AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangli: ಬಳ್ಳಾರಿಯಲ್ಲಿ ಸಿಂಗರ್​ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ; ಪೊಲೀಸರಿಂದ ಲಘು ಲಾಠಿ ಪ್ರಹಾರ

Singer Mangli | Bellary Festival: ಬಳ್ಳಾರಿ ಉತ್ಸವದಲ್ಲಿ ಭಾಗಿಯಾಗಲು ಗಾಯಕಿ ಮಂಗ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಅವರನ್ನು ನೋಡಲು ಯುವಕರು ಮುಗಿಬಿದ್ದರು.

Mangli: ಬಳ್ಳಾರಿಯಲ್ಲಿ ಸಿಂಗರ್​ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ; ಪೊಲೀಸರಿಂದ ಲಘು ಲಾಠಿ ಪ್ರಹಾರ
ಮಂಗ್ಲಿ
TV9 Web
| Edited By: |

Updated on:Jan 22, 2023 | 1:24 PM

Share

ಮೊದಲ ಬಾರಿಗೆ ನಡೆದ ಗಣಿ ನಾಡು ಬಳ್ಳಾರಿ ಉತ್ಸವ (Bellary Festival) ಅದ್ದೂರಿಯಾಗಿ ಜರುಗಿತು. ಎರಡು ದಿನಗಳ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು. ಉತ್ಸವದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​ ಪತ್ನಿ ಅಶ್ವಿನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಉತ್ಸವಕ್ಕೆ ಮೆರಗು ತಂದರು. ಮೊದಲ ದಿನದ ಉತ್ಸವದಲ್ಲಿ ಗಾಯಕಿಯರಾದ ಮಂಗ್ಲಿ (Singer Mangli) ಹಾಗೂ ಎಂಡಿ ಪಲ್ಲವಿ ಅವರ ಗಾಯನ ಪೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಆ್ಯಂಕರ್ ಅನುಶ್ರೀ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡದ ಮನರಂಜನಾ ಕಾರ್ಯಕ್ರಮಗಳಿಗೆ ಬಳ್ಳಾರಿ ಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಆದರೆ ಈ ವೇಳೆ ಕೆಲವರು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಗಾಯಕಿ ಮಂಗ್ಲಿ ಅವರ ಕಾರಿನ ಗಾಜು ಒಡೆಯಲಾಗಿದೆ.

ಜನವರಿ 21ರ ರಾತ್ರಿ ನಡೆದ ಘಟನೆ:

ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಶನಿವಾರ (ಜ.21) ರಾತ್ರಿ ಈ ಘಟನೆ ನಡೆದಿದೆ. ಬಳ್ಳಾರಿ ಉತ್ಸವದ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಂಗರ್ ಮಂಗ್ಲಿ ಬಂದಿದ್ದರು. ವೇದಿಕೆ ಮೇಲೆ ಹಾಡುಗಳನ್ನು ಹೇಳಿ ವಾಪಸ್ ತೆರಳುವಾಗ ಅವರನ್ನು ನೋಡಲು ಯುವಕರು ಮುಗಿಬಿದ್ದರು. ವೇದಿಕೆ ಹಿಂಭಾಗದಲ್ಲಿದ್ದ ಮೇಕಪ್ ಟೆಂಟ್​ ಒಳಗೆ ಪುಂಡರು ನುಗ್ಗಿದರು. ಕೂಡಲೇ ಪೋಲಿಸರಿಂದ ಲಘು ಲಾಠಿ ಪ್ರಹಾರ ನಡೆಸಲಾಯಿತು. ಮಂಗ್ಲಿ ಹೋಗುತ್ತಿದ್ದ ಕಾರಿಗೆ ಕಲ್ಲು ಎಸೆಯಲಾಗಿದೆ.

ಕನ್ನಡದ ಸಿನಿಮಾಗೆ ಮಂಗ್ಲಿ ಹೀರೋಯಿನ್​:

ಬಿಗ್​ ಬಾಸ್​ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಅವರು ‘ಪಾದರಾಯ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ‘ಮಾಸ್ತಿಗುಡಿ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಶೂಟಿಂಗ್​ ಶುರುವಾಗುವುದಕ್ಕೂ ಮುನ್ನ ನಾಗಶೇಖರ್ ಅವರು 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ಅವರಿಂದ ಹನುಮ ಮಾಲೆ ಹಾಕಿಸಿಕೊಂಡಿರುವ ನಾಗಶೇಖರ್ ಅಂಜನಾದ್ರಿ ಬೆಟ್ಟದಲ್ಲಿ ವ್ರತ ಆಚರಿಸುತ್ತಿದ್ದಾರೆ. ಈ ಚಿತ್ರಕ್ಕೆ ಗಾಯಕಿ ಮಂಗ್ಲಿ ಅವರು ಹೀರೋಯಿನ್​ ಆಗಿ ಸೆಲೆಕ್ಟ್​ ಆಗಿದ್ದಾರೆ.

ಇದನ್ನೂ ಓದಿ
Image
Mangli: ಮೊದಲ ಬಾರಿಗೆ ಮಂಗ್ಲಿ ಕಂಠದಲ್ಲಿ ತುಳು ಹಾಡು; ‘ಬಿರ್ದ್‌ದ ಕಂಬಳ’ ಚಿತ್ರಕ್ಕೆ ಸಾಂಗ್​​ ರೆಕಾರ್ಡಿಂಗ್​
Image
Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ
Image
Singer Mangli: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ‘ವಂದೇ ಮಾತರಂ’ ಘೋಷ
Image
Singer Mangli: ‘ಏಕ್​ ಲವ್ ಯಾ’ ಸುದ್ದಿಗೋಷ್ಠಿಯಲ್ಲಿ ಪುನೀತ್​ ನೆನೆದು ಕಣ್ಣೀರು ಹಾಕಿದ ಗಾಯಕಿ ಮಂಗ್ಲಿ

ಇದನ್ನೂ ಓದಿ: Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ

‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡ ತೆಲುಗಿನ ಗಾಯಕಿ ಮಂಗ್ಲಿ ಅವರು ನಂತರ ಕನ್ನಡದ ಅನೇಕ ಹಾಡುಗಳಿಗೆ ಧ್ವನಿ ನೀಡಿದರು. ಈಗ ಹೀರೋಯಿನ್​ ಆಗಿ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ನೀಡುತ್ತಿದ್ದಾರೆ. ಆ ಮೂಲಕ ಅವರ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ‘ಪಾದರಾಯ’ ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಈ ಚಿತ್ರದಲ್ಲಿ ಮಂಗ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Sun, 22 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್