮಂಜುನಾಥ ಸಿ.
|

Updated on: Jan 12, 2025 | 7:36 AM

Share

ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟಿಸಿ ನಾಗಶೇಖರ್ ನಿರ್ದೇಶನ ಮಾಡಿರುವ ‘ಸಂಜು ವೆಡ್ಸ್ ಗೀತ 2’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ಬಿಡುಗಡೆಗೆ ಹೈದರಾಬಾದ್ ಸಿಟಿ ಸಿವಿಲ್ ನ್ಯಾಯಾಲಯ ತಡೆ ಆದೇಶ ನೀಡಿತ್ತು. ನಾಗಶೇಖರ್ ನಿರ್ದೇಶನ ಮಾಡಿದ್ದ ತೆಲುಗಿನ ಸಿನಿಮಾ ಒಂದರ ಫೈನ್ಯಾನ್ಶಿಯರ್ ಒಬ್ಬರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ಆಗದಂತೆ ತಡೆ ಆಜ್ಞೆ ತಂದಿದ್ದರು. ಆದರೆ ಈಗ ತಡೆ ಆಜ್ಞೆ ತೆರವಾಗಿದೆ. ಈ ವಿಷಯವನ್ನು ಚಿತ್ರತಂಡ, ಮಾಧ್ಯಮಗಳ ಬಳಿ ಹಂಚಿಕೊಂಡಿದೆ.

ಜನವರಿ 10ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು, ಆದರೆ ತಡೆಯಾಜ್ಞೆ ತಂದಿದ್ದ ಕಾರಣಕ್ಕೆ ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾದ ಮೇಲೆ ತಡೆಯಾಜ್ಞೆ ಬೀಳಲು ಕಾರಣ ಏನೆಂದು ವಿವರಿಸಿದ ನಾಗಶೇಖರ್, ‘ಗೆಳೆಯ ಭಾವನಾ ರವಿ ಜೊತೆ ಸೇರಿ ತೆಲುಗಿನಲ್ಲಿ ‘ಗುರ್ತುಂದಾ ಸೀತಾಕಾಲಂ’ ಹೆಸರಿನ ಸಿನಿಮಾ ಮಾಡಿದ್ದೆ. ಆ ಸಿನಿಮಾದ ಫೈನ್ಯಾನ್ಶಿಯರ್ ಈ ಕೇಸು ಹಾಕಿದ್ದರು. ‘ಸಂಜು ವೆಡ್ಸ್ ಗೀತಾ 2’ ನನ್ನದೇ ಬ್ಯಾನರ್ ಸಿನಿಮಾ ಎಂದುಕೊಂಡು ಅವರು ಕೇಸು ಹಾಕಿದ್ದರು. ಹಳೆಯ ವಿಡಿಯೋ ನೋಡಿ, ಅವರು ಇದು ನನ್ನ ಸಿನಿಮಾ ಅಂದುಕೊಂಡಿದ್ದರು ಹಾಗಾಗಿ ಸ್ಟೇ ತಂದಿದ್ದರು’ ಎಂದಿದ್ದಾರೆ.

ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಬೀಳುತ್ತಿದ್ದಂತೆ ಕೆಲವರು ಕೆಲವು ರೀತಿ ಮಾತನಾಡುತ್ತಿದ್ದಾರೆ ಎಂದ ನಾಗಶೇಖರ್, ‘ನಿರ್ಮಾಪಕರು ಆರು ಕೋಟಿ ಬ್ಯಾಲೆನ್ಸ್ ಉಳಿಸಿಕೊಂಡಿದ್ದಾರೆ ಎಂದೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ನಾವು ನ್ಯಾಯಾಲಯದಲ್ಲಿ ನಾಲ್ಕು ಕೋಟಿ ಶೂರಿಟಿ ಕೊಟ್ಟು ಸಿನಿಮಾದ ತಡೆ ಆಜ್ಞೆ ತೆರವು ಮಾಡಿಸಿದ್ದೀವಿ. ನಾಲ್ಕು ಕೋಟಿ ಕೊಟ್ಟವರಿಗೆ ಆರು ಕೋಟಿ ಹೆಚ್ಚಿನದಲ್ಲ. ಈ ಸಿನಿಮಾಕ್ಕೆ 15 ಕೋಟಿ ಬಂಡವಾಳ ಹಾಕಲಾಗಿದೆ. ಹಾಗಿರುವಾಗ ಇದೆಲ್ಲ ಬಹಳ ದೊಡ್ಡ ಮೊತ್ತ ಅಲ್ಲ. ಇಲ್ಲ ಸಲ್ಲದ ವಿಷಯಗಳನ್ನು ಸಿನಿಮಾದ ಬಗ್ಗೆ ಹಬ್ಬಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್; ಏನಿದು ಕಿರಿಕ್?

‘ಒಂದು ಮದ್ವೆ ಮಾಡಬೇಕಾದಾಗ ಎಷ್ಟು ವಿಘ್ನ ಬರುತ್ತೆ ಅಂತಾ ಗೊತ್ತಿದ್ದರೂ ಈ ಟೈಟಲ್ ಇಟ್ಟು ಸಿನಿಮಾ ಮಾಡಿದ್ದೀನಿ, ಸಿನಿಮಾ ಮಾಡುವಾಗ ಬೀದಿಲಿ ನಿಂತಿದ್ದೀನಿ. ಕಷ್ಟ ಪಟ್ಟಿದ್ದೀನಿ. ಆದರೆ ಸಂಜು ವೆಡ್ಸ್ ಗೀತಾ ಸಿನಿಮಾ ಕೊಟ್ಟ ಸಕ್ಸಸ್ ನಾ ಮರೆಯೊಲ್ಲ. ಈ ಸಿನಿಮಾ ಸಹ ಅದೇ ಯಶಸ್ಸು ಕೊಡುವ ನಿರೀಕ್ಷೆ ಇದೆ’ ಎಂದರು. ನಟ ಶ್ರೀನಗರ ಕಿಟ್ಟಿ ಮಾತನಾಡಿ, ‘ಸಂಜು ವೆಡ್ಸ್ ಗೀತಾ 2’ ಸಿನಿಮಾಕ್ಕೆ ತಡೆಯಾಜ್ಞೆ ದೊರೆಯುತ್ತಿದ್ದಂತೆ, ಕೆಲವರು ಕೆಲವು ರೀತಿ ಮಾತನಾಡಿ, ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಲು ಪ್ರಾರಂಭ ಮಾಡಿದ್ದಾರೆ. ದಯವಿಟ್ಟು ಹಾಗೆ ಮಾಡುವುದು ಬೇಡ ಎಂದು ಮನವಿ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ